ಕೈಗಾರಿಕಾ ಘಟಕ ಸ್ಥಾಪನೆಗೆ ಉದ್ಯಮಿಗಳ ಆಕರ್ಷಿಸಿ ಫುಡ್ ಪಾರ್ಕ್, ಅರಿಶಿಣ ಸಂಸ್ಕರಣಾ ಘಟಕ ಸ್ಥಾಪಿಸಲು ಸಲಹೆ ನೀರು, ವಿದ್ಯುತ್ ಪೂರೈಸುವ ಶಾಶ್ವತ ಯೋಜನೆ ಪೂರ್ಣಗೊಳಿಸಲು ಸೂಚನೆ ಚಾಮರಾಜನಗರ: ‘ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶ ದಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಉದ್ಯಮಿಗಳನ್ನು ಆಕರ್ಷಿಸಲು ಅಧಿಕಾರಿ ಗಳ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕೈಗಾರಿಕಾ ಪ್ರದೇಶ ಹಾಗೂ…