ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹುಟ್ಟುಹಬ್ಬ ಬೇಲೂರು ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ
ಹಾಸನ

ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹುಟ್ಟುಹಬ್ಬ ಬೇಲೂರು ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ

December 18, 2018

ಬೇಲೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣನವರ ಜನ್ಮ ದಿನದ ಅಂಗವಾಗಿ ಇಲ್ಲಿನ ತಾಲೂಕು ಜೆಡಿಎಸ್ ವತಿ ಯಿಂದ ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು-ಹಣ್ಣುಗಳನ್ನು ನೀಡುವ ಮೂಲಕ ಶುಭ ಕೋರಿದರು.

ಬೆಳಿಗ್ಗೆ ಸುಮಾರು 9.30ಕ್ಕೆ ಚನ್ನಕೇಶವ ದೇಗುಲಕ್ಕೆ ತಾಲೂಕು ಜೆಡಿಎಸ್ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಹಾಸನ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಹಾಸನ ಹೆಚ್‍ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಎಂ.ಎ.ನಾಗರಾಜು, ತಾಲೂಕು ಪಂಚಾಯಿತಿ ಅಧ್ಯಕ್ಷ ಜಿ.ಬಿ.ರಂಗೇಗೌಡ, ಪುರಸಭಾ ಅಧ್ಯಕ್ಷೆ ಡಿ.ಆರ್.ಭಾರತಿ, ಮಾಜಿ ಪುರಸಭಾ ಅಧ್ಯಕ್ಷ ಬಿ.ಸಿ. ಮಂಜುನಾಥ್, ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸಿ.ಹೆಚ್.ಮಹೇಶ್, ತಾಲೂಕು ಎಪಿಎಂಸಿ ಅಧ್ಯಕ್ಷ ಅದ್ದೂರಿ ಚೇತನ್‍ಕುಮಾರ್, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಬಿ.ಸಿ. ಉಮೇಶ್, ಸನ್ಯಾಸಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ಮಾಳೇ ಗೆರೆ ಬಸವರಾಜು, ಟಿಎಪಿಸಿಎಂಸಿ ನಿರ್ದೇಶಕ ಎಸ್.ಕೆ. ನಾಗೇಶ್, ಯುವ ಜೆಡಿಎಸ್ ಮುಖಂಡರಾದ ಅಬ್ದುಲ್ ಖಾದರ್, ಸತೀಶ ಗೌಡ, ಆರೋಗ್ಯ ಸಮಿತಿ ಸದಸ್ಯ ಬೇನಾ ತಾರಾನಾಥ್, ಕರವೇ ಅಧ್ಯಕ್ಷ ಚಂದ್ರಶೇಖರ್, ತಾಲೂಕು ಸವಿತಾ ಸಮಾಜದ ಅಧ್ಯಕ್ಷ ನರಸಿಂಹಸ್ವಾಮಿ, ಜಯರಾಮು, ಧರ್ಮೇ ಗೌಡ, ಸುರೇಶ್, ನಾಗೇಶ್, ಸತ್ಯನಾರಾಯಣ, ಸತೀಶ್, ಅಶೋಕ್ ಇನ್ನು ಮುಂತಾದವರು ಚನ್ನಕೇಶವಸ್ವಾಮಿಗೆ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ತಾಲೂಕು ಅಧ್ಯಕ್ಷ ತೊ.ಚ.ಅನಂತಸುಬ್ಬ ರಾಯ, ಬೇಲೂರು ಮತ್ತು ಜೆಡಿಎಸ್ ಪಕ್ಷಕ್ಕೆ ಅವಿನಾಭಾವ ಸಂಬಂಧ ವಿದೆ. ಕಾರಣ ಬೇಲೂರು ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್ ಗೆದ್ದ ಸಂದರ್ಭದಲ್ಲಿ ರಾಜ್ಯದ ಅಧಿಕಾರ ಗದ್ದುಗೆಯನ್ನು ಜೆಡಿಎಸ್ ಪಡೆದಿದೆ ಎಂದ ಅವರು ಈ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಚಾರಕ್ಕೆ ಬಂದ ಸಂದರ್ಭ ದಲ್ಲಿ ಬೇಲೂರಿನ ಚನ್ನಕೇಶವನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

Translate »