ಬೆಂಗಳೂರು: ವಿಧಾನ ಸಭೆ ವಿಪಕ್ಷ ನಾಯಕ ರಾಗಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿ.ಎಸ್.ಯಡಿ ಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಶಾಸ ಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ವಿಪಕ್ಷದ ಮುಖ್ಯ ಸಚೇತಕರಾಗಿ ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲದೇ ನಾಳೆ (ಮೇ 25) ನಡೆಯಲಿರುವ ವಿಶ್ವಾಸ ಮತದ ಯಾಚನೆ ವೇಳೆ ವಿಶ್ವಾಸಮತದ ವಿರುದ್ಧ…
ಗೌಡರ ಒಂದೇಟಿಗೆ ಮೂರು ಹಕ್ಕಿಗಳು!
May 25, 2018ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳ ಹೊಡೆ ಯುವುದನ್ನು ಕೇಳಿದ್ದೇವೆ. ಆದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳ ರೆಕ್ಕೆ ಕತ್ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿರೀಕ್ಷೆಯಂತೆ ಅತಂತ್ರ ವಿಧಾನಸಭೆ ಸೃಷ್ಟಿ ಯಾದರೆ, ಎರಡು ರಾಷ್ಟ್ರೀಯ ಪಕ್ಷಗಳ ಪೈಕಿ ಯಾವುದರ ಜೊತೆ ಹೊಂದಾಣ ಕೆ ಮಾಡಿ ಕೊಂಡರೂ ಅದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಗಿರಬೇಕು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಯಡಿಯೂರಪ್ಪ…
ಇದು ಯಡಿಯೂರಪ್ಪ-ಸಿದ್ದರಾಮಯ್ಯ ನಡುವಿನ ಚುನಾವಣೆ ಪತ್ರಿಕಾ ಸಂವಾದದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮತ
May 7, 2018ಬೆಂಗಳೂರು: ಇದು ಮೋದಿ- ಸಿದ್ದರಾಮಯ್ಯ ನಡುವಿನ ಚುನಾವಣೆ ಅಲ್ಲ. ಯಡಿಯೂರಪ್ಪ-ಸಿದ್ದರಾಮಯ್ಯ ನಡುವಿನ ಚುನಾವಣೆ. ಮೋದಿ ಮ್ಯಾಜಿಕ್ ಇಲ್ಲಿ ನಡೆಯಲ್ಲ. ರಾಜ್ಯ ವಿಧಾನಸಭೆ ಚುನಾವಣೆ 2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಪ್ರೆಸ್ಕ್ಲಬ್ ಹಾಗೂ ವರದಿಗಾರರ ಕೂಟ ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮೇಲ್ನೋಟಕ್ಕೆ ಮೂರು ಪಕ್ಷಗಳ ನಡುವೆ ಸ್ಪರ್ಧೆ ಕಂಡರೂ ವಾಸ್ತವವಾಗಿ ಎಲ್ಲಾ ಮೂರು ಕಡೆ ಇಲ್ಲ, ಕೆಲವೆಡೆ ಕಾಂಗ್ರೆಸ್, ಬಿಜೆಪಿ ಇನ್ನು…
ಬಿಜೆಪಿ ಬೆಂಬಲಿಸಲು ಬಿಎಸ್ವೈ ಅಭಿವೃದ್ಧಿ ಬಳಗ ಮನವಿ
May 6, 2018ಚಾಮರಾಜನಗರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮನವಿ ಮಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ರೈತರಿಗೆ ಅನೇಕ ಉಪಯುಕ್ತವಾದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮಹಿಳೆಯರಿಗೆ, ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಿದ್ದಾರೆ. ಎಲ್ಲಾ ವರ್ಗದ ಜನರಿಗೂ ಒಂದಲ್ಲ…
ಬಿಜೆಪಿಗೆ ಯಡಿಯೂರಪ್ಪ ಮತಗಳು ಬೇಕು… ಆದರೆ ಯಡಿಯೂರಪ್ಪ ಬೇಕಿಲ್ಲ?
April 29, 2018– ವಿಕ್ರಂ ಮುತ್ತಣ್ಣ ಇಡೀ ದಕ್ಷಿಣ ಭಾರತದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಿ.ಎಸ್. ಯಡಿಯೂರಪ್ಪ ನವರನ್ನು ಅವರ ಸ್ವಪಕ್ಷೀಯರೇ ಮತ್ತೊಮ್ಮೆ ಕಾಲೆಳೆಯುತ್ತಿದ್ದಾರೆಯೇ ಎಂಬ ಅನುಮಾನ ಇತ್ತೀಚಿನ ಬೆಳವಣಿಗೆಗಳಿಂದ ಮೂಡುತ್ತಿದೆ. ಯಾವಾಗ ಯಡಿಯೂರಪ್ಪನವರು ಕರ್ನಾಟಕ ಬಿಜೆಪಿಯ ಪಕ್ಷಾತೀತ ಸಮೂಹ ನಾಯಕರಾದರೋ, ಅಂದಿನಿಂದಲೂ ಬಿಜೆಪಿ ಹೈಕಮಾಂಡ್ಗೆ ‘ಯಡಿಯೂರಪ್ಪ ಸನ್ನಿ’ (Yeddyurappa phobia) ಶುರುವಾಗಿದ್ದು, ಅದು ಇನ್ನೂ ಮುಂದುವರೆದಿದೆ. ಲೋಕಾಯುಕ್ತ ವರದಿಯನ್ನು ಮುಂದಿಟ್ಟುಕೊಂಡು, ಬಿಜೆಪಿ ಹೈಕಮಾಂಡ್ 2011ರಲ್ಲಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸುವ ಮೂಲಕ…
ಜಾತಿ ಬೀಜ ಬಿತ್ತುವ ಭ್ರಷ್ಟ ಸಿಎಂ ಸಿದ್ದರಾಮಯ್ಯ: ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ
April 28, 2018ಹಾಸನ: ಜಾತಿ ಬೀಜ ಬಿತ್ತುವ ಭ್ರಷ್ಟ ಮುಖ್ಯಮಂತ್ರಿಯನ್ನು ಹಿಂದೆಂದು ನಾನು ಕಂಡಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ತಾಲೂಕಿನ ಸಾಲಗಾಮೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಸಭೆ ಉದ್ಘಾಟಿಸಿ ಮಾತ ನಾಡಿದ ಅವರು, ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಸ್ವಾರ್ಥದಿಂದ ಹಗಲು ದರೋಡೆ ಮಾಡಿರುವುದಲ್ಲದೆ, ವೀರಶೈವ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿ ದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನಂತಹ ಜಾತಿ ಬೀಜ ಬಿತ್ತುವ ಭ್ರಷ್ಟನನ್ನು ನಾನು ಎಲ್ಲೂ ಕಂಡಿಲ್ಲ ಎಂದು ಆಕ್ರೋಶವ್ಯಕ್ತ ಪಡಿಸಿದರು. ಸಿದ್ದರಾಮಯ್ಯರ…
ರಣಾಂಗಣವಾಯ್ತು ನಂ.ಗೂಡು ಬಿಜೆಪಿ ಸಮಾವೇಶ
April 24, 2018“ನನ್ನ ಮಗ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ, ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ…” ಯಡಿಯೂರಪ್ಪರ ಈ ಹೇಳಿಕೆಯಿಂದ ಕಾರ್ಯಕರ್ತರ ದಾಂಧಲೆ, ವೇದಿಕೆಯಲ್ಲಿ ಪೀಠೋಪಕರಣ ಧ್ವಂಸ, ಪುಡಿ ಪುಡಿಯಾದ ಕುರ್ಚಿಗಳು, ಹಲವು ವಾಹನಗಳು ಜಖಂ, ಪೊಲೀಸ್ ಭದ್ರತೆಯಲ್ಲಿ ನಿರ್ಗಮಿಸಿದ ನಾಯಕರು, ಕೆಲವೇ ಕ್ಷಣದಲ್ಲಿ ರಣಾಂಗಣವಾದ ಸಮಾವೇಶ ಸ್ಥಳ, ಪೊಲೀಸರಿಂದ ಲಾಠಿ ಚಾರ್ಜ್ ಮೈಸೂರು: ಸಿಎಂ ತವರು ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ನಿದ್ದೆಗೆಡಿಸಿದ್ದ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದ ಬಿ.ವೈ.ವಿಜಯೇಂದ್ರ ನಾಮಪತ್ರ ಸಲ್ಲಿಸುವ…