ರೈತರ ದಿನಾಚರಣೆ ಅಂಗವಾಗಿ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ
ಮೈಸೂರು

ರೈತರ ದಿನಾಚರಣೆ ಅಂಗವಾಗಿ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ

December 24, 2019

ಮೈಸೂರು, ಡಿ.23(ಆರ್‍ಕೆಬಿ)- ರೈತರ ದಿನಾಚರಣೆ ಅಂಗವಾಗಿ ಮೈಸೂರಿನ ಗನ್‍ಹೌಸ್ ಬಳಿಯ ಕುವೆಂಪು ಉದ್ಯಾ ನವನದಲ್ಲಿ ರೈತರು ಮೌನಾಚರಣೆ ಮೂಲಕ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಿ ದರು. ಕಬ್ಬು ಬೆಳೆಗಾರರ ಸಂಘದ ಆಶ್ರಯ ದಲ್ಲಿ ಸಭೆ ಸೇರಿದ ಮೈಸೂರು, ಚಾಮ ರಾಜನಗರ ಜಿಲ್ಲೆಯ ರೈತರು, ಹುತಾತ್ಮ ಅನ್ನದಾತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ನಡೆದ ಸಾಲಮನ್ನಾ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಸರ್ಕಾರ ಪ್ರತಿ ವರ್ಷ ರೈತರ ದಿನವನ್ನು ಆಚರಿಸು ತ್ತದೆ. ಆದರೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಗಳು ಹೆಚ್ಚುತ್ತಲೇ ಇವೆ. ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ರೈತರು ಕಂಗಾ ಲಾಗಿದ್ದಾರೆ. ರೈತರ ಸಮಸ್ಯೆಗಳಿಗೆ ಇಂದಿಗೂ ಪರಿಹಾರ ಕಂಡುಕೊಳ್ಳಲಾಗಿಲ್ಲ. ರೈತ ಉಳಿದರೆ ದೇಶ ಉಳಿಯುತ್ತದೆ ಎಂಬು ದನ್ನು ಸರ್ಕಾರ ಅರಿತು ರೈತರ ಸಮಸ್ಯೆ ಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅತ್ತಹಳ್ಳಿ ದೇವ ರಾಜ್ ಇನ್ನಿತರರು ಉಪಸ್ಥಿತರಿದ್ದರು.

Translate »