ಪಕ್ಷೇತರರ ಸೆಳೆದ ಸಿದ್ದರಾಮಯ್ಯ
ಮೈಸೂರು

ಪಕ್ಷೇತರರ ಸೆಳೆದ ಸಿದ್ದರಾಮಯ್ಯ

May 26, 2019

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬೆಂಬಲಿಗರು ಆಪರೇಷನ್ ಕಮಲಕ್ಕೆ ಮುಂದಾಗಿರುವ ಬೆನ್ನಲ್ಲೇ ಸರ್ಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಪ್ರತಿಪಕ್ಷವನ್ನು ಬೆಂಬ ಲಿಸಿದ್ದ ಶಾಸಕರನ್ನು ಮತ್ತೆ ಸೆಳೆದು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪಕ್ಷದ ವರಿಷ್ಠರು ಮತ್ತು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ವಾಗ್ದಾನದಂತೆ ಇಬ್ಬರು ಪಕ್ಷೇತರ ಸದಸ್ಯರನ್ನು ಮತ್ತೆ ಹಿಂದಕ್ಕೆ ಕರೆತಂದಿದ್ದಾರೆ. ಈಗಾಗಲೇ ನಾಗೇಶ್ ಕಾಂಗ್ರೆಸ್ ಸೇರಿಯಾಗಿದೆ, ಮತ್ತೊಬ್ಬ ಪಕ್ಷೇತರ ಸದಸ್ಯ ಆರ್. ಶಂಕರ್ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡು ಮತ್ತೆ ಮರಳುವ ನಿರ್ಧಾರ ತಿಳಿಸಿದ್ದಾರೆ. ಶಂಕರ್ ಅವರನ್ನು ದೆಹಲಿಗೆ ಕರೆಸಿಕೊಂಡ ಸಿದ್ದ ರಾಮಯ್ಯ ಅಲ್ಲಿಯೇ ಮಾತುಕತೆ ನಡೆಸಿ, ರಾಜ್ಯದ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿಸಿದ್ದಾರೆ.

Translate »