ಸೋಮವಾರಪೇಟೆ: ಮತದಾರರ ಮಿಂಚಿನ ನೋಂದಣಿ
ಕೊಡಗು

ಸೋಮವಾರಪೇಟೆ: ಮತದಾರರ ಮಿಂಚಿನ ನೋಂದಣಿ

January 8, 2020

ಸೋಮವಾರಪೇಟೆ, ಜ.7- ಸಮೀ ಪದ ಯಡೂರು ಗ್ರಾಮದ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಚುನಾವಣಾ ಸಾಕ್ಷರತಾ ಕ್ಲಬ್‍ನಿಂದ ‘ಮತದಾರರ ಮಿಂಚಿನ ನೋಂದಣಿ’ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ. ಶ್ರೀಧರ್ ಮಾತನಾಡಿ, ಚುನಾವಣೆ ಪ್ರತಿಯೊಬ್ಬ ಭಾರತೀಯರ ಹಕ್ಕು. 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿ ಕೊಂಡು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು.

ಈ ವೇಳೆ 18 ವರ್ಷ ತುಂಬಿದ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನಿಗ ದಿತ ನಮೂನೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಚುನಾವಣಾ ಸಾಕ್ಷ ರತಾ ಕ್ಲಬ್‍ನ ಸಂಚಾಲಕ ಪ್ರೊ.ಕೆ.ಹೆಚ್. ಧನಲಕ್ಷ್ಮಿ, ರೆಡ್ ರಿಬ್ಬನ್ ಕ್ಲಬ್‍ನ ಸಂಚಾ ಲಕರಾದ ಎಂ.ಎಸ್.ಶಿವಮೂರ್ತಿ, ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಹೆಚ್. ಎನ್.ರಾಜು, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಂ.ಪ್ರವೀಣ್‍ಕುಮಾರ್ ಸೇರಿದಂತೆ ಉಪನ್ಯಾಸಕರು ಪಾಲ್ಗೊಂಡಿದ್ದರು.

Translate »