ಬೆಂಗಳೂರು: ಮೀಟರ್ ಬಡ್ಡಿಗೆ ಕಡಿವಾಣ ಹಾಕಿ, ಸಣ್ಣ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವ ‘ಬಡವರ ಬಂಧು’ ಹೊಸ ಕಾರ್ಯ ಕ್ರಮ ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಇಂದಿಲ್ಲಿ ತಿಳಿಸಿದ್ದಾರೆ. ಬೀದಿ ಬದಿ ವ್ಯಾಪಾರಿಗಳ ಜೊತೆ ಮಾತುಕತೆ ನಡೆಸಿದ ನಂತರ ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಹೊಸ ಪ್ರಾಯೋಗಿಕ ಯೋಜನೆ ತರಲಾ ಗುತ್ತಿದ್ದು, ಈಗಾಗಲೇ ಈ ಯೋಜನೆಗೆ ರೂಪು ರೇಷೆಗಳನ್ನು ತಯಾರಿಸಲಾಗುತ್ತಿದೆ ಎಂದರು. ಆದ್ದರಿಂದ ಬೀದಿ ಬದಿಯ ವ್ಯಾಪಾರ ಸಮಸ್ಯೆ ಗಳನ್ನು ತಿಳಿಯಲು…