`ದೇಶದ್ರೋಹ’ ಕಾನೂನಿಗೆ ಸುಪ್ರೀಂ ತಡೆ
ಮೈಸೂರು

`ದೇಶದ್ರೋಹ’ ಕಾನೂನಿಗೆ ಸುಪ್ರೀಂ ತಡೆ

May 12, 2022

ಬ್ರಿಟಿಷ್ ಕಾಲದ ಕಾನೂನನ್ನು ಕೇಂದ್ರ ಮರುಪರಿಶೀಲಿಸುವವರೆಗೆ ದೇಶದ್ರೋಹ ಪ್ರಕರಣ ದಾಖಲಿಸದಂತೆ ಸೂಚನೆ
ನವದೆಹಲಿ, ಮೇ ೧೧- ಬ್ರಿಟಿಷರ ಕಾಲದ ದೇಶದ್ರೋಹ ಕಾನೂನಿನ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹ ಕಾನೂನನ್ನು ಸುಪ್ರೀಂಕೋರ್ಟ್ ತಡೆ ಹಿಡಿದಿದೆ. ಸದ್ಯಕ್ಕೆ ದೇಶ ದ್ರೋಹ ಆರೋಪದಡಿ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸಬಾರದು ಎಂದು ಸುಪ್ರೀಂಕೋರ್ಟ್ ಬುಧವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಬಾಕಿ ಉಳಿದಿರುವ ದೇಶದ್ರೋಹ ಪ್ರಕರಣಗಳಲ್ಲಿ, ದೇಶದ್ರೋಹದ ಆರೋಪದಡಿ ಜೈಲಿನಲ್ಲಿ ಇರುವವರು ನ್ಯಾಯಾಲಯಗಳನ್ನು ಸಂಪರ್ಕಿಸಿ ಜಾಮೀನು ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ದೇಶದ್ರೋಹಕ್ಕೆ ಸಂಬAಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೧೨೪ ಎ ಅಡಿಯಲ್ಲಿ ಯಾವುದೇ ಎಫ್‌ಐಆರ್ ದಾಖಲಿಸುವುದು ಮತ್ತು ಯಾವುದೇ ಪ್ರಕ್ರಿಯೆಗಳನ್ನು ನಡೆಸದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ದೇಶದ್ರೋಹದ ಕಾನೂನು ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ಅದನ್ನು ಬಳಸಲಾಗುವುದಿಲ್ಲ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ ಹೇಳಿದೆ. ಈಗಾಗಲೇ ಐಪಿಸಿ ಸೆಕ್ಷನ್ ೧೨೪ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ ಕಾರಣ ಜೈಲಿನಲ್ಲಿರುವವರು ಜಾಮೀನು ಪಡೆಯಲು ನ್ಯಾಯಾಲಯಗಳನ್ನು ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಸೆಕ್ಷನ್ ೧೨೪ಎ ಯ ಕಠಿಣತೆಗಳು ಪ್ರಸ್ತುತ ಪರಿಸ್ಥಿತಿಗೆ ಹೊಂದಿಕೆ ಯಾಗುವುದಿಲ್ಲ ಮತ್ತು ಇದು ದೇಶದ ವಸಾಹತುಶಾಹಿ ಕಾನೂನಿನಡಿಯಲ್ಲಿದ್ದ ಸಮಯಕ್ಕೆ ಉದ್ದೇಶಿಸಲಾಗಿತ್ತು ಎಂದು ಕೇಂದ್ರವು ಒಪುö್ಪತ್ತದೆ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ, ಕೇಂದ್ರವು ಅದನ್ನು ಮರುಪರಿಶೀಲಿಸಬಹುದು ಎಂದು ಕೋರ್ಟ್ ಹೇಳಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೧೨೪ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣ ಗಳನ್ನು ದಾಖಲಿಸಲಾಗುತ್ತಿತ್ತು. ಇದಕ್ಕೆ ವ್ಯಾಪಕ ವಿರೋಧವೂ ವ್ಯಕ್ತವಾಗಿತ್ತು.

 

Translate »