ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು
ಮೈಸೂರು

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು

December 8, 2018

ಮೈಸೂರು: ಶತಾಯುಷಿಗಳಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ರೇಲಾ ಆಸ್ಪತ್ರೆಗೆ ಕರೆದೊಯ್ದ ಹಿನ್ನೆಲೆಯಲ್ಲಿ ಆರೋಗ್ಯ ವಿಚಾರಿಸಲು ಸುತ್ತೂರು ಶ್ರೀಗಳು ವಿಮಾನದಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಿದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಶುಕ್ರವಾರ ಸಂಜೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ 7.30ರ ವಿಮಾನ ದಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಿದ್ದು, 9.20ರ ವೇಳೆಗೆ ಚೆನ್ನೈ ತಲುಪಿದ್ದಾರೆ. 9.30ರ ವೇಳೆಗೆ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಚೆನ್ನೈನ ತಜ್ಞ ವೈದ್ಯರ ಸಲಹೆ ಮೇರೆಗೆ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ರೇಲಾ ಇನ್ಸ್‍ಸ್ಟಿಟ್ಯೂಷನ್ ಆಫ್ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿತ್ತು.

Translate »