ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್ ಅಭಿನಂದನೆ
ಮೈಸೂರು

ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್ ಅಭಿನಂದನೆ

November 9, 2020

ಮೈಸೂರು,ನ.8(ಪಿಎಂ)-ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿ ಕಾರಿಗಳಾಗಿ ಆಯ್ಕೆಯಾದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಾಸಕ ಎಸ್.ಎ.ರಾಮದಾಸ್ ಅಭಿನಂದನೆ ಸಲ್ಲಿಸಿದ್ದಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಎಸ್.ಟಿ.ರವಿಕುಮಾರ್ ಮತ್ತು ಅವರ ತಂಡಕ್ಕೆ ಶುಭಾ ಶಯಗಳನ್ನು ತಿಳಿಸುತ್ತಾ ಅವರ ನೇತೃತ್ವದಲ್ಲಿ ಸಂಘದಿಂದ ಇನ್ನಷ್ಟು ಜನಪ್ರಿಯ ಕೆಲಸಗಳಾಗಲಿ, ಜನಪರ ಕಾಳಜಿಗಳನ್ನು ತೋರಲಿ. ಜೊತೆಗೆ ಇನ್ನುಳಿ ದಂತೆ ಆಯ್ಕೆಯಾದ ಉಪಾಧ್ಯಕ್ಷರಾದಿಯಾಗಿ ಕಾರ್ಯಕಾರಿ ಸಮಿತಿ ಸದಸ್ಯರೆಲ್ಲರಿಗೂ ಶುಭ ಕೋರುತ್ತೇನೆ. ಈ ಹಿಂದೆ ಅನೇಕ ಉತ್ತಮ ಕೆಲಸಗಳನ್ನು ಮಾಡಿರುವ ನಿಕಟಪೂರ್ವ ಅಧ್ಯಕ್ಷ ಸಿ.ಕೆ.ಮಹೇಂದ್ರ ಅವರಿಗೂ ಅಭಿನಂದನೆ ಸಲ್ಲಿಸುವುದಾಗಿ ಎಸ್.ಟಿ.ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿ ಗಳಾಗಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಎಲ್ಲಾ ಪತ್ರಕರ್ತರಿಗೆ ಶುಭಕಾಮನೆಗಳನ್ನು ತಿಳಿಸುವುದಾಗಿ ಎಸ್.ಎ.ರಾಮದಾಸ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »