40 ಲಕ್ಷ ವೆಚ್ಚದಲ್ಲಿ ಚರಂಡಿ ಕಾಮಗಾರಿಗೆ ಮೇಯರ್ ಚಾಲನೆ
ಮೈಸೂರು

40 ಲಕ್ಷ ವೆಚ್ಚದಲ್ಲಿ ಚರಂಡಿ ಕಾಮಗಾರಿಗೆ ಮೇಯರ್ ಚಾಲನೆ

March 3, 2019

ಮೈಸೂರು: ಮೈಸೂ ರಿನ 44ನೇ ವಾರ್ಡ್ ವ್ಯಾಪ್ತಿಯ ಜನತಾ ನಗರದ 9 ಮತ್ತು 10ನೇ ಕ್ರಾಸ್‍ನಲ್ಲಿ 40 ಲಕ್ಷ ರೂ.ವೆಚ್ಚದ ಚರಂಡಿ ಕಾಮ ಗಾರಿಗೆ ಮೇಯರ್ ಪುಷ್ಪಲತಾ ಜಗ ನ್ನಾಥ್ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಈ ಭಾಗದಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡ ಬೇಕಾಗಿದೆ. ಪಾಲಿಕೆಯಿಂದ ಈ ಭಾಗದ ಅಭಿವೃದ್ಧಿಗೆ ಬೇಕಾದ ಸಹಕಾರ ನೀಡಿದ್ದು, ಹೆಚ್ಚಿನ ಅನುದಾನಕ್ಕಾಗಿ ನೀಡಿರುವ ಬೇಡಿಕೆ ಕುರಿತು ಸದ್ಯದಲ್ಲಿಯೇ ತಿರ್ಮಾ ನಿಸಲಾಗುವುದು. ಇಲ್ಲಿರುವ ನೀರಿನ ಸಮಸ್ಯೆಯನ್ನು ಸೆಪ್ಟೆಂಬರ್ ತಿಂಗಳೊಳಗೆ ಪರಿಹರಿಸಲಾಗುವುದು ಎಂದರು.

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ ಮಾತನಾಡಿ, ಜನತಾ ನಗರದಲ್ಲಿರುವ ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು. ನಗರಪಾಲಿಕೆ ಸದಸ್ಯೆ ಸವಿತಾ ಸುರೇಶ್, ಬೋಗಾದಿ 2ನೇ ಹಂತ ನಿವಾಸಿಗಳ ಸಂಘದ ಅಧ್ಯಕ್ಷ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

Translate »