ಬೆಂಗಳೂರು, ಸೆ. 23(ಕೆಎಂಶಿ)- ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಬಿಜೆಪಿ ವರಿಷ್ಠರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಗಲ ಮೇಲೆ ಹಾಕಿದ್ದಾರೆ. ಅನರ್ಹಗೊಂಡ ಹದಿನೇಳು ಶಾಸಕರ ಕ್ಷೇತ್ರಗಳ ಪೈಕಿ ಹದಿನೈದು ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಅವರಿಗೆ ಬಿ ಫಾರಂ ನೀಡುವ ಅಧಿಕಾರವನ್ನು ಯಡಿಯೂರಪ್ಪನವರಿಗೆ ನೀಡಲಾಗುತ್ತಿದೆ. ಈ ವಿಷಯದಲ್ಲಿ ರಾಜ್ಯ ಬಿಜೆಪಿಯಾಗಲೀ, ಪಕ್ಷದ ವರಿಷ್ಠರಾಗಲೀ ಇಲ್ಲವೆ ಸಂಘ ಹಸ್ತಕ್ಷೇಪ ಮಾಡುವುದಿಲ್ಲ. ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕೆಂಬ…