Tag: Anti-Corruption Bureau

ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ
ಚಾಮರಾಜನಗರ

ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ

August 2, 2018

ಚಾಮರಾಜನಗರ:  ಜಿಲ್ಲೆಯ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿ ಕಾರಿಗಳು ಆಗಸ್ಟ್ 6 ರಿಂದ 29ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಆಯಾ ತಾಲೂಕಿನ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು. ಆಗಸ್ಟ್ 6ರಂದು ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, ಆಗಸ್ಟ್ 14ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು. ಆಗಸ್ಟ್ 20ರಂದು ಯಳಂದೂರು, 24ರಂದು ಕೊಳ್ಳೇಗಾಲ ಹಾಗೂ 29ರಂದು ಹನೂರಿನಲ್ಲಿ ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ…

ಜುಲೈ 16ರಂದು ಎಸಿಬಿಯಿಂದ ದೂರು ಸ್ವೀಕಾರ
ಮೈಸೂರು

ಜುಲೈ 16ರಂದು ಎಸಿಬಿಯಿಂದ ದೂರು ಸ್ವೀಕಾರ

July 13, 2018

ಮೈಸೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ನಿರ್ವಹಿಸುವಲ್ಲಿ ವಿಳಂಬ, ಲಂಚಕ್ಕಾಗಿ ಒತ್ತಾಯ ಹಾಗೂ ಇನ್ನಿತರ ರೀತಿಯಲ್ಲಿ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಮೈಸೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಜು.16ರಂದು ಬೆಳಿಗ್ಗೆ 11 ಗಂಟೆಗೆ ಟಿ. ನರಸೀಪುರ ಪರಿವೀಕ್ಷಣಾ ಮಂದಿರದಲ್ಲಿ ಹಾಗೂ ಮಧ್ಯಾಹ್ನ 3-30 ಗಂಟೆಗೆ ನಂಜನಗೂಡಿನ ಪರಿವೀಕ್ಷಣಾ ಮಂದಿರದಲ್ಲಿ, ಜುಲೈ 17 ರಂದು ಬೆಳಿಗ್ಗೆ 11 ಗಂಟೆಗೆ ಹುಣಸೂರು ಪರಿವೀಕ್ಷಣಾ ಮಂದಿರ ಹಾಗೂ ಮಧ್ಯಾಹ್ನ 3-30 ಗಂಟೆಗೆ ಹುಣಸೂರು ಪರಿವೀಕ್ಷಣಾ ಮಂದಿರದಲ್ಲಿ…

ಶಿಕ್ಷಕನಿಂದ ಲಂಚ ಸ್ವೀಕಾರ: ಡಿಡಿಪಿಐ ಕಚೇರಿ ಎಫ್‍ಡಿಎ ಎಸಿಬಿ ಬಲೆಗೆ
ಮೈಸೂರು

ಶಿಕ್ಷಕನಿಂದ ಲಂಚ ಸ್ವೀಕಾರ: ಡಿಡಿಪಿಐ ಕಚೇರಿ ಎಫ್‍ಡಿಎ ಎಸಿಬಿ ಬಲೆಗೆ

June 19, 2018

ಮೈಸೂರು: ಮುಂಬಡ್ತಿ ಪಟ್ಟಿಗೆ ಹೆಸರು ಸೇರಿಸಲು ಡಿಡಿಪಿಐ ಕಚೇರಿ ಎಫ್‍ಡಿಎ ಕೆಂಪೇ ಗೌಡ, ಶಿಕ್ಷಕನಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಬಲೆಗೆ ಬಿದ್ದಿದ್ದಾರೆ. ತಿ.ನರಸೀಪುರ ಸರ್ಕಾರಿ ಶಾಲೆ ಶಿಕ್ಷಕ ವಸಂತ್‍ಕುಮಾರ್ ಅವರ ಹೆಸರನ್ನು ಮುಂಬಡ್ತಿ ಪಟ್ಟಿಗೆ ಸೇರಿಸಲು ಕೆಂಪೇ ಗೌಡ 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಕುರಿತು ವಸಂತ್‍ಕುಮಾರ್ ಎಸಿಬಿಗೆ ದೂರು ನೀಡಿದ್ದರು. ಸೋಮ ವಾರ ಸಂಜೆ 4.30ರ ವೇಳೆಗೆ ಡಿಡಿಪಿಐ ಕಚೇರಿಯಲ್ಲಿ ಕೆಂಪೇಗೌಡ 15 ಸಾವಿರ ರೂ….

Translate »