ಸಿದ್ಧಗಂಗಾ ಶ್ರೀಗಳ ನಾಮಫಲಕ ಅನಾವರಣ
ಮೈಸೂರು

ಸಿದ್ಧಗಂಗಾ ಶ್ರೀಗಳ ನಾಮಫಲಕ ಅನಾವರಣ

February 18, 2019

ಮೈಸೂರು: ಮೈಸೂರಿನ ಕುವೆಂಪುನಗರದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಮೈಸೂರು ಮಹಾನಗರ ಪಾಲಿಕೆ ಅನುದಾನದಲ್ಲಿ ನಿರ್ಮಿಸಿರುವ ಸಿದ್ಧಗಂಗಾ ಶ್ರೀಗಳಾದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಾಮಫಲಕವನ್ನು ಮೇಯರ್ ಪುಷ್ಪಲತಾ ಜಗನ್ನಾಥ್ ಭಾನುವಾರ ಅನಾವರಣಗೊಳಿಸಿದರು.

ಇಲ್ಲಿನ ಜಗದಾಂಬ ಪೆಟ್ರೋಲ್ ಬಂಕ್ ಆವರಣದಲ್ಲಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಭಕ್ತ ವೃಂದದ ಹಮ್ಮಿಕೊಂಡಿದ್ದ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ನಾಮಫಲಕವನ್ನೂ ಅನಾವರಣಗೊಳಿಸಲಾಯಿತು. ಮಹಾನಗರ ಪಾಲಿಕೆಯ 98 ಸಾವಿರ ರೂ. ಅನುದಾನದಲ್ಲಿ ಶಿವಕುಮಾರ ಸ್ವಾಮೀಜಿಯವರ ನಾಮಫಲಕ ವನ್ನು ಇಲ್ಲಿ ನಿರ್ಮಿಸಲಾಗಿದೆ. ಕನಕಪುರ ದೇಗುಲ ಮಠಾಧ್ಯಕ್ಷ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಹೊಸ ಮಠದ ಶ್ರೀ ಚಿದಾನಂದ ಸ್ವಾಮೀಜಿ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದರು. ಶಿವಕುಮಾರ ಸ್ವಾಮೀಜಿಯವರ ಕುರಿತು ಪ್ರಾಧ್ಯಾಪಕ ಡಾ.ನಂದೀಶ ಹಂಚೆ ಉಪನ್ಯಾಸ ನೀಡಿದರು. ಪಾಲಿಕೆ ಸದಸ್ಯರಾದ ಶಿವಕುಮಾರ್, ಸುನಂದ ಪಾಲನೇತ್ರ, ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ (ವರ್ಗವಾಗಿ ದ್ದಾರೆ), ಭಕ್ತ ವೃಂದ ಎನ್.ಜಿ.ಗಿರೀಶ್ ಮತ್ತಿತರರು ಹಾಜರಿದ್ದರು.

Translate »