ಯೋಗ ದಿನ ಯಶಸ್ವಿ ಆಚರಣೆಗೆ ತೀರ್ಮಾನ

ಚಾಮರಾಜನಗರ: ಜಿಲ್ಲೆ ಯಲ್ಲಿ 4ನೇ ಅಂತರ ರಾಷ್ಟ್ರೀಯ ಯೋಗ ದಿನವನ್ನು ಜೂ. 21ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರ ಸಮ್ಮುಖದಲ್ಲಿ ನಡೆದ ಯೋಗ ದಿನಾಚರಣೆ ಪೂರ್ವಭಾವಿ ಸಭೆ ಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣ ವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ಕಳೆದ ಬಾರಿಯೂ ಅಂತರ ರಾಷ್ಟ್ರೀಯ ಯೋಗ ದಿನ ಆಚರಣೆಯನ್ನು ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಲಾಗಿದೆ. ಈ ಬಾರಿಯೂ ಕೂಡ ಪೂರ್ವ ಸಿದ್ಧತೆಯೊಂದಿಗೆ ಯೋಗ ದಿನ ಆಚರಣೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಕ್ರಮ ವಹಿಸಬೇಕು. ಅಧಿಕಾರಿಗಳು, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಸಂಘ-ಸಂಸ್ಥೆಗಳು ಯೋಗ ಆಸಕ್ತರನ್ನು ಸಕ್ರಿಯವಾಗಿ ತೊಡಗಿ ಸಿಕೊಂಡು ಕಾರ್ಯಕ್ರಮವನ್ನು ನೆರವೇರಿಸ ಬೇಕು ಎಂದರು.

ಸಾಮೂಹಿಕ ಯೋಗ ಪ್ರದರ್ಶನ ತಾಲೀಮು ನಡೆಸಬೇಕು. ಹಲವು ಶಾಲೆ ಕಾಲೇಜು ಗಳಲ್ಲಿ ಈ ಹಿಂದಿನಿಂದಲೂ ಯೋಗ ಅಭ್ಯಾಸ ಮಾಡಲಾಗುತ್ತಿದೆ. ಇದರ ಜತೆ ಇತರೆ ವಿದ್ಯಾರ್ಥಿಗಳು, ಆಸಕ್ತರು ಯೋಗ ತಾಲೀಮು ನಡೆಸಿ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ ಕಾರ್ಯಕ್ರಮ ದಂದು ವಿಶೇಷ ಗಮನ ಸೆಳೆಯುವಂತೆ ಕಾರ್ಯಕ್ರಮ ಏರ್ಪಡಿಸಲು ಶಿಕ್ಷಣ ಇಲಾಖೆ, ಯೋಗ ಸಂಸ್ಥೆಗಳು ಕೈಜೋಡಿ ಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮಾತನಾಡಿ, ಶಿಷ್ಟಾಚಾರ ಅನು ಸಾರ ಕಾರ್ಯಕ್ರಮ ಏರ್ಪಾಡು ಮಾಡ ಬೇಕು. ಸಾಮೂಹಿಕ ಯೋಗ ಪ್ರದರ್ಶ ನದ ಜತೆಗೆ ಶಾಲಾಕಾಲೇಜು ವಿದ್ಯಾರ್ಥಿ ಗಳಿಗೆ ವಿಶೇಷವಾಗಿ ಯೋಗ ಸ್ಪರ್ಧೆಯನ್ನು ಆಯೋಜನೆ ಮಾಡಬೇಕು. ಯೋಗ ಮಹತ್ವ ತಿಳಿಸುವ ಉಪನ್ಯಾಸವನ್ನೂ ಸಹ ಪ್ರತ್ಯೇಕವಾಗಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಯೋಗದ ಪ್ರಾಮುಖ್ಯತೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಸಹ ನಡೆಸಬೇಕು. ಯೋಗ ನಡಿಗೆಯಂತಹ ಕಾರ್ಯಕ್ರಮಗಳ ಆಯೋಜನೆಯನ್ನು ಪೂರ್ವಭಾವಿಯಾಗಿ ಏರ್ಪಡಿಸಬೇಕು. ಕಳೆದ ಬಾರಿ ಯೋಗ ದಿನಾಚರಣೆ ನಡೆದ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಅಗತ್ಯ ವಿರುವ ಎಲ್ಲ ಸಿದ್ಧತೆಗೆ ಅವಶ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುನೀತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ಯಾಮಲ, ಪತಂಜಲಿ ಯೋಗ ಸಂಸ್ಥೆ ಅಧ್ಯಕ್ಷ ಎಚ್.ಜಿ.ಕುಮಾರ ಸ್ವಾಮಿ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಸಂಸ್ಥೆಯ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.