ಸೋಲಾರ್ ಲೈಟ್ ಸಮರ್ಪಕ ಬಳಕೆಗೆ ಸಲಹೆ

ವಿರಾಜಪೇಟೆ: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಅಗಾಗ ಕಡಿತಗೊಳ್ಳುವುದರಿಂದ ಜನರಿಗೆ ಸೋಲಾರ್ ಲೈಟ್‍ನ ಅವಶ್ಯಕತೆ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ಸಮೀ ಪದ ಹೆಗ್ಗಳ ಗ್ರಾಮದ ರಾಮನಗರದ ಶ್ರೀ ಅಯ್ಯಪ್ಪ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಜನೆಯ ಸದಸ್ಯರಿಗೆ ಸೋಲಾರ್ ಲೈಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದ ಮಹೇಶ್ ಗಣಪತಿ ಗ್ರಾಮಾಂತರ ಪ್ರದೇಶದಲ್ಲಿ ಮಳೆಗಾಲ, ಬೇಸಿಗೆ ಎನ್ನದೆ ವಿದ್ಯುತ್ ಕಡಿತಗೊಳ್ಳುತ್ತಿರುವುದರಿಂದ ಜನರು ಕತ್ತಲೆಯಲ್ಲಿಯೇ ಕಾಲ ಕಳೆಯುವಂತಾಗಿತ್ತು. ಧರ್ಮಸ್ಥಳ ಗ್ರಾಮಭ ವೃದ್ಧಿ ಯೋಜನೆಯು ಸೆಲ್ಕೋ ಸೋಲರ್ ಲೈಟ್ ಕಂಪನಿಯವರಿಂದ ಯೋಜನೆಯ ಸದಸ್ಯರಿಗೆ ಸೋಲರ್ ಲೈಟ್ ನೀಡುತ್ತಿರುವುದು ಉತ್ತಮ ಕಾರ್ಯ. ಇದರ ಸದು ಪಯೋಗವನ್ನು ಎಲ್ಲರು ಪಡೆದುಕೊಳ್ಳುವಂತಾಗಲಿ ಎಂದರಲ್ಲದೆ, ಮುಂದೆಯೂ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಸೌಲತ್ತುಗಳು ದೊರಕಲಿ. ಇದರಿಂದ ರೈತರು, ಕಾರ್ಮಿಕರು, ಸಾರ್ವಜನಿಕರ ಕೆಲಸ ಕಾರ್ಯ ಗಳಿಗೂ ಅನುಕೂಲವಾಗಲಿದೆ ಎಂದರು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಮಡಿಕೇರಿ ಮತ್ತು ವಿರಾಜಪೇಟೆ ಯೋಜನಾಧಿಕಾರಿ ಸದಾಶಿವಗೌಡ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದ 36 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವರ್ಷದಲ್ಲಿ 30 ರಿಂದ 40 ಮುಖ್ಯವಾದ ಕಾರ್ಯಕ್ರಮಗಳು, 150 ಕ್ಕೂ ಹೆಚ್ಚು ಇತರ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗುತ್ತದೆ. ಯೋಜನೆಯಲ್ಲಿ ಕತ್ತಲಿಂದ ಬೆಳಕಿನೆಡೆಗೆ ಎಂಬಂತೆ 200 ಘಟಕಗಳ ಸದಸ್ಯರಿಗೆ ಸೋಲಾರ್ ಲೈಟ್ ವಿತರಣಾ ಕಾರ್ಯವನ್ನು ಹಮ್ಮಿಕೊಂಡಿದ್ದು, ಈಗಾಗಲೆ ವಿರಾಜಪೇಟೆ ವಲಯದಲ್ಲಿ 216, ಹೆಗ್ಗಳ ರಾಮ ನಗರದಲ್ಲಿ 43 ಸೋಲಾರ್ ಲೈಟ್ ವಿತ ರಿಸಲಾಗುತ್ತಿದೆ. ಸದಸ್ಯರು ಪಡೆದುಕೊ ಳ್ಳುವ ಸೋಲಾರ್‍ನ್ನು ಉತ್ತಮವಾಗಿ ಬಳಸಿ ಕೊಳ್ಳುವಂತಾಗಬೇಕು ಎಂದರು.

ಸೆಲ್ಕೋ ಸೋಲರ್‍ನ ಬ್ರಾಂಚ್ ಮ್ಯಾನೇಜರ್ ಸದಾಶಿವ ಪ್ರಾಸ್ತಾವಿಕವಾಗಿ ಮಾತನಾಡಿ, ಸುಮಾರು 24 ವರ್ಷಗಳಿಂದಲೂ ಸೋಲಾರ್ ವಿತರಿಸಿಕೊಂಡು ಬರುತ್ತಿದ್ದು, ಇದರಿಂದ ಜನರಿಗೆ ಅನುಕೂಲವಾಗಿದೆ ಎಂದರು. ಸೆಲ್ಕೋ ಸೋಲರ್‍ನ ಹಿರಿಯ ವ್ಯವಸ್ಥಾಪಕ ರಾಧಾಕೃಷ್ಣ ಮಾತನಾಡಿ, ಸೋಲಾರ್‍ನಿಂದ ಪರಿಸರ ಉಳಿಸಬಹುದು. ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭ ಸೋಲಾರ್ ಮಾರುಕಟ್ಟೆ ಅಧಿಕಾರಿ ಗಣೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೆಗ್ಗಳ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿ, ಅಯ್ಯಪ್ಪ ದೇವಾಲಯದ ಆಡಳಿತ ಮಂಡಳಿಯ ರಕ್ಷಿತಾ, ಒಕ್ಕೂಟದ ಸುಮನ ಅವರುಗಳು ಸಭೆಯನ್ನುದ್ದೇಶಿಸಿ ಮಾತನಾಡಿದರು. ಯೋಜನೆಯ ಹೆಗ್ಗಳ ಒಕ್ಕೂಟದ ಸೇವಾ ಪ್ರತಿನಿಧಿ ಬಿ.ಎಂ.ಜೋತಿ ಸ್ವಾಗತಿಸಿದರು. ಮೇಲ್ವಿಚಾರಕ ರವೀಂದ್ರ ಹಾಗೂ ಸರಿತಾ ನಿರೂಪಿಸಿದರೆ ಸೇವಾ ಪ್ರತಿನಿಧಿ ಪುಷ್ಪ ವಂದಿಸಿದರು. ಕಾರ್ಯಕ್ರಮದಲ್ಲಿ 38 ತಂಡದ ಸದಸ್ಯರುಗಳು ಭಾಗವಹಿಸಿದ್ದರು.