ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿಂದು ಸರಣ ಅಪ ಘಾತ ಸಂಭವಿಸಿದ್ದು, ಯಾವುದೇ ಗಂಭೀರ ಸಾವು ನೋವು ಸಂಭವಿಸದೇ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿರುವ ಘಟನೆ ಶ್ರೀರಂಗ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಶೆಟ್ಟಹಳ್ಳಿ ಬಳಿ ಗುರುವಾರ ನಡೆದಿದೆ. ಕೆ.ಶೆಟ್ಟಹಳ್ಳಿ ಬಳಿಯ ಹೆದ್ದಾರಿಯಲ್ಲಿ ಮೈಸೂರು ಕಡೆ ಚಲಿಸುತ್ತಿದ್ದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಟ್ಯಾಂಕರ್, ಟಿಪ್ಪರ್, ಆಪೇ ಆಟೋ, ಕಾರು ಸೇರಿ ದಂತೆ ಹಲವು ವಾಹನಗಳು ಜಖಂ ಆಗಿವೆ. ಇನ್ನು ಕಾರಿನ ಮೇಲೆ ಮರಳು ತುಂಬಿದ ಟಿಪ್ಪರ್ ಲಾರಿ…
ಬೈಕ್ಗಳ ಮುಖಾಮುಖಿ ಡಿಕ್ಕಿ; ಯುವಕ ಸಾವು
May 31, 2018ಕುಶಾಲನಗರ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಗುಮ್ಮನಕೊಲ್ಲಿ ಬಳಿಯ ವೀರಭೂಮಿ ಸರ್ಕಲ್ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತೊರೆನೂರು ಗ್ರಾಮದ ಮೀನಾಕ್ಷಿ ಎಂಬುವರ ಪುತ್ರ ರಕ್ಷಿತ್ (23) ಮೃತಪಟ್ಟ ಯುವಕ. ರಕ್ಷಿತ್ ತನ್ನ ಬೈಕ್ನಲ್ಲಿ ಸ್ನೇಹಿತ ಗಿರೀಶ್ ನೊಂದಿಗೆ ಕುಶಾಲನಗರದಿಂದ ತಮ್ಮ ಗ್ರಾಮ ತೊರೆನೂರಿಗೆ ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ವೀರಭೂಮಿ ಸರ್ಕಲ್ ಬಳಿ ಎದುರಿನಿಂದ ಬಂದ ಬೈಕ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಸಂದರ್ಭ ರಸ್ತೆ ಮೇಲೆ ಬಿದ್ದ ರಕ್ಷಿತ್ಗೆ…
ಹಳ್ಳಕ್ಕೆ ಉರುಳಿದ ಟ್ರಾಕ್ಟರ್: ಮೂವರ ಸಾವು
May 30, 2018ಮಂಡ್ಯ: ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಶ್ರೀರಂಗ ಪಟ್ಟಣ ತಾಲೂಕಿನ ನೇರಳೆಕೆರೆ ಗ್ರಾಮದ ಬಳಿ ಇಂದು ನಡೆದಿದೆ.ಟ್ರಾಕ್ಟರ್ ಚಾಲಕ ಪ್ರಸನ್ನ, ದೊಡ್ಡಪಾಳ್ಯ ಗ್ರಾಮದ ನಾಥೇಗೌಡರ ಮಗ ಪ್ರವೀಣ್(32) ಮತ್ತು ಹಂಗರಹಳ್ಳಿ ಗ್ರಾಮದ ಮಟ್ಟಿಗೌಡರ ಪುತ್ರ ನಿಖಿಲ್(34) ಮೃತ ದುರ್ದೈವಿಗಳು. ಘಟನೆ ಹಿನ್ನೆಲೆ: ಇಂದು ಮಧ್ಯಾಹ್ನ ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಕ್ವಾರಿಯಿಂದ ಯಾಚೇನಹಳ್ಳಿ ಗ್ರಾಮಕ್ಕೆ ಕಲ್ಲುಗಳನ್ನು ತುಂಬಿಕೊಂಡು ಟ್ರಾಕ್ಟರ್ (ಕೆಎ 11, ಟಿ…
ಬೈಕುಗಳ ನಡುವೆ ಡಿಕ್ಕಿ: ಓರ್ವ ಸಾವು, ಮತ್ತೋರ್ವನಿಗೆ ಗಾಯ
May 29, 2018ಮೈಸೂರು: ಎರಡು ಬೈಕುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ನಗರ ತಾಲೂಕು, ಕಲ್ಯಾಣಪುರ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ. ಗ್ರಾಮದ ಸತೀಶ್ ನಾಯಕ(32) ಸಾವನ್ನಪ್ಪಿದವರಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಉದಯ್ ಅವರನ್ನು ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ-ಮೈಸೂರು ಹೆದ್ದಾರಿಯ ಕಲ್ಯಾಣಪುರ ಬಳಿ ಎರಡು ಬೈಕುಗಳು ಡಿಕ್ಕಿ ಹೊಡೆದ ಪರಿಣಾಮ ಸತೀಶ್ ನಾಯಕ ತಲೆಗೆ ತೀವ್ರ ಗಾಯಗಳಾಗಿ ರಕ್ತಸ್ರಾವವಾದ ಕಾರಣ ಅವರು ಸ್ಥಳದಲ್ಲೇ ಅಸುನೀಗಿದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ…
ರಸ್ತೆ ದಾಟುತ್ತಿದ್ದ ವ್ಯಕ್ತಿ ಬಸ್ ಹರಿದು ಸಾವು
May 27, 2018ಮೈಸೂರು: ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ನಂಜನಗೂಡು ರಸ್ತೆ, ಕಡಕೊಳದಲ್ಲಿ ನಡೆದಿದೆ. ಕಡಕೊಳದ ಪಂಜಾಬಿ ಡಾಬದ ಬಳಿ ಮೇ 24ರಂದು ರಾತ್ರಿ ಸುಮಾರು 9.30ರ ವೇಳೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ, ನಂಜನಗೂಡಿನಿಂದ ಮೈಸೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್(ಕೆಎ-10, ಎಫ್-0110) ಡಿಕ್ಕಿ ಹೊಡೆದಿದೆ. ಪರಿಣಾಮ ಅಪರಿಚಿತ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟು ಬಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ವ್ಯಕ್ತಿಗೆ ಸುಮಾರು…
ಸ್ಕೂಟರ್ಗೆ ಟಿಪ್ಪರ್ ಡಿಕ್ಕಿ: ಯುವತಿ ಸಾವು, ಮತ್ತೊಬ್ಬ ಯುವತಿಗೆ ಗಂಭೀರ ಗಾಯ
May 26, 2018ಮೈಸೂರು: ಸ್ಕೂಟರ್ಗೆ ಟಿಪ್ಪರ್ ಹಿಂದಿ ನಿಂದ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ಹಳೇ ಟೋಲ್ಗೇಟ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೈಸೂರಿನ ಕೃಷ್ಣಮೂರ್ತಿಪುರಂ ನಿವಾಸಿಗಳಾದ ಚಂದ್ರಶೇಖರ್ ಅವರ ಪುತ್ರಿ ನೇಹಾ(19) ಸಾವನ್ನಪ್ಪಿದವರು. ತೀವ್ರ ಗಾಯ ಗೊಂಡಿರುವ ಜ್ಞಾನೇಶ್ವರ್ ಅವರ ಪುತ್ರಿ ಪ್ರಕೃತಿ(21)ಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗ ತಾನೇ ದ್ವಿತೀಯ ಪಿಯುಸಿ ಪಾಸಾಗಿದ್ದ ನೇಹಾ ಮತ್ತು ಬಿಎಸ್ಸಿ ಓದುತ್ತಿದ್ದ…
ಆಟೋ ಪಲ್ಟಿ: ಪ್ರಯಾಣಿಕ ಸಾವು
May 25, 2018ಹಾಸನ: ಆಟೋ ಪಲ್ಟಿಯಾಗಿ ಪ್ರಯಾಣಿಕನೊಬ್ಬ ಸಾವಿಗೀಡಾಗಿರುವ ಘಟನೆ ಹಾಸನ-ಅರಕಲಗೂಡು ರಸ್ತೆಯ ಫಾರಂ ಹೌಸ್ ಸಮೀಪದ ಕಬ್ಬಿನಹಳ್ಳಿ ಬಾರೆ ಹತ್ತಿರ ಮಂಗಳವಾರ ನಡೆದಿದೆ. ತಾಲೂಕಿನ ಕಸಬಾ ಹೋಬಳಿಯ ಅಗಿಲೆ ಗ್ರಾಮದ ನಿವಾಸಿ ಕರಿಗೌಡ(45) ಮೃತಪಟ್ಟ ವ್ಯಕ್ತಿ. ಹಾಸನದಿಂದ ಅಗಿಲೆ ಗ್ರಾಮಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪರಿಣಾಮ ಆಟೋದಲ್ಲಿ ಪ್ರಯಾಣ ಸುತ್ತಿದ್ದ ಕರಿಗೌಡ ಅವರಿಗೆ ತೀವ್ರವಾದ ಪೆಟ್ಟಾಗಿದೆ. ಅವರನ್ನು ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ…
ಮೊಪೆಡ್ಗೆ ಕಾರು ಡಿಕ್ಕಿ; ಓರ್ವ ಸಾವು
May 7, 2018ಚಾಮರಾಜನಗರ: ದ್ವಿಚಕ್ರ ವಾಹನ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ತಾಲೂಕಿನ ಮರಿಯಾಲದ ಗೇಟ್ ಬಳಿ ಭಾನುವಾರ ನಡೆದಿದೆ. ತಾಲೂಕಿನ ಹೆಗ್ಗೊಠಾರ ಗ್ರಾಮದ ಸಿದ್ದರಾಮಪ್ಪ(52) ಬಿನ್ ಲೇ.ಕೋಣ ನೂರು ನಾಗಪ್ಪ ಮೃತಪಟ್ಟವರು. ತಮ್ಮ ಗ್ರಾಮದಿಂದ ಸೂಪರ್ ಎಕ್ಸೆಲ್ ವಾಹನ ದಲ್ಲಿ ಚಾ.ನಗರಕ್ಕೆ ಬರುತ್ತಿದ್ದರು. ಮರಿ ಯಾಲ ಗೇಟ್ ಬಳಿ ಮೈಸೂರಿನಿಂದ ಬರುತ್ತಿದ್ದ ಮಾರುತಿಕಾರು ಡಿಕ್ಕಿ ಹೊಡೆದು ತಲೆಗೆ ತೀವ್ರಪೆಟ್ಟಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ: ಸವಾರ ಸಾವು
May 6, 2018ಹನೂರು: ತಾಲ್ಲೂಕಿನ ವಡಕೆಹಳ್ಳ ಗ್ರಾಮದ ಸಮೀಪ ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ವಡಕೆಹಳ್ಳ ಗ್ರಾಮದ ವಾಟರ್ ಮೆನ್ ಗೋವಿಂದ (45) ಮೃತಪಟ್ಟ ವ್ಯಕ್ತಿ. ಗೋವಿಂದ ಅವರು ಬೆಳ್ಳಿಗೆ ಮನೆಯಿಂದ ಗ್ರಾಮ ಬಸ್ನಿಲ್ದಾಣದ ಕಡೆಗೆ ತಮ್ಮ ಬೈಕ್ನಲ್ಲಿ ಬರುತ್ತಿದ್ದಾಗ ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಗೋವಿಂದ ಅವರ ತಲೆಗೆ ಬಲವಾಗಿ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ….
ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿ, ಯುವಕ ಸಾವು
May 5, 2018ಚಾಮರಾಜನಗರ: ಬೈಕ್ ಗೆ ಪೊಲೀಸ್ ಜೀಪ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕು ಬಸವಟ್ಟಿ ಗ್ರಾಮದಲ್ಲಿ ನಡೆದಿದೆ. ಸಂತೇಮರಹಳ್ಳಿ ಮೈಸೂರು ರಸ್ತೆಯ ಬಸವಟ್ಟಿ ಗೇಟ್ ಸಮೀಪ ಬೈಕ್ನಲ್ಲಿ ಬರುತ್ತಿದ್ದ ಶಂಭುಲಿಂಗಪ್ಪ (ಚಿಕ್ಕಣ್ಣ) ಅವರ ವಾಹನಕ್ಕೆ ಡಿವೈಎಸ್ಪಿ ಜಯಕುಮಾರ್ ಪ್ರಯಾಣ ಸುತ್ತಿದ್ದ ಪೆÇಲೀಸ್ ಜೀಪ್ ಡಿಕ್ಕಿಯಾಗಿದೆ. ಶುಕ್ರವಾರ ನಡೆದ ಘಟನೆಯಲ್ಲಿ ಶಂಭುಲಿಂಗಪ್ಪ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರೆಲ್ಲ ಸೇರಿ ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ…