ಸಚಿವರಿಂದ ಚನ್ನಕೇಶವಸ್ವಾಮಿಗೆ ವಿಶೇಷ ಪೂಜೆ
ಹಾಸನ

ಸಚಿವರಿಂದ ಚನ್ನಕೇಶವಸ್ವಾಮಿಗೆ ವಿಶೇಷ ಪೂಜೆ

March 28, 2019

ಹಾಸನ, ತುಮಕೂರಿನಲ್ಲಿ ಗೆಲುವು ಖಚಿತ: ಹೆಚ್‍ಡಿಆರ್
ಬೇಲೂರು: ಲೋಕೋಪ ಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಬುಧವಾರ ಬೆಳಿಗ್ಗೆ ಇಲ್ಲಿನ ಶ್ರೀಚನ್ನಕೇಶವಸ್ವಾಮಿ ದೇಗುಲದಲ್ಲಿ ಮುಖಂಡ ರೊಂದಿಗೆ ವಿಶೇಷ ಪೂಜೆಯಲ್ಲಿ ಭಾಗವ ಹಿಸಿ, ದೇವರ ದರ್ಶನ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚುನಾವಣೆ ಪ್ರಚಾರ ಪ್ರಾರಂಭ ಮಾಡುವುದಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರೆಲ್ಲರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಬೇಲೂರಿ ನಲ್ಲಿ ಇಂದು ಜೆಡಿಎಸ್ ಮುಖಂಡರ ಸಭೆ ಕರೆಯಲಾಗಿದೆ. ಸಭೆ ನಂತರ ಚುನಾವಣಾ ಪ್ರಚಾರವನ್ನು ಕೈಗೊಳ್ಳಲಿದ್ದೇವೆ ಎಂದರು.

ಚುನಾವಣಾ ಪ್ರಚಾರಕ್ಕೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ವಿವಿಧ ಮುಖಂಡರು ಭಾಗವಹಿಸಲಿ ದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲ ವಿಲ್ಲ. ಎಲ್ಲರು ಒಟ್ಟಾಗಿ ಚುನಾವಣೆ ಎದು ರಿಸಿ ಗೆಲ್ಲುತ್ತೇವೆ. ತುಮಕೂರು ಕ್ಷೇತ್ರದಲ್ಲೂ ಯಾವುದೇ ಗೊಂದಲವಿಲ್ಲ. ಅಲ್ಲಿಯೂ ದೇವೇಗೌಡರು ಅತಿ ಹೆಚ್ಚು ಮತಗಳ ಅಂತರ ದಿಂದ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಈ ಸಂದರ್ಭದಲ್ಲಿ ಶಾಸಕ ಕೆ.ಎಸ್. ಲಿಂಗೇಶ್, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ತೋ.ಚ.ಅನಂತಸುಬ್ಬ ರಾಯ, ಕಾರ್ಯಾಧ್ಯಕ್ಷ ಬಿ.ಸಿ.ಮಂಜು ನಾಥ್, ಕಾರ್ಯದರ್ಶಿ ಮಹೇಶ್, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಎಂ.ಎ.ನಾಗ ರಾಜ್, ಪುರಸಭೆ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್, ಮಾಜಿ ಜಿಪಂ ಸದಸ್ಯ ಸಿ.ಎಸ್.ಪ್ರಕಾಶ್, ತಾಪಂ ಸದಸ್ಯೆ ಕಮಲ ಚಿಕ್ಕಣ್ಣ, ಮುಖಂಡರಾದ ನಟರಾಜ್, ನಾಗೇಶ್ ಮಲ್ಲೇಗೌಡ, ರವಿಕುಮಾರ್ ಸೇರಿದಂತೆ ಇತರರಿದ್ದರು.

Translate »