ಬೆಂಗಳೂರು, ಮೇ 18(ಕೆಎಂಶಿ)-ತಂತ್ರಜ್ಞಾನ ಬಳಸಿ ಕೊಂಡು ಆಡಳಿತದಲ್ಲಿ ತ್ವರಿತ ಸುಧಾರಣೆಗಳನ್ನು ತರಬಹುದು ಎಂಬುದನ್ನು ಕೊವಿಡ್-19 ನಮಗೆ ಹೇಳಿ ಕೊಟ್ಟಿದೆ. ನಮ್ಮ ಈ ಅನುಭವ ಮುಂದಿನ ಹತ್ತು ವರ್ಷದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವನ್ನು ಬಹು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಉಪಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ ಸಂಘ ಟನೆ) ಆಯೋಜಿಸಿದ್ದ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊವಿಡ್ -19ನಿಂದಾಗಿ ಆರೋಗ್ಯ ಸಮಸ್ಯೆ, ಸಾವು-ನೋವು ಸಂಭ ವಿಸಿದೆ. ಇದೊಂದು ಹಿನ್ನಡೆಯೂ ಹೌದು. ಇದಕ್ಕೆ ಯಾವ ಸಿದ್ಧತೆಯನ್ನೂ ಮಾಡಿಕೊಂಡಿರಲಿಲ್ಲ ಎಂಬುದೂ ಸತ್ಯ. ಆದರೆ, ಈ ಸಮಸ್ಯೆಯನ್ನು ಒಂದು ಅವಕಾಶ ವಾಗಿ ಬಳಸಿಕೊಂಡು ಅತ್ಯಂತ ವೇಗವಾಗಿ ಬದಲಾವಣೆ ಗಳಿಗೆ ಒಗ್ಗಿಕೊಂಡು ಹೊಸ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡೆವು. ತಂತ್ರಜ್ಞಾನದ ಮೂಲಕ ಎಲ್ಲವೂ ಸಾಧ್ಯ ಎಂಬುದನ್ನು ತೋರಿಸಿದ್ದೇವೆ ಎಂದರು.
ನಾವು ಬದಲಾವಣೆಗೆ ಎಷ್ಟೊಂದು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಹೊಂದಿಕೊಂಡಿ ದ್ದೇವೆ ಎಂದರೆ ಕೆಲವೊಂದು ವಿಭಾಗಗಳಲ್ಲಿ ಮಾತ್ರ ಲಾಕ್ಡೌನ್ನಿಂದ ತೊಂದರೆಯಾಗಿದೆಯೇ ಹೊರತು, ಬಹುತೇಕ ಕ್ಷೇತ್ರಗಳಲ್ಲಿ ಹೆಚ್ಚಿನ ದುಷ್ಪರಿಣಾಮ ಆಗ ಲಿಲ್ಲ. ಟೆಲಿಮೆಡಿಸಿನ್, ಟೆಲಿ ಕನ್ಸಲ್ಟಿಂಗ್ ಮೂಲಕ ಜನರ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ತಲುಪಿಸಿ ದ್ದೇವೆ. ಜನರಿಗೆ ಪಡಿತರ, ಔಷಧ ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ತಲುಪಿಸಲಾಗಿದೆ. ಪಡಿತರ ವಿತರಣೆಯಲ್ಲಿ ಭಾರತ, ಅದರಲ್ಲೂ ಕರ್ನಾ ಟಕ ಮಾಡಿರುವ ಸಾಧನೆ ವಿಶ್ವಕ್ಕೆ ಮಾದರಿ ಎಂದರೆ ಅತಿಶಯೋಕ್ತಿಯಲ್ಲ ಎಂದು ತಿಳಿಸಿದರು.
ಇಂತಹ ಸಮಸ್ಯೆಗಳು ಎದುರಾದಾಗ ರಾತ್ರೋರಾತ್ರಿ ಎಲ್ಲವೂ ಬಗೆಹರಿಯಬೇಕು ಎಂದು ಬಯಸುತ್ತಾರಾ ದರೂ ಅದು ಸಾಧ್ಯವಾಗುವುದಿಲ್ಲ. ಆದರೆ, ಭಾರತೀಯ ರಲ್ಲಿ ನಂಬಿಕೆಯೇ ಅತಿ ದೊಡ್ಡ ಶಕ್ತಿ. ಅದರಂತೆ ಪ್ರಧಾನಿ ಮೋದಿ ಅವರು ಜನರ ಪಾಲಿಗೆ ನಂಬಿಕೆಯಾಗಿದ್ದು, ಈ ನಂಬಿಕೆ ನಮ್ಮನ್ನು ಸಮಸ್ಯೆಯಿಂದ ಕಾಪಾಡಿದೆ. ಕೆಲವು ದುಷ್ಟ ಶಕ್ತಿಗಳು ಈ ಪರಿಸ್ಥಿತಿಯ ದುರ್ಲಾಭ ಪಡೆದು ಏನೇನೋ ಮಾಡಬೇಕು ಎಂದು ಪ್ರಯತ್ನಿಸಿ ದರೂ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಕೋವಿಡ್ ಸಮಸ್ಯೆಯನ್ನು ದೇಶ ಒಗ್ಗಟ್ಟಿನಿಂದ ಎದುರಿಸಿದೆ. ಜನ ಭಾವನಾತ್ಮಕವಾ ಗಿಯೂ ಸರ್ಕಾರದ ಜತೆ ಕೈಜೋ ಡಿಸಿದ್ದಾರೆ ಎಂಬುದಕ್ಕೆ ಕೊರೊನಾ ವಾರಿಯರ್ಸ್ಗೆ ದೇಶದ ಜನ ಸಲ್ಲಿ ಸಿದ ಗೌರವವೇ ಸಾಕ್ಷಿ. ಅದೇ ರೀತಿ ಅಮೆರಿಕದಲ್ಲಿ ಭಾರತೀಯ ಮೂಲದ ಡಾ.ಉಮಾ ರಾಣಿ ಅವರ ಸೇವೆಗೆ ಸಂದ ಗೌರವ ಭಾರತೀಯರು ಯಾವ ರೀತಿ ಸೇವಾ ಮನೋಭಾವ ಹೊಂದಿ ದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಕೋವಿಡ್ ಕಾಣಿಸಿಕೊಂಡ ಸಂದರ್ಭ ದಲ್ಲಿ ಕರ್ನಾಟಕದಲ್ಲಿ 2 ಪ್ರಯೋಗಾಲಯಗಳಲ್ಲಿ ಮಾತ್ರ ಪರೀಕ್ಷೆ ನಡೆಸಲು ಅವಕಾಶವಿತ್ತು. ಟೆಸ್ಟ್ ಕಿಟ್, ನಿರ್ದಿಷ್ಟ ಆಸ್ಪತ್ರೆ, ಪಿಪಿಇ ಕಿಟ್, ಎನ್ 95 ಮಾಸ್ಕ್ ಯಾವುದೂ ಇರಲಿಲ್ಲ. ಆದರೆ, ತ್ವರಿತಗತಿಯಲ್ಲಿ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡೆವು. ಪ್ರಸ್ತುತ ರಾಜ್ಯದಲ್ಲಿ 35 ಪ್ರಯೋಗಾಲಯಗಳಿದ್ದು, ನಿತ್ಯ 35 ಸಾವಿರ ಟೆಸ್ಟ್ ಮಾಡುವ ಸಾಮಥ್ರ್ಯ ಬೆಳೆಸಿಕೊಂಡಿ ದ್ದೇವೆ. ಕೋವಿಡ್ ಚಿಕಿತ್ಸೆಗಾಗಿ 39 ಸಾವಿರ ಹಾಸಿಗೆ ಮೀಸಲಿಡಲಾಗಿದ್ದು, ಜಿಲ್ಲಾ, ತಾಲೂಕು ಮಟ್ಟದ ಆಸ್ಪತ್ರೆ ಗಳಲ್ಲೂ ಆಕ್ಸಿಜನ್ ಸೌಲಭ್ಯ ಒದಗಿಸಲಾಗಿದೆ. ಟೆಲಿ ಐಸಿಯೂ ಘಟಕಗಳಿವೆ. ಪಿಪಿಇ ಕಿಟ್ನಲ್ಲಿ ಸ್ವಾವಲಂಬನೆ ಸಾಧಿಸಿದ್ದೇವೆ. ಹೊಸ ವೆಂಟಿ ಲೇಟರ್ಸ್ ಸಂಖ್ಯೆ ಲಕ್ಷಕ್ಕೆ ಹೆಚ್ಚಿದೆ ಎಂದು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಕೋವಿಡ್ ವಿಚಾರದಲ್ಲಿ ನಮಗೆ ಸವಾಲಾಗಿದ್ದು ವಲಸೆ ಕಾರ್ಮಿಕರು. ಅವರಿಗೆ ಊಟ, ವಸತಿ ಕಲ್ಪಿಸು ವುದು ಕಷ್ಟ. ಅಲ್ಲದೆ, ರಾಜ್ಯಕ್ಕೆ ಬರುವವರು ಹೋಗು ವವರು ಸಂಖ್ಯೆಯೂ ಹೆಚ್ಚು. ಇನ್ನೊಂದೆಡೆ ಹೊರ ರಾಜ್ಯದಿಂದ ಬಂದ ವಲಸೆ ಕಾರ್ಮಿಕರನ್ನು ಕ್ವಾರಂ ಟೈನ್ ಮಾಡುವುದು ಕೂಡ ಕಷ್ಟಸಾಧ್ಯವಾಗಿತ್ತು. ಆದರೆ, ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿ ದ್ದೇವೆ. ಯಾವುದೇ ಕೊರತೆಯಾಗದಂತೆ ನೋಡಿ ಕೊಂಡಿದ್ದೇವೆ ಎಂದು ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಾ.ಅಶ್ವತ್ಥನಾರಾ ಯಣ, ಕೋವಿಡ್ ಚಿಕಿತ್ಸೆಗೆ ಅಗತ್ಯ ಮಾದರಿ ಸಂಗ್ರಹಿ ಸಲು ಮೊಬೈಲ್ ವಾಹನ ವ್ಯವಸ್ಥೆ ಮಾಡಲಾಗಿದೆ. ಮನೆ ಮನೆಗೂ ಯೂನಿವರ್ಸಲ್ ಸ್ಕ್ರೀನಿಂಗ್, ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಮುಂತಾದ ಕಾರ್ಯ ಕ್ರಮ ಗಳನ್ನು ನಡೆಸಲಾಗುತ್ತಿದೆ. ತಂತ್ರಜ್ಞಾನವನ್ನು ಸಂಪೂರ್ಣ ಬಳಕೆಮಾಡಿಕೊಂಡು ಜನರ ಆರೋಗ್ಯ ಮಾಹಿತಿ ಸಂಗ್ರ ಹಿಸುವ ಮೂಲಕ ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆ ಎದುರಾದರೆ ಆಗ ಮಾಹಿತಿಗೆ ತೊಂದರೆಯಾಗ ದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿ ದಂತೆ ಭಾರತ ಸರ್ಕಾರ ಅದರಲ್ಲೂ ಮುಖ್ಯವಾಗಿ ಕರ್ನಾಟಕದ ಸಾಧನೆ ಬಗ್ಗೆ ಅಮೆರಿಕದಲ್ಲಿ ಕೊರೊನಾಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಅಕ್ಕ ಬಳಗ ದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಾಧನೆಗಾಗಿ ಸರ್ಕಾರ ಮತ್ತು ರಾಜ್ಯದ ಜನತೆಗೆ ಡಾ.ಅಶ್ವತ್ಥ ನಾರಾಯಣ ಅವರ ಮೂಲಕ ಅಭಿನಂದಿಸಿದರು.