ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಗೆ ಎಸ್‍ಐಟಿ ರಚಿಸಬೇಕು: ಶಾಸಕ ತನ್ವೀರ್ ಸೇಠ್
ಮೈಸೂರು

ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಗೆ ಎಸ್‍ಐಟಿ ರಚಿಸಬೇಕು: ಶಾಸಕ ತನ್ವೀರ್ ಸೇಠ್

January 5, 2021

ಮೈಸೂರು: ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಯುವ ಸಂಬಂಧ ಎಸ್‍ಐಟಿ ರಚಿಸ ಬೇಕು. ನನ್ನ ಹತ್ಯೆಗೆ ಯತ್ನಿಸಿದವರು ಯಾರು? ಉದ್ದೇಶ ಏನು? ಎಂಬುದನ್ನೇ ಈವರೆಗೂ ತಿಳಿಸಿಲ್ಲ. ಘಟನೆ ನಡೆದು ಒಂದು ವರ್ಷದ ಮೇಲೆ ಎರಡು ತಿಂಗಳಾದರೂ ಮಾಹಿತಿ ಬಹಿರಂಗ ಪಡಿಸಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಅಸಮಾಧಾನ ಹೊರ ಹಾಕಿದರು.

ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳ ಮೇಲೆ ನಡೆಯುವ ಹಲ್ಲೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ನನ್ನ ಮೇಲಿನ ಪ್ರಕರಣದ ಆರೋಪಿ ಗಳೆಲ್ಲರೂ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಇಂತಹ ಗಂಭೀರ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಗುತ್ತೆ ಎಂದರೆ ಪೆÇಲೀಸ್ ತನಿಖೆ ಹೇಗಿತ್ತು? ಯಾವ ಪ್ರಮಾಣದಲ್ಲಿ ಸಾಕ್ಷಿಗಳನ್ನು ಒದಗಿಸಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸರ್ಕಾರ ಗನ್‍ಮ್ಯಾನ್, ಪೆÇಲೀಸ್ ಭದ್ರತೆ ಕೊಟ್ಟರೆ ಸಾಲದು. ನಾವು ಎಲ್ಲಾ ಕಡೆ, ಎಲ್ಲಾ ಟೈಂನಲ್ಲೂ ಪೆÇಲೀಸರನ್ನು ಜೊತೆಗಿಟ್ಟುಕೊಂಡು ಹೋಗುವುದಕ್ಕೆ ಆಗಲ್ಲ. ರಾಜಕಾರಣಿಗಳ ಮೇಲೆ ನಡೆಯುವ ಹಲ್ಲೆಯನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳ ಬೇಕು. ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಯುವ ಸಂಬಂಧ ಎಸ್‍ಐಟಿ ರಚಿಸಬೇಕು. ಈ ವಿಚಾರವಾಗಿ ಗೃಹ ಸಚಿವರೊಂದಿಗೂ ಚರ್ಚೆ ನಡೆಸಿದ್ದೇನೆ ಎಂದರು.

ತೇಜಸ್ವಿ ಸೂರ್ಯಗೂ ಬೆದರಿಕೆ ಕರೆ ಬಂದಿತ್ತು. ರಾಜಕಾರಣ ಹೊಲಸಾಗಿದೆ, ಇಂತಹ ಸಂದರ್ಭದಲ್ಲಿ ಯುವಕರು ರಾಜಕಾರಣಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಯುವಕರು ರಾಜಕಾರಣಕ್ಕೆ ಬರುವ ವಾತಾವರಣ ನಿರ್ಮಿಸಬೇಕು.

ಮೇಯರ್‍ಗೆ ಮೈತ್ರಿ ಮುಂದುವರಿಯಲಿದೆ: ಮೈಸೂರು ನಗರಪಾಲಿಕೆಯಲ್ಲಿ ಮೇಯರ್ ಗದ್ದುಗೆ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುಂದುವರೆಯ ಲಿದೆ. ನಾನು ಜೆಡಿಎಸ್ ನಾಯಕ ಕುಮಾರಣ್ಣ ಜೊತೆ ಮಾತನಾಡಿದ್ದೇನೆ. ಶಾಸಕ ಸಾ.ರಾ. ಮಹೇಶ್ ಜವಾಬ್ದಾರಿ ಹೊತ್ತಿದ್ದಾರೆ. ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಮಾತನಾಡಿಲ್ಲ. ಇನ್ನೆರಡು ಮೂರು ದಿನದಲ್ಲಿ ಕುಳಿತು ಚರ್ಚೆ ಮಾಡುತ್ತೇವೆ ಎಂದರು.

 

Translate »