ಸಿದ್ದರಾಮಯ್ಯ ಮತ್ತೆ ಸಿಎಂ; ಬೆಂಗಳೂರು ಶಾಸಕರ ಒತ್ತಾಯ
ಮೈಸೂರು

ಸಿದ್ದರಾಮಯ್ಯ ಮತ್ತೆ ಸಿಎಂ; ಬೆಂಗಳೂರು ಶಾಸಕರ ಒತ್ತಾಯ

July 8, 2019

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಇಬ್ಬರು ಕಾಂಗ್ರೆಸ್ ಶಾಸಕರು ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್, ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ಮುನಿರತ್ನ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿ, ರೇವಣ್ಣ ಉಪಮುಖ್ಯಮಂತ್ರಿಯಾಗಲಿ ಎಂದು ಈ ಶಾಸಕರು ಒತ್ತಾಯ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ರಾಮ ಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ, ಅಂಜಲಿ ನಿಂಬಾಳ್ಕರ್, ಕೆ.ಸುಧಾಕರ್ ಮತ್ತಿತರ ಹಲವು ನಾಯಕರು ಕೂಡಾ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

Translate »