ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಮೈಸೂರು

ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

December 12, 2019

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದಿಂದ ಬೆಂಗ ಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆ ಎದುರಿಸುತ್ತಿರುವ ಅವರು, ನಿಯಮಿತವಾಗಿ ಆರೋಗ್ಯ ತಪಾಸಣೆಗೆಂದು ಇಂದು ಆಸ್ಪತ್ರೆಗೆ ತೆರಳಿದಾಗ ಅವರ ಹೃದಯಕ್ಕೆ ರಕ್ತ ಪರಿ ಚಲನೆ ಸರಿಯಾಗಿ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆಂದು ಸಿದ್ದರಾಮಯ್ಯ ಪುತ್ರ, ಶಾಸಕ ಡಾ.ಯತೀಂದ್ರ ತಿಳಿಸಿದ್ದಾರೆ. ಸಿದ್ದ ರಾಮಯ್ಯ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಒಳಗಾಗಿದ್ದಾರೆ. ಡಾ.ರಮೇಶ್ ಅವರು, ತಮ್ಮ ತಂದೆಯ ಆರೋಗ್ಯದ ಬಗ್ಗೆ ನೋಡಿ ಕೊಳ್ಳುತ್ತಿದ್ದರು. ಈ ಹಿಂದೆಯೂ ಕೂಡ ಅವರಿಗೆ ಈ ಚಿಕಿತ್ಸೆ ನೀಡಲಾಗಿತ್ತು. ವೈದ್ಯರ ಸಲಹೆಯ ಮೇರೆಗೆ ಇಂದೂ ಕೂಡ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಒಳಗಾಗಿದ್ದು, ನಾಳೆ ಬೆಳಿಗ್ಗೆವರೆಗೆ ತುರ್ತು ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯಲಿದ್ದು, ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಡಾ. ಯತೀಂದ್ರ ತಿಳಿಸಿದ್ದಾರೆ.

Translate »