ಹಾಸನಾಂಬೆ ದರ್ಶನಕ್ಕೆ ಶ್ರೀ ಕ್ಷೇತ್ರ  ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಚಾಲನೆ
ಹಾಸನ

ಹಾಸನಾಂಬೆ ದರ್ಶನಕ್ಕೆ ಶ್ರೀ ಕ್ಷೇತ್ರ  ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಚಾಲನೆ

November 3, 2018

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಸ್ಥಾನದ ಬಾಗಿಲನ್ನು 1 ವರ್ಷದ ನಂತರ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ವಿವಿಧ ಸಂಪ್ರದಾಯ ಬದ್ಧವಾದ ಪೂಜಾ ವಿಧಿವಿಧಾನಗಳೊಂದಿಗೆ ತೆರೆಯಲಾಯಿತು.

ಗುರುವಾರದಂದು ದೇವಸ್ಥಾನವನ್ನು ಸ್ವಚ್ಛಗೊಳಿಸಿ, ವಿವಿಧ ಪೂಜಾ ಕೈಂಕರ್ಯ ಗಳನ್ನು ನೆರವೇರಿಸಲಾಯಿತು. ಈ ವೇಳೆ ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಎಡಿಸಿ ವೈಶಾಲಿ, ಜಿಲ್ಲಾ ಎಸ್ಪಿ ಎ.ಎನ್.ಪ್ರಕಾಶ್‍ಗೌಡ, ಪ್ರೊಬೆಷನರಿ ಐಎಎಸ್ ಅಧಿಕಾರಿ ಎಂ.ಪ್ರಿಯಾಂಕ, ಉಪವಿಭಾಗಾಧಿಕಾರಿಗಳಾದ ಡಾ.ಹೆಚ್. ಎಲ್.ನಾಗರಾಜ್, ಲಕ್ಷ್ಮೀಕಾಂತ ರೆಡ್ಡಿ, ನಗರ ಸಭೆ ಆಯುಕ್ತ ಬಿ.ಎ.ಪರಮೇಶ್, ಪ್ರೊಬೇಷನರಿ ಉಪವಿಭಾಗಾಧಿಕಾರಿ ಗಿರೀಶ್‍ನಂದನ್ ಮತ್ತಿತರರು ಉಪಸ್ಥಿತರಿದ್ದರು.

ಗುರುವಾರ ದಂದು ಭಕ್ತರಿಗೆ ದೇವಸ್ಥಾನ ಪ್ರವೇಶವಿರಲಿಲ್ಲ. ಎರಡನೇ ದಿನವಾದ ಇಂದು ಹಾಸನಾಂಬೆಯನ್ನು ವಿವಿಧ ಪುಷ್ಪ ಮತ್ತು ಹಣ್ಣುಗಳಿಂದ ಸಿಂಗರಿಸಲಾಗಿತ್ತು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಪತ್ನಿ ಚೆನ್ನಮ್ಮ ಅವರೊಂದಿಗೆ ದೇವಿ ದರ್ಶನ ಪಡೆದರು. ಅಲ್ಲದೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ, ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾವಿರಾರು ಭಕ್ತರು ದೇವಿ ದರ್ಶನ ಪಡೆದರು. ನ.9ರಂದು ದೇವಸ್ಥಾನ ಮುಚ್ಚಲಿದ್ದು, ನ.8ರವರೆಗೂ ಭಕ್ತಾದಿಗಳಿಗೆ ದೇವಿ ದರ್ಶನಕ್ಕೆ ಅವಕಾಶವಿದೆ.

Translate »