ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ
ಮೈಸೂರು

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

June 19, 2018

ಬೆಂಗಳೂರು: ಮುಖ್ಯ ಮಂತ್ರಿ ಕುಮಾರಸ್ವಾಮಿಯವ ನೇತೃ ತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಆರು ಲಕ್ಷ ನೌಕರರ ಮೂಲ ವೇತನದಲ್ಲಿ ಶೇ.1.75ರಷ್ಟು ಹೆಚ್ಚಳ ಶಿಫಾರಸಿಗೆ ಸಮ್ಮತಿ ಸಿಕ್ಕಿದೆ
ಹಣಕಾಸು ಖಾತೆ ಉಸ್ತುವಾರಿ ಹೊಂದಿ ರುವ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದು ಆ ವೇಳೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹೆಚ್ಚಳವು ಜನವರಿ 1, 2018ರಿಂದ ಪೂರ್ವಾನ್ವಯವಾಗ ಲಿದೆ. ಈ ಸೌಲಭ್ಯವು ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಪೂರ್ಣಾವಧಿ ನೌಕರರು, ಸರ್ಕಾರಿ ಸಹಾಯಧನ ಪಡೆಯುವ ಶಿಕ್ಷಣ ಸಂಸ್ಥೆ, ಪೂರ್ಣಾವಧಿ ನೌಕರರುಗಳಿಗೆ ಅನ್ವಯಿಸಲಿದೆ.

ಈ ತುಟ್ಟಿಭತ್ಯೆ ಹೆಚ್ಚಳದ ಕಾರಣ ಬೊಕ್ಕಸಕ್ಕೆ ಸುಮಾರು 560 ಕೋಟಿ ಹೊರೆ ಬೀಳುತ್ತದೆ ಎನ್ನಲಾಗಿದೆ. ಏತನ್ಮಧ್ಯೆ ರಾಜ್ಯ ಸರ್ಕಾರಿ ನೌಕರರ ಸಂಘವು ಶೇ.4.25ರ ಮೂಲ ವೇತನ ಹೆಚ್ಚಳಕ್ಕೆ ಸಲ್ಲಿಸಿದ್ದ ಮನವಿಯನ್ನು ಸರ್ಕಾರ ತಿರಸ್ಕರಿ ಸಿದೆ. ಇದಕ್ಕೂ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಪ್ರಮಾಣದಲ್ಲಿ ಶೇ.2ರಷ್ಟು ಹೆಚ್ಚಳ ಮಾಡಿತ್ತು.

Translate »