ಮಾನ್ಯ ಮುಖ್ಯಮಂತ್ರಿಯವರೇ, ಸುಪ್ರಸಿದ್ಧ ಬೃಂದಾವನ ಉದ್ಯಾನವನವನ್ನು ಅಮೇರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂಬ ವರದಿಯನ್ನು ನಾನು ಇಂದು ಓದಿದಾಗ ನನಗೆ ಸಬೇದಾಶ್ಚರ್ಯವಾಯಿತು. ಅಂದಿನ ಮೈಸೂರು ಮಹರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ರವರು ಜನರ ಅನುಕೂಲಕ್ಕಾಗಿ ಕಾವೇರಿ ನದಿಗೆ ಒಂದು ಅಣೆಕಟ್ಟು ಕಟ್ಟುವ ಕನಸು ಹೊಂದಿದ್ದರು. ಅದಕ್ಕಾಗಿ ಅವರು ಸರ್ ಎಂ. ವಿಶ್ವೇಶ್ವರಯ್ಯ ಅವರನ್ನು ಮುಖ್ಯ ಇಂಜಿನಿಯರ್ ಆಗಿ ನೇಮಿಸಿದರು. ಅಣೆಕಟ್ಟಿನ ಒಂದು ಹಂತದ ಕೆಳಗೆ ಸುಂದರವಾದ ಬೃಂದಾವನ ಉದ್ಯಾನವನವನ್ನು ನಿರ್ಮಿಸಲಾಯಿತು ಮತ್ತು ಅದನ್ನು ಆಗ ಕೃಷ್ಣರಾಜ ಟೆರೆಸ್ ಗಾರ್ಡನ್…