ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅರುಣ್ ಮಾಚಯ್ಯ ಆರೋಪ ಚುನಾವಣಾ ಆಯುಕ್ತರಿಗೆ ದೂರು, ಮರು ಎಣಿಕೆಗೆ ಒತ್ತಾಯ ಮಡಿಕೇರಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮತ ಯಂತ್ರಗಳು ‘ಹ್ಯಾಕ್’ ಆಗಿರುವ ಬಗ್ಗೆ ಸಂಶಯವಿದೆ ಎಂದು ಗಂಭೀರ ಆರೋಪ ಮಾಡಿರುವ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಅರುಣ್ ಮಾಚಯ್ಯ, ಕ್ಷೇತ್ರದಲ್ಲಿ ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್ ಸಹಿತ ಮರು ಎಣಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧವಾಗಿ ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿ ಕಾರಿಗಳ ಮೂಲಕ ಅವರು…