ಮೈಸೂರು: ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜಿನ ಉಪನ್ಯಾಸಕರು, ಪ್ರಾಂಶುಪಾಲರು ಸೇರಿದಂತೆ ಒಟ್ಟು 2.50 ಲಕ್ಷಕ್ಕೂ ಹೆಚ್ಚು ಶಿಕ್ಷಕರಿಗೆ 2016 ಮತ್ತು 2018ರಲ್ಲಿ ಸೇರ್ಪಡೆ ಮಾಡಿದ್ದ 2 ವೇತನ ಬಡ್ತಿಯನ್ನು ಹಣಕಾಸು ಇಲಾಖೆ ಏಕಾಏಕಿ ಪ್ರತ್ಯೇಕಗೊಳಿಸಲು ಮುಂದಾಗಿರುವುದನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಬಿ. ನಿರಂಜನಮೂರ್ತಿ ಇಂದಿಲ್ಲಿ ಖಂಡಿಸಿದರು. ತಾನು ಮಾಡಿರುವ ತಪ್ಪನ್ನು ಶಿಕ್ಷಕರ ವೇತನಕ್ಕೆ ಸರ್ಜರಿ ಮಾಡುವ ಮೂಲಕ ಸರಿಪಡಿಸಲು ಮುಂದಾಗಿರುವ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು….