ಹಾಸನ: ‘ರಾಷ್ಟ್ರಪತಿಯಾಗಿ ಸಂಶೋಧನೆ ಮಾಡಿ ದಂತಹ ಜಗತ್ತಿನ ಶ್ರೇಷ್ಠ ವಿಜ್ಞಾನಿ ಎ.ಪಿ.ಜೆ.ಅಬ್ದುಲ್ ಕಲಾಂ’ ಎಂದು ಕ್ಷೇತ್ರದ ಶಾಸಕ ಪ್ರೀತಮ್ ಜೆ.ಗೌಡ ಹೇಳಿದರು. ನಗರದ ಸಾಲಗಾಮೆ ರಸ್ತೆಯಲ್ಲಿರುವ ಎಂ.ಕೃಷ್ಣ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಮಾನವ ಹಕ್ಕುಗಳ ವೇದಿಕೆಯಿಂದ ಗುರು ವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲಾಂ ಅವರು ಮಕ್ಕಳಿಗೆ ಪ್ರೇರಣೆ ಯಾಗಿದ್ದರು. ಸಾಮಾನ್ಯ ಕುಟುಂಬದಿಂದ ಬಂದಂತಹ ಅವರು ಪರಮಾಣು ಶಕ್ತಿಯಲ್ಲಿ ಸಂಶೋಧನೆ ನಡೆಸಿ ಯಶಸ್ವಿಯಾಗಿ…