ಮೈಸೂರು: ಇಂದಿನ ಜೀವನಶೈಲಿಯ ನಡುವೆ ಜನರು ತಮ್ಮ ಜೀವನದಲ್ಲಿ ಆಯುರ್ವೇದವನ್ನು ಒಂದು ಭಾಗವಾಗಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ರಕ್ಷಣೆ ಮಾಡಿಕೊಳ್ಳುವಂತೆ ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ ಇಂದಿಲ್ಲಿ ಸಲಹೆ ನೀಡಿದರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಆಯುಷ್ ಮಿಷನ್ ಜಂಟಿ ಆಶ್ರಯದಲ್ಲಿ ಮೈಸೂರಿನ ಜೆ.ಕೆ.ಮೈದಾನ ದಲ್ಲಿರುವ ಅಮೃತ ಮಹೋತ್ಸವ ಭವನದಲ್ಲಿ ಮಂಗಳವಾರ 3ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವಕ್ಕೆ ಆಯುರ್ವೇದದ ಕೊಡುಗೆಯನ್ನು ನೀಡಿದ ದೇಶ…
ಮೈಸೂರು ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ `ಆಯುರ್ ದರ್ಶನ’
November 18, 201814 ವಿಭಾಗಗಳ ಗಿಡಮೂಲಿಕೆ ಔಷಧ, ಆಯುರ್ವೇದ ಚಿಕಿತ್ಸೆ ಮೂಲಕ ರೋಗಗಳ ಗುಣಪಡಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೈಸೂರು: ಸರ್ಕಾರಿ ಆಯುರ್ವೇದ ಮೆಡಿಕಲ್ ಕಾಲೇಜು ಆವರಣ ದಲ್ಲಿ ರೋಗಗಳ ಗುಣ ಪಡಿಸುವ ಹಾಗೂ ಆಯುರ್ವೇದ ಚಿಕಿತ್ಸೆಯ ಉಪಯೋಗ ಕುರಿತ ವಸ್ತುಪ್ರದರ್ಶನ ಆರಂಭವಾಗಿದೆ. ರಾಷ್ಟ್ರೀಯ ಆಯುರ್ವೇದ ಸಪ್ತಾಹದ ಅಂಗವಾಗಿ ಇಂದು ಆರಂಭವಾದ `ಆಯುರ್ ದರ್ಶನ’ ಮುಕ್ತ ದಿನ ಹಾಗೂ ವಸ್ತು ಪ್ರದರ್ಶನವನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಉದ್ಘಾಟಿಸಿದರು. ಕಾಲೇಜಿನ ಮೂರು ಮಹಡಿಗಳ 10 ಕೊಠಡಿಗಳು ಹಾಗೂ…
ಆಯುರ್ವೇದ ಕುರಿತು ಮೈಸೂರಲ್ಲಿ ಜಾಗೃತಿ ಜಾಥಾ
November 16, 2018ಮೈಸೂರು: ಆಯು ರ್ವೇದದ ನಡಿಗೆ ‘ಆರೋಗ್ಯದ ಕಡೆಗೆ’ ಎಂಬ ಜನ ಜಾಗೃತಿ ಜಾಥಾ ಮೈಸೂರಲ್ಲಿ ನಡೆ ಯಿತು. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ವತಿಯಿಂದ 3ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜನ ಜಾಗೃತಿ ಜಾಥಾವನ್ನು ಮೈಸೂರಿನ ಸರ್ಕಾರಿ ಆಯುರ್ವೇದ ಕಾಲೇಜು ಸರ್ಕಲ್ ಬಳಿ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಚಾಲನೆ ನೀಡಿದರು. ಕಾಲೇಜು ಪ್ರಾಂಶುಪಾಲ ಡಾ.ಗಜಾನನ ಹೆಗಡೆ, ಪ್ರಾಧ್ಯಾಪಕರಾದ ಡಾ.ರಾಜೇಂದ್ರ, ಡಾ.ಮೈತ್ರಿ, ಡಾ.ಉಮಾಶಂಕರ್, ಡಾ. ಆದರ್ಶ್, ಡಾ.ಸಂಜಯ್, ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ರೈಲು ನಿಲ್ದಾಣ…
ಯೋಗ, ಆಯುರ್ವೇದ ಚಿಕಿತ್ಸೆಯಲ್ಲಿ ಮತ್ತಷ್ಟು ಸಂಶೋಧನೆ ಅವಶ್ಯ
July 9, 2018ಮೈಸೂರು: ಇತ್ತೀಚೆಗೆ ಜಗತ್ತಿನ ಬಹುತೇಕ ಜನರು ಯೋಗ ಮತ್ತು ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಒಲವು ತೋರುತ್ತಿರುವುದರಿಂದ, ಈ ಕ್ಷೇತ್ರದಲ್ಲಿ ಮತ್ತಷ್ಟು ಸಂಶೋಧನೆ ಅಗತ್ಯ ಎಂದು ಹಿರಿಯ ಆಯುರ್ವೇದ ವೈದ್ಯ (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) ಡಾ.ಎ.ಎಸ್.ಚಂದ್ರಶೇಖರ ಅಭಿಪ್ರಾಯಪಟ್ಟರು. ಚಾಮುಂಡಿಬೆಟ್ಟ ತಪ್ಪಲಿನ ಜೆಎಸ್ಎಸ್ ಆಯುರ್ವೇದ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಕಾಲೇಜು ವತಿಯಿಂದ ಆಯೋಜಿಸಿದ್ದ `ವೈದ್ಯ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿನಲ್ಲಿ ತಂತ್ರಜ್ಞಾನ ಬೆಳೆದಂತೆ ಹೆಚ್ಚಿನ ಜನರಲ್ಲಿ ಆರೋಗ್ಯ ಸಮಸ್ಯೆ, ಒತ್ತಡದ ಬದುಕು ಸೇರಿದಂತೆ ಇತರೆ ಆರೋಗ್ಯ…