ಸುಂಟಿಕೊಪ್ಪ ಶಾಲೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ
ಮೈಸೂರು

ಸುಂಟಿಕೊಪ್ಪ ಶಾಲೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ

September 17, 2018

ಸುಂಟಿಕೊಪ್ಪ:  ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಶಾಲೆಯ ಇಕೋ ಕ್ಲಬ್ ಹಾಗೂ ವಿಜ್ಞಾನ ಸಂಘದ ವತಿಯಿಂದ ಶನಿವಾರ (ಸೆ.15 ರಂದು) ‘ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಸ್ವಚ್ಛತಾ ಕಾರ್ಯಕ್ಕೆ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಶಾಲಾ ವಿದ್ಯಾರ್ಥಿಗಳು, ನಮ್ಮ ಮನೆ, ಶಾಲೆ, ಸಮುದಾಯ ಹಾಗೂ ಸುತ್ತ ಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದಾಗಿ ಸಂಕಲ್ಪ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ, ಪರಿಸರ ಸ್ವಚ್ಛತೆಯ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

‘ಸ್ವಚ್ಛತೆಯೇ ಸೇವೆ’ ಅಭಿಯಾನದ ಪ್ರತಿಜ್ಞಾ ವಿಧಿ ಬೋಧಿಸಿದ ಇಕೋ ಕ್ಲಬ್‍ನ ಉಸ್ತುವಾರಿ ಶಿಕ್ಷಕ ಟಿ.ಜಿ.ಪ್ರೇಮ ಕುಮಾರ್, ವಿದ್ಯಾರ್ಥಿಗಳು ತಮ್ಮನ್ನು ಸ್ವಚ್ಛತಾ ಕಾರ್ಯ ದಲ್ಲಿ ಪಾಲ್ಗೊಂಡು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ವಿಜ್ಞಾನ ಸಂಘದ ಶಿಕ್ಷಕಿ ಎಂ.ಎನ್.ಲತಾ, ಶಿಕ್ಷಕರು ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ವಿದ್ಯಾರ್ಥಿ ಗಳು ಶಾಲಾವರಣದಲ್ಲಿ ಶ್ರಮ ದಾನದ ಮೂಲಕ ಸ್ವಚ್ಛತೆ ಕೈಗೊಂಡರು. ಸ್ವಚ್ಛತೆ ಕುರಿತು ಘೋಷಣೆಗಳನ್ನು ಪ್ರದರ್ಶಿಸಿದರು.
ಸರ್ ಎಂ.ವಿ. ದಿನಾಚರಣೆ : ಶಾಲೆಯಲ್ಲಿ ಇದಕ್ಕೂ ಮುನ್ನ ಸರ್ ಎಂ.ವಿಶ್ವೇ ಶ್ವರಯ್ಯ ಅವರ ಜನ್ಮದಿನವನ್ನು ಆಚರಿಸ ಲಾಯಿತು. ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿ ಗಳಿಗೆ ಸರ್ ಎಂ.ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಸಾಧನೆ ಕುರಿತು ತಿಳಿಸಿದರು.

Translate »