ಎಂ.ಸಿ.ನರಸಿಂಹನ್‍ಗೆ ಶ್ರದ್ಧಾಂಜಲಿ
ಮೈಸೂರು

ಎಂ.ಸಿ.ನರಸಿಂಹನ್‍ಗೆ ಶ್ರದ್ಧಾಂಜಲಿ

June 13, 2020

ಮೈಸೂರು, ಜೂ.12(ಆರ್‍ಕೆಬಿ)- ಕರ್ನಾಟಕ ಹೈಕೋರ್ಟಿನ ಹಿರಿಯ ನ್ಯಾಯವಾದಿ, ಮಾಜಿ ಶಾಸಕ, ಎಐಟಿಯುಸಿ ರಾಜ್ಯ ಸಮಿತಿ ಮಾಜಿ ಅಧ್ಯಕ್ಷ ಎಂ.ಸಿ.ನರಸಿಂಹನ್ ನಿಧನಕ್ಕೆ ಶೋಕಿಸಿರುವ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಜಿಲ್ಲಾ ಸಮಿತಿ ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿತು.

ನರಸಿಂಹನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶೇಷಾದ್ರಿ, ನರಸಿಂಹನ್ ಅವರದ್ದು ಬಹುಮುಖ ಪ್ರತಿಭೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದವರು. ಕಾರ್ಮಿಕರ ಪರ ಕಾನೂನುಗಳ ಜಾರಿಗೆ ಹೋರಾಡಿದವರು. ಅಸಂಘಟಿತ ಕಾರ್ಮಿಕರ ಪರ ಹೋರಾಟ ಸೇರಿದಂತೆ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದವರು. ಅವರ ಅಗಲಿಕೆಯಿಂದ ಓರ್ವ ಹೋರಾಟಗಾರರನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

Translate »