ತಿಹಾರ್ ಜೈಲಿನಲ್ಲಿ ಇಂದು ಡಿಕೆಶಿ ಭೇಟಿ ಮಾಡಲಿರುವ ಸೋನಿಯಾ
ಮೈಸೂರು

ತಿಹಾರ್ ಜೈಲಿನಲ್ಲಿ ಇಂದು ಡಿಕೆಶಿ ಭೇಟಿ ಮಾಡಲಿರುವ ಸೋನಿಯಾ

October 21, 2019

ನವದೆಹಲಿ, ಅ.20- ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಭೇಟಿ ಆಗಲಿದ್ದಾರೆ.

ಈ ಹಿಂದೆ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸೋನಿಯಾ ಗಾಂಧಿ ಭೇಟಿಯಾಗಿದ್ದರು. ಈಗ ಡಿ.ಕೆ.ಶಿವಕುಮಾರ್ ಅವರ ಭೇಟಿಗಾಗಿ ಜೈಲು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ನಾಳೆ ಬೆಳಿಗ್ಗೆ ಅನುಮತಿ ನೀಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಗುರುವಾರ ಸುಮಾರು 3 ಗಂಟೆಗೂ ಅಧಿಕ ಕಾಲ ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ, ಆದೇಶವನ್ನು ಶನಿವಾರಕ್ಕೆ ಕಾಯ್ದಿರಿಸಿದ್ದರು. ಇತ್ತ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಬಾರದೆಂದು ಇಡಿ ಪರ ವಕೀಲರು ಹೊಸ ಹೊಸ ವಿಷಯಗಳನ್ನು ಕೋರ್ಟ್ ನಲ್ಲಿ ಪ್ರಸ್ತಾಪಿಸಿದ್ದರು. ದೊಡ್ಡ ದೊಡ್ಡ ಬ್ಯಾಗ್‍ಗಳಲ್ಲಿ ಹೊತ್ತು ತಂದಿದ್ದ ದಾಖಲೆಗಳನ್ನು ಕೋರ್ಟ್ ಮುಂದೆ ಇಟ್ಟು, ಡಿಕೆ ಶಿವಕುಮಾರ್ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡುವುದು ಬೇಡ ಎಂದು ಇಡಿ ಪರ ವಕೀಲರು ವಾದ ಮಂಡಿಸಿದ್ದರು. ಡಿಕೆ ಶಿವ ಕುಮಾರ್ ತಾಯಿ ಗೌರಮ್ಮ, ಪುತ್ರಿ ಐಶ್ವರ್ಯ ಹೆಸರಿನಲ್ಲಿ ನಡೆದಿರುವ ವ್ಯವಹಾರಗಳ ಮಾಹಿತಿಯನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಇದಕ್ಕೆ ಡಿಕೆಶಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಬೇಲ್ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಕೊನೆಗೆ ನ್ಯಾಯಮೂರ್ತಿಗಳು, ಶನಿವಾರ ಆದೇಶವನ್ನು ಕಾಯ್ದಿರಿಸಿದರು. ಆದರೆ ಶನಿವಾರ ಕೋರ್ಟ್ ರಜೆ ಇದ್ದಿದ್ದರಿಂದ ಸೋಮವಾರ ಆದೇಶ ಹೊರ ಬೀಳಲಿದೆ.

 

Translate »