ಗುಂಡ್ಲುಪೇಟೆ: ಆಧಾರ್ ಅದಾಲತ್ ಕಾರ್ಯಕ್ರಮವನ್ನು ತಾಲೂಕಿನ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸಿ.ಭಾರತಿ ಸಲಹೆ ನೀಡಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ಬೆಂಗಳೂರಿನ ಇ-ಆಡಳಿತದಿಂದ ಹಮ್ಮಿಕೊಂಡಿರುವ ಆಧಾರ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸೆ. 22ರವರೆಗೆ ಪ್ರತಿದಿನ ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಆಧಾರ್ ಕಾರ್ಡ್ಗೆ ಸಂಬಂಧಿಸಿದ ಮಾಹಿತಿಯನ್ನು ಬಯೋಮೆಟ್ರಿಕ್ ಪದ್ಧತಿಯಲ್ಲಿ ಮಾಡಲಾಗುತ್ತಿದೆ. ತಾಲೂಕಿನ ಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ವೈಎಪಿ ಸೇರಿದಂತೆ…