ಮೈಸೂರು: ಬೇಸಿಗೆ ರಜೆ ಮುಗಿಸಿ ಮಕ್ಕಳು ಇಂದು ಶಾಲೆಗಳಿಗೆ ಮರಳಿದ್ದಾರೆ. ತುಂಬು ಉತ್ಸಾಹ ದಿಂದ ಬ್ಯಾಗ್ ನೇತು ಹಾಕಿಕೊಂಡು ಶಾಲೆಗಳಿಗೆ ಮರಳಿದ ವಿದ್ಯಾರ್ಥಿಗಳಿಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೋಮವಾರ ಮೈಸೂರಿನ ಕನಕಗಿರಿಯ ಶಾರದಾ ವಿಲಾಸ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪುಷ್ಪಗುಚ್ಛ ನೀಡಿ ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ಪಠ್ಯ ಪುಸ್ತಕಗಳನ್ನು ವಿತರಿಸಿದರು. ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಅಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಪ್ರಥಮ…