ಮಡಿಕೇರಿ: ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಭ್ರಷ್ಟಾಚಾರ ವಿಗ್ರಹ ದಳ ಬೇಟೆ ಮುಂದುವರಿಸಿದ್ದು, ಚೆಸ್ಕಾಂ ಇಲಾಖೆಯ ಮಡಿಕೇರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಬಂಧಿಸಿದೆ. ಆ ಮೂಲಕ ಚೆಸ್ಕಾಂ ಇಲಾಖೆಗೂ ಎಸಿಬಿ ಅಧಿಕಾರಿ ಗಳು ಶಾಕ್ ನೀಡಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಉಪ ಅಧೀಕ್ಷಕ ಪೂರ್ಣ ಚಂದ್ರ ತೇಜಸ್ವಿ, ವೃತ್ತ ನಿರೀಕ್ಷಕ ಶೇಖರ್ ನೇತೃತ್ವದಲ್ಲಿ ದಾಳಿ ಸಂಘಟಿಸಿದ ಎಸಿಬಿ ಅಧಿಕಾರಿಗಳು ಚೆಸ್ಕಾಂ ಅಭಿಯಂತರ ಆಜಾದ್ ಅಲಿ ಶೌಕತ್ ಅಲಿ ದೊಡ್ಡಮನಿ ಯನ್ನು…
ಚಾಮರಾಜನಗರ ಸಬ್ ರಿಜಿಸ್ಟರ್ ಕಚೇರಿಯ ಮೇಲೆ ಎಸಿಬಿ ದಾಳಿ ಪ್ರಕರಣ
November 18, 2018ಉಪನೋಂದಣಾಧಿಕಾರಿ ಸೇರಿ 8 ಮಂದಿಗೆ ನೋಟೀಸ್ ಚಾಮರಾಜನಗರ: ನಗರದ ಉಪ ನೋಂದಣಾಧಿಕಾರಿಗಳ ಕಚೇರಿ (ಸಬ್ ರಿಜಿಸ್ಟರ್ ಆಫೀಸ್)ಮೇಲೆ ಶುಕ್ರವಾರ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು (ಎಸಿಬಿ) ದಾಳಿ ನಡೆಸಿ ಮಧ್ಯ ರಾತ್ರಿಯವರೆಗೂ ಕಡತಗಳ ಪರಿಶೀಲನೆ ನಡೆಸಿದರು. ಈ ವೇಳೆ ಕಚೇರಿಯಲ್ಲಿ ಹೆಚ್ಚುವರಿ ಹಣ ದೊರೆತ ಕಾರಣ ಉಪನೋಂದಣಾಧಿಕಾರಿ ಗೀತಾ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ನೋಟೀಸ್ ಜಾರಿಗೊಳಿಸಿದ್ದಾರೆ. ನಗರದ ತಹಶೀಲ್ದಾರ್ ಕಚೇರಿ ಕಟ್ಟಡದಲ್ಲಿರುವ ಸಬ್ ರಿಜಿಸ್ಟರ್ ಕಚೇರಿಯಲ್ಲಿ ದಾಖ ಲಾತಿ ರಿಜಿಸ್ಟರ್ ಮಾಡಿಸಲು, ವಿವಾಹ ನೋಂದಣಿ…
ಜೈಲು ಸೇರಿದ ಮಾಯಾದೇವಿ ಗಲಗಲಿ
November 17, 2018ಮಡಿಕೇರಿ: ಮಹಿಳೆಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಭ್ರಷ್ಟಾಚಾರ ನಿಗ್ರಹದಳದಿಂದ ಬಂಧಿಸಲ್ಪಟ್ಟ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ ಅವರು ತನಗೆ ಕಡಿಮೆ ರಕ್ತದೊತ್ತಡ ಇರುವುದಾಗಿ ಹೇಳಿ ಗುರುವಾರ ರಾತ್ರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯ ಬಳಿಕ ಗುಣಮುಖ ಆಗಿರುವುದನ್ನು ಧೃಡಪಡಿಸಿಕೊಂಡ ಎಸಿಬಿ ಅಧಿಕಾರಿಗಳ ತಂಡ ಜಿಲ್ಲಾಸ್ಪತ್ರೆಗೆ ತೆರಳಿ ವೈದ್ಯರನ್ನು ಸಂಪರ್ಕಿಸಿ ಪರಾಮರ್ಶೆ ನಡೆಸಿದರು. ಮಾಯಾದೇವಿ ಗಲಗಲಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದನ್ನು ಖಚಿತಪಡಿಸಿ ಕೊಂಡ ಅಧಿಕಾರಿಗಳ ತಂಡ, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ ಜಿಲ್ಲಾ…
ಬಿಡಿಎ, ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ, 4 ಕೆಜಿ ಚಿನ್ನ, 10 ಕೋಟಿ ನಗದು ಪತ್ತೆ
October 6, 2018ಬೆಂಗಳೂರು: ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಶುಕ್ರವಾರ ಕರ್ನಾಟಕ ಕೈಗಾರಿಕಾ ಪ್ರಾದೇಶಾಭಿವೃದ್ಧಿ ಮಂಡಳಿಯ(ಕೆಐಎಡಿಬಿ) ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್.ಸ್ವಾಮಿ ಮತ್ತು ಬಿಡಿಎ ಚೀಫ್ ಎಂಜಿನಿಯರ್ ಗೌಡಯ್ಯ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಟಿ.ಆರ್. ಸ್ವಾಮಿ ಮತ್ತು ಗೌಡಯ್ಯ ಅವರು ಆದಾಯಕ್ಕೂ ಮೀರಿ ಅಪಾರ ಪ್ರಮಾಣದ ಆಸ್ತಿಗಳಿಸಿದ ಬಗ್ಗೆ ದೂರು ಹಾಗೂ ಮಾಹಿತಿಯನ್ನು ಆಧರಿಸಿ ಎಸಿಬಿ ಅಧಿಕಾರಿಗಳ ತಂಡ ಇಂದು ಇಬ್ಬರ ಕಚೇರಿ ಮನೆ ಸೇರಿದಂತೆ 8…
ಮನೆ ಖಾತೆ ವರ್ಗಾವಣೆಗೆ ಲಂಚ ಸ್ವೀಕಾರ
September 20, 2018ಎಸಿಬಿ ಬಲೆಗೆ ಬಿದ್ದ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ಮೈಸೂರು: ಮನೆ ಖಾತೆ ವರ್ಗಾ ವಣೆ ಮಾಡಲು 2 ಸಾವಿರ ಲಂಚ ಸ್ವೀಕರಿಸುತ್ತಿದ್ದ ರೆವಿನ್ಯೂ ಇನ್ಸ್ಪೆಕ್ಟರ್ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪಾಲಿಕೆ ವಲಯ ಕಚೇರಿ-8(ಉದಯಗಿರಿ)ರ ರೆವಿನ್ಯೂ ಇನ್ಸ್ಪೆಕ್ಟರ್(ಆರ್ಐ) ಪಿ.ಕುಮಾರ ಸ್ವಾಮಿ ಎಸಿಬಿ ಬಲೆಗೆ ಬಿದ್ದವರು. ಉದಯಗಿರಿ ನಿವಾಸಿ ಲಕ್ಷ್ಮಿಬಾಯಿ ಎಂಬುವರು ಮನೆ ಖಾತೆ ವರ್ಗಾವಣೆಗಾಗಿ ವಲಯ ಕಚೇರಿ 8ರಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆರ್ಐ ಕುಮಾರಸ್ವಾಮಿ ಖಾತೆ ವರ್ಗಾವಣೆ ಮಾಡಿಕೊಡಲು ಇಲ್ಲದ ಸಬೂಬು ಹೇಳಿ ಸತಾಯಿಸುತ್ತಿದ್ದರು. ಇದರಿಂದ ಮನನೊಂದ…
ಲಂಚ ಸ್ವೀಕಾರ ಎಸಿಬಿ ಬಲೆಗೆ ಬಿದ್ದ ವಾಲ್ಮೀಕಿ ನಿಗಮದ ಅಧಿಕಾರಿಗಳು
June 9, 2018ಚಾಮರಾಜನಗರ: ಫಲಾನುಭವಿಯೊಬ್ಬರಿಗೆ ಸಬ್ಸಿಡಿ ಹಣ ಬಿಡುಗಡೆಗೆ ಲಂಚ ಸ್ವೀಕರಿಸುವ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಗಳಿಬ್ಬರು ನಗರದ ಜಿಲ್ಲಾಡಳಿತ ಭವನ ದಲ್ಲಿ ಶುಕ್ರವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್.ಕೆಂಪಯ್ಯ ಹಾಗೂ ಪ್ರಥಮ ದರ್ಜೆ ಸಹಾಯಕ ಪ್ರಕಾಶ ಎಸಿಬಿ ಬಲೆಗೆ ಬಿದ್ದವರು. ಘಟನೆ ವಿವರ: ಚಾಮರಾಜನಗರದ ಮಹೇಶ ಎಂಬುವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಕ್ಕೆ ಕಾರು ಖರೀದಿಸಲು ಅರ್ಜಿ ಸಲ್ಲಿಸಿದ್ದರು. ಕಾರಿನ ಸಬ್ಸಿಡಿ…