ಸೋಮವಾರಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗ ನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಹಾ ಮಂಡಳದಿಂದ ಆ.16ರಂದು ಜಿಲ್ಲಾಕೇಂದ್ರ ಮಡಿಕೇರಿಯಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಮಹಾ ಮಂಡಳದ ತಾಲೂಕು ಅಧ್ಯಕ್ಷೆ ಕೆ.ಕೆ. ಶಾರದ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ 18ಸಾವಿರ ವೇತನ ಜಾರಿಗೊಳಿಸಬೇಕು. ಹೆಚ್ಚಿನ ಸೇವೆ ಸಲ್ಲಿಸಿರುವವರನ್ನು ಮಹಿಳಾ ಮೇಲ್ವಿಚಾರಕಿ ಹುದ್ದೆಗೆ ನೇಮಕ ಗೊಳಿಸಬೇಕು. ದಿನಭತ್ಯೆಯನ್ನು 150ಕ್ಕೆ ಹೆಚ್ಚಿಸಬೇಕು. ತುಟ್ಟಿ ಭತ್ಯೆ ಜಾರಿಗೆ ತರಬೇಕು.ಮಾತೃಪೂರ್ಣ ಯೋಜನೆಯ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಈ ಹಿಂದೆ ಇದ್ದಂತಹ ಗರ್ಭಿಣಿ ಬಾಣಂತಿಯರಿಗೆ…