ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ): ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಬುಧವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಯೊಂದಿಗೆ ಭೇಟಿ ನೀಡಿ ಕಾಲಭೈರವೇಶ್ವರ ಸ್ವಾಮಿಗೆ ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ನಾಗಲಿಂಗೇಶ್ವರಸ್ವಾಮಿ ಸನ್ನಿಧಿ ಯಲ್ಲಿ ಆಯೋಜಿಸಲಾಗಿದ್ದ ಮೃತ್ಯುಂ ಜಯ ಹೋಮದ ಪೂರ್ಣಾಹುತಿ ಕೈಂಕರ್ಯದಲ್ಲಿ ಪಾಲ್ಗೊಂಡರು. ಶ್ರೀ ಕಾಲಭೈರವೇಶ್ವರ ಸ್ವಾಮಿಯ ಗರ್ಭ ಗುಡಿಯ ಮುಂಭಾಗದಲ್ಲಿ ಹೆಚ್.ಡಿ. ಕುಮಾರಸ್ವಾಮಿ ದಂಪತಿ ಸಮ್ಮುಖದಲ್ಲಿ ನಡೆದ ವಿಶೇಷ ಪೂಜೆಯನ್ನು ಮಠದ ಪೀಠಾಧ್ಯಕ್ಷರಾದ ನಿರ್ಮಲಾ ನಂದನಾಥ ಸ್ವಾಮೀಜಿ…