Tag: Ananth Kumar

ಪಂಚಭೂತಗಳಲ್ಲಿ ಅನಂತಕುಮಾರ್ ಲೀನ
ಮೈಸೂರು

ಪಂಚಭೂತಗಳಲ್ಲಿ ಅನಂತಕುಮಾರ್ ಲೀನ

November 14, 2018

ಬೆಂಗಳೂರು: ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅನಂತಕುಮಾರ್ ಅವರ ಪಾರ್ಥಿವ ಶರೀರ ಮಂಗಳವಾರ ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಕೊನೆಯುಸಿರೆಳೆದಿದ್ದ ಅನಂತಕುಮಾರ್ ಅವರ ಅಂತ್ಯಕ್ರಿಯೆ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿತು. ಋಗ್ವೇದ ಆಶ್ವಲಾಯನ ಸ್ಮಾರ್ತ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನಗಳು ನಡೆದವು. ಅನಂತಕುಮಾರ್ ಅವರ ಸೋದರ ನಂದಕುಮಾರ್, ಪುರೋಹಿತ ಶ್ರೀನಾಥ್ ಮಾರ್ಗದರ್ಶನದಲ್ಲಿ ವಿಧಿ-ವಿಧಾನ ನೆರವೇರಿಸಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. 45 ನಿಮಿಷಗಳ ಕಾಲ ಈ ಪ್ರಕ್ರಿಯೆಗಳು ನಡೆದವು. ಸರ್ಕಾರಿ…

ಅನಂತಕುಮಾರ್ ಕೇಂದ್ರ ಸಚಿವ ಇನ್ನಿಲ್ಲ
ಮೈಸೂರು

ಅನಂತಕುಮಾರ್ ಕೇಂದ್ರ ಸಚಿವ ಇನ್ನಿಲ್ಲ

November 13, 2018

ಬೆಂಗಳೂರು:  ಕರ್ನಾಟಕದಲ್ಲಿ ಬಿಜೆಪಿಯ ಬೇರಿಗೆ ನೀರೆರೆದು ಪೋಷಿಸಿದ ಕೇಂದ್ರ ಸಚಿವ ಅನಂತಕುಮಾರ್ (59) ಇಂದಿಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಶ್ವಾಸಕೋಶ ಕ್ಯಾನ್ಸರ್‍ನಿಂದ ತೀವ್ರವಾಗಿ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಪತ್ನಿ ತೇಜಸ್ವಿನಿ, ಮಕ್ಕಳಾದ ಐಶ್ವರ್ಯ, ವಿಜೇತ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿರುವ ಅನಂತಕುಮಾರ್ ಕಳೆದ 1996 ರಿಂದ ಸತತ ವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಲೋಕ ಸಭೆಗೆ ಆಯ್ಕೆಯಾಗಿ ಉಭಯ ಸರ್ಕಾರ ಹಾಗೂ ಪಕ್ಷದಲ್ಲಿ ದೆಹಲಿ ಮತ್ತು ಕರ್ನಾಟಕದ ಕೊಂಡಿ…

ಕೇಂದ್ರ ಸಚಿವ ಅನಂತ್‍ಕುಮಾರ್‍ಗೆ ಶ್ರದ್ಧಾಂಜಲಿ
ಮೈಸೂರು

ಕೇಂದ್ರ ಸಚಿವ ಅನಂತ್‍ಕುಮಾರ್‍ಗೆ ಶ್ರದ್ಧಾಂಜಲಿ

November 13, 2018

ನಂಜನಗೂಡು:  ಇಂದು ಮುಂಜಾನೆ ವಿಧಿವಶರಾದ ಕೇಂದ್ರ ಸಚಿವ ಅನಂತ್ ಕುಮಾರ್‍ಗೆ ಎಂಜಿಎಸ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು, ಮುಖಂಡರು ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಸುಮಾರು 6 ಬಾರಿ ಗೆದ್ದಿದ್ದ ಅನಂತ್ ಕುಮಾರ್ ಅವರ ಅಗಲಿಕೆ ಪಕ್ಷ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ನಾನು ಶಾಸಕನಾಗಿ ಆಯ್ಕೆಯಾದಂತಹ ಸಂದರ್ಭದಲ್ಲಿ ಭೇಟಿ ಮಾಡಿದ್ದೆ. ಆ ವೇಳೆ ನಂಜನಗೂಡು ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ಜನ ನಾಯಕರಾಗಿ ಕೆಲಸ ಮಾಡು ವಂತೆ ಸಲಹೆ ನೀಡಿದರು ಎಂದು ನೆನೆದರು….

ಬಿಜೆಪಿಗೆ ರಾಜಕೀಯ ಅಸ್ತಿತ್ವ ತಂದುಕೊಟ್ಟವರು ಅನಂತಕುಮಾರ್
ಮೈಸೂರು

ಬಿಜೆಪಿಗೆ ರಾಜಕೀಯ ಅಸ್ತಿತ್ವ ತಂದುಕೊಟ್ಟವರು ಅನಂತಕುಮಾರ್

November 13, 2018

ತಿ.ನರಸೀಪುರ:  ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ನಿಷ್ಠಾವಂತ ಕಾರ್ಯಕರ್ತರಾಗಿ ಜನಸಂಘದಲ್ಲಿ ದುಡಿದು ಸೇವೆಯ ಮೂಲಕವೇ ಬಿಜೆಪಿಗೆ ರಾಜಕೀಯ ಅಸ್ತಿತ್ವ ತಂದುಕೊಟ್ಟಂತಹ ಕೇಂದ್ರ ಸಚಿವ ಅನಂತಕುಮಾರ್ ಅವರು ಪಕ್ಷದ ಸಂಘಟನಾ ಚತುರರಾಗಿದ್ದರು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಹೆಚ್.ಎಂ.ಪರಶಿವಮೂರ್ತಿ ಹೇಳಿದರು. ಪಟ್ಟಣದ ಕಾಲೇಜು ರಸ್ತೆಯ ವಿವೇಕಾ ನಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಅವರ ಭಾವಪೂರ್ಣ ಶ್ರದ್ಧಾಂಜಲಿ ಸಭೆ ಯಲ್ಲಿ ಮಾತನಾಡಿದರು. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಹಂತದಲ್ಲಿ ರಾಜಕೀಯ ಅಧಿಕಾರವನ್ನು ಪಡೆದುಕೊಂಡು ಸಂಸದ, ಕೇಂದ್ರ…

ಅನಂತಕುಮಾರ್ ಅವರಿಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ
ಹಾಸನ

ಅನಂತಕುಮಾರ್ ಅವರಿಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ

November 13, 2018

ಬಿಜೆಪಿ ಪಕ್ಷದ ಗೊಂದಲ ನಿವಾರಣೆ ಮಾಡಿದ ಏಕೈಕ ವ್ಯಕ್ತಿ ಅನಂತಕುಮಾರ್ ಹಾಸನ: ರಾಜ್ಯದಲ್ಲಿ ಬಿಜೆಪಿ ಪಕ್ಷದ ಗೊಂದಲ ನಿವಾರಣೆ ಮಾಡಿದ ಏಕೈಕ ವ್ಯಕ್ತಿ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಸೋಮ ವಾರ ಬೆಳಿಗ್ಗೆ ಹಾಸನ ಜಿಲ್ಲಾ ಪಕ್ಷದ ಕಚೇರಿ ಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮೊದಲು ಅನಂತಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ನಂತರ ಎರಡು ನಿಮಿಷ ಮೌನ ಆಚರಿಸಲಾಯಿತು. ನಂತರ ಮಾತನಾಡಿದ ಬಿಜೆಪಿ ಮುಖಂಡ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವಿಲೆ…

ಅರಸೀಕೆರೆ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದ ಅನಂತಕುಮಾರ್
ಮೈಸೂರು

ಅರಸೀಕೆರೆ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದ ಅನಂತಕುಮಾರ್

November 13, 2018

ಅರಸೀಕೆರೆ: ಕೇಂದ್ರ ಸಚಿವ ಅನಂತಕುಮಾರ್ ತಮ್ಮ ಅಂದಿನ ಎಬಿವಿಪಿ ಸೇವಾ ಕಾರ್ಯಕ್ರಮಗಳಿಗೆ ಅರಸೀಕೆರೆ ನಗರವನ್ನು ಕೇಂದ್ರ ಸ್ಥಾನವನ್ನಾಗಿ ಆಯ್ಕೆ ಮಾಡಿಕೊಂಡು ನಮ್ಮೊಂದಿಗೆ ಅವಿನಾ ಭಾವ ಸಂಬಂಧವನ್ನು ತಮ್ಮ ರಾಜಕೀಯದ ಕೊನೆ ದಿನಗಳವರೆಗೂ ಇಟ್ಟುಕೊಂಡಿ ದ್ದರು ಎಂದು ಮಾಜಿ ಶಾಸಕ ಎ.ಎಸ್. ಬಸವರಾಜು ಹೇಳಿದರು. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಅವರ ನಿಧನಕ್ಕೆ ಏರ್ಪಡಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನಂತಕುಮಾರ್ ಮತ್ತು ಪಿ.ಜಿ.ಆರ್. ಸಿಂಧ್ಯಾ ಇವರಿಬ್ಬರೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಲ್ಲಿ ಲವ-ಕುಶರಂತೆ ಸಂಘಟನೆಗಾಗಿ…

ಕೊಡಗು ಜಿಲ್ಲೆಯಲ್ಲಿ ಕೇಂದ್ರ ಸಚಿವ ಅನಂತ್‌ಕುಮಾರ್‌ಗೆ ಭಾವನಮನ
ಕೊಡಗು

ಕೊಡಗು ಜಿಲ್ಲೆಯಲ್ಲಿ ಕೇಂದ್ರ ಸಚಿವ ಅನಂತ್‌ಕುಮಾರ್‌ಗೆ ಭಾವನಮನ

November 13, 2018

ಮಡಿಕೇರಿ:  ಕೇಂದ್ರ ರಸ ಗೊಬ್ಬರ ಖಾತೆ ಸಚಿವ ಅನಂತ್‍ಕುಮಾರ್ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಂತಾಪ ಸೂಚನಾ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ ಅನಂತ್‍ಕುಮಾರ್ ಅವರ ಭಾವಚಿತ್ರಕ್ಕೆ ಪ್ಪುಷ್ಪಾರ್ಚನೆ ಸಲ್ಲಿಸಿದ ಬಿಜೆಪಿ ಮುಖಂಡರು 1 ನಿಮಿಷ ಮೌನಾಚರಣೆಯ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಮಾಜಿ…

ಚಾಮರಾಜನಗರ ಜಿಲ್ಲೆಯ ನಾನಾ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಅನಂತಕುಮಾರ್
ಚಾಮರಾಜನಗರ

ಚಾಮರಾಜನಗರ ಜಿಲ್ಲೆಯ ನಾನಾ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಅನಂತಕುಮಾರ್

November 13, 2018

ಚಾಮರಾಜನಗರ: ಅನಾರೋಗ್ಯಕ್ಕೆ ಒಳಗಾಗಿ ಸೋಮವಾರ ಬೆಳಗಿನ ಜಾವ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಜಿಲ್ಲೆಗೆ ಹಲವು ಬಾರಿ ಭೇಟಿ ನೀಡಿದ್ದರು. ಆಗಸ್ಟ್ 13 ರಂದು ಕೇಂದ್ರೀಯ ವಿದ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂ ಡಿದ್ದು ಜಿಲ್ಲೆಯ ಅವರ ಕೊನೆಯ ಕಾರ್ಯಕ್ರಮವಾಗಿದೆ. ಹಿರಿಯ ರಾಜಕಾರಣಿ ಆಗಿರುವ ಅನಂತ ಕುಮಾರ್ ಚಾಮರಾಜನಗರ ಜಿಲ್ಲೆಗೆ ಅನೇಕ ಬಾರಿ ಭೇಟಿ ನೀಡಿದ್ದಾರೆ. ಚುನಾವಣೆ ಸಂದರ್ಭಗಳಲ್ಲಿ ಹಾಗೂ ಪಕ್ಷದ ಅನೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿ ಸಿದ್ದರು. 2018ರ ವಿಧಾನಸಭಾ ಚುನಾವಣೆಗೂ ಮುನ್ನ ಮೇ 1…

ಅನಂತಕುಮಾರ್ ನಿಧನದಿಂದ ರಾಷ್ಟ್ರಕ್ಕೆ ಭಾರೀ ನಷ್ಟ
ಚಾಮರಾಜನಗರ

ಅನಂತಕುಮಾರ್ ನಿಧನದಿಂದ ರಾಷ್ಟ್ರಕ್ಕೆ ಭಾರೀ ನಷ್ಟ

November 13, 2018

ಗುಂಡ್ಲುಪೇಟೆ: ಅಜಾತಶತ್ರು ಕೇಂದ್ರ ಸಚಿವ ಅನಂತಕುಮಾರ್ ಅವರ ನಿಧನದಿಂದ ರಾಷ್ಟ್ರಕ್ಕೆ ಭಾರೀ ನಷ್ಟ ವಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಂತಾಪ ವ್ಯಕ್ತಪಡಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋ ಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅನಂತ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತ, ರಾಜ್ಯದಲ್ಲಿ ಬಿಜೆಪಿ ಕಟ್ಟಲು ಯಡಿಯೂರಪ್ಪನವರೊಂದಿಗೆ ಶ್ರಮಿ ಸಿದ್ದ ಅನಂತಕುಮಾರ್ ರಾಜ್ಯದ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಯಾವುದೇ ಕೆಲಸಗಳನ್ನು ಮಾಡಿಕೊಡಲು ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ತಮಗೆ ವಹಿಸಿದ ಯಾವುದೇ ಜವಾ ಬ್ದಾರಿಯನ್ನೂ ಅಚ್ಚುಕಟ್ಟಾಗಿ ಮಾಡಿ…

ವಿವಿಧ ಬೆಳೆಗಾರರ ಸಂಘಗಳ ನಿಯೋಗದಿಂದ  ಕೇಂದ್ರ ಸಚಿವರು, ಅಧಿಕಾರಿಗಳ ಭೇಟಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ
ಕೊಡಗು

ವಿವಿಧ ಬೆಳೆಗಾರರ ಸಂಘಗಳ ನಿಯೋಗದಿಂದ  ಕೇಂದ್ರ ಸಚಿವರು, ಅಧಿಕಾರಿಗಳ ಭೇಟಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

July 29, 2018

ಮಡಿಕೇರಿ: ಕಾಫಿ ಬೆಳೆಗಾರರ ಸಮಸ್ಯೆ, ಕಾಳುಮೆಣಸು ಆಮದಿನಿಂದಾಗುತ್ತಿರುವ ತೊಂದರೆ ಹಾಗೂ ಕಾಡಾನೆ-ಮಾನವ ಸಂಘರ್ಷದ ಕುರಿತು ಕೇಂದ್ರ ಸರಕಾರಕ್ಕೆ ಮತ್ತೆ ಮನವರಿಕೆ ಮಾಡಿಕೊಡಲು ವಿವಿಧ ಬೆಳೆಗಾರರ ಸಂಘ, ಕಾಫಿ ಮಂಡಳಿ ಹಾಗೂ ಜನಪ್ರತಿನಿಧಿಗಳು ದೆಹಲಿಯಲ್ಲಿ ವಿವಿಧ ಇಲಾಖೆಗಳ ಕೇಂದ್ರ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿದರು. ರಾಜ್ಯದ ಕಾಫಿ ಬೆಳೆಗಾರ ಜಿಲ್ಲೆಗಳ ಬೃಹತ್ ನಿಯೋಗ ದೆಹಲಿಯಲ್ಲಿ ಸರಕಾರಿ ಮಟ್ಟ ದಲ್ಲಿ ಬೆಳೆಗಾರರ ಸಮಸ್ಯೆ ಕುರಿತು ಮನವರಿಕೆ ಮಾಡುವ ಪ್ರಯತ್ನ ನಡೆಸಿತು. ರಾಜ್ಯದ ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ,…

Translate »