ಬೇಲೂರು: ಪುರಸಭಾ ಸದಸ್ಯ ಶ್ರೀನಿಧಿ ಕನ್ನಡ ಬಾವುಟ ಕುರಿತು ನೀಡಿದ ಹೇಳಿಕೆ ಖಂಡಿಸಿ ತಕ್ಷಣವೇ ಕ್ಷಮೆಯಾಚಿಸ ಬೇಕೆಂದು ವಿವಿಧ ಕನ್ನಡಪರ ಸಂಘ ಟನೆಗಳ ಮುಖಂಡರು ಆಗ್ರಹಿಸಿದ ಘಟನೆ ಇಂದು ನಡೆಯಿತು.ನ.1ರ ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ತಹಶೀಲ್ದಾರ್ ಶಾರದಾಂಬ ಅಧ್ಯಕ್ಷತೆಯಲ್ಲಿ ತಮ್ಮ ಕಚೇರಿಯಲ್ಲಿ ಕರೆ ದಿದ್ದ ಪೂರ್ವಭಾವಿ ಸಭೆ ಶ್ರೀನಿಧಿ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ನಿನ್ನೆ ನಡೆದ ಪುರಸಭಾ ಸಾಮಾನ್ಯ ಸಭೆಯಲ್ಲಿ ಸದಸ್ಯ ಶ್ರೀನಿಧಿ ಅವರು ಕನ್ನಡ ಬಾವುಟಕ್ಕೆ ಇನ್ನೂ ಯಾವುದೇ ಮಾನ್ಯತೆ ದೊರೆತಿಲ್ಲ ಎಂದಿರುವುದು…
ಹೆದ್ದಾರಿ ಪ್ರಾಧಿಕಾರದ ರಸ್ತೆ ಗುಂಡಿ ಮುಚ್ಚಿದ ಪುರಸಭೆ
October 22, 2018ಬೇಲೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರುವ ಪಟ್ಟಣದ ಯಗಚಿ ಹಳೇ ಸೇತುವೆ ರಸ್ತೆಯಲ್ಲಿನ ಗುಂಡಿಗಳನ್ನು ಕಾಣದೆ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಶನಿವಾರ ರಾತ್ರಿ 3 ಕಾರು ಹಾಗೂ ಇಂದು ಬೆಳಿಗ್ಗೆ 2 ಬೈಕ್ ಗಳ ನಡುವೆ ಡಿಕ್ಕಿಯಾಗಿರುವ ಘಟನೆ ನಡೆದಿದ್ದು, ಸುರಕ್ಷತಾ ದೃಷ್ಟಿಯಿಂದ ಇಲ್ಲಿನ ಪುರಸಭೆಯೇ ತಾತ್ಕಾಲಿಕವಾಗಿ ಗುಂಡಿ ಮುಚ್ಚಲು ಮುಂದಾಯಿತು. ಯಗಚಿ ಹಳೇ ಸೇತುವೆ ಮತ್ತು ರಸ್ತೆ ನಿರ್ವಹಣೆ ಜವಾಬ್ದಾರಿ ರಾಷ್ಟ್ರೀಯ ಹೆದ್ದಾರಿ ಯೋಜನಾ ಪ್ರಾಧಿಕಾರಕ್ಕೆ ಸೇರಿ ದ್ದಾಗಿದ್ದರೂ ಪುರಸಭೆ ಅಧ್ಯಕ್ಷೆ ಭಾರತೀ ಅರುಣ್ಕುಮಾರ್…
ಚನ್ನಕೇಶವಸ್ವಾಮಿ ದಾಸೋಹ ಭವನ ಪುನಾರಂಭ
October 21, 2018ಬೇಲೂರು:ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಶ್ರೀಚನ್ನಕೇಶವಸ್ವಾಮಿ ದೇಗುಲದ ದಾಸೋಹ ಭವನ 80 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದು, ಭಕ್ತರ ಸೇವೆಗೆ ಮುಕ್ತವಾಗಿದೆ. ಪಟ್ಟಣದ ಪ್ರಸಿದ್ಧ ಶ್ರೀಚನ್ನಕೇಶವಸ್ವಾಮಿ ದೇಗುಲದ ದಾಸೋಹ ಭವನವನ್ನು ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು, ದಾಸೋಹದ ಕೊಠಡಿ ಸೇರಿದಂತೆ ಇನ್ನಿತರ ಹಲವು ಅಭಿ ವೃದ್ಧಿ ಕೆಲಸಗಳನ್ನು ಮಾಡಿದ್ದು, ವಿಜಯ ದಶಮಿಯಂದು ಶಾಸಕ ಕೆ.ಎಸ್.ಲಿಂಗೇಶ್ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿ ದರು. 2008ರಿಂದ ಪ್ರತಿನಿತ್ಯ ದಾಸೋಹ ನಡೆಯುತ್ತಿದೆ. ಆದರೆ ಅಗತ್ಯ ಸ್ಥಳಾವಕಾಶ ಇರದ ಕಾರಣ ದಾಸೋಹಕ್ಕೆ ಹೆಚ್ಚು…
4 ಕೋಟಿ ರೂ. ವೆಚ್ಚದಲ್ಲಿ ಬೇಲೂರು ಕ್ರೀಡಾಂಗಣ ಅಭಿವೃದ್ಧಿ
October 17, 2018ಬೇಲೂರು: ಪಟ್ಟಣದ ಹೊರ ವಲಯದ ಹನುಮಂತನಗರ ಬಳಿ ಇರುವ ಕ್ರೀಡಾಂಗಣದ ಹೆಚ್ಚುವರಿ ಅಭಿವೃದ್ಧಿ ಕಾಮ ಗಾರಿಗೆ 4 ಕೋಟಿ ರೂ. ಬಿಡುಗಡೆ ಆಗಿದೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಇಲ್ಲಿನ ಸರ್ವೋದಯ ವಿದ್ಯಾಸಂಸ್ಥೆ ಆವರಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಥ್ರೋ ಬಾಲ್ ಕ್ರೀಡಾ ಕೂಟ ಉದ್ಘಾಟಿಸಿ ಅವರುಮಾತನಾಡಿದರು. ಹಾಲಿ ಕ್ರೀಡಾಂಗಣದಲ್ಲಿ ಹಲವು ರೀತಿಯ ಸೌಲಭ್ಯಗಳ ಅಗತ್ಯವಿದ್ದು, ಕೆಲವೊಂದು ಕಾಮಗಾರಿಗಳು ನೆನೆಗುದಿಗೆ ಬಿದ್ದಿದೆ. ಇದನ್ನು ಮನಗಂಡು ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಇದೀಗ…
ಹಳೇಬೀಡು, ಹನಿಕೆ, ಹಗರೆಯಲ್ಲಿ ಉಪಮಾರುಕಟ್ಟೆ ನಿರ್ಮಾಣ ಭರವಸೆ
October 13, 2018ಬೇಲೂರು: ತಾಲೂಕಿನ ಹಳೇ ಬೀಡು, ಹನಿಕೆ, ಹಗರೆ ಸೇರಿದಂತೆ ವಿವಿಧ ಭಾಗದಲ್ಲಿ ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಅನುಕೂಲವಾಗುವಂತೆ ಉಪ ಕೃಷಿ ಮಾರುಕಟ್ಟೆ ನಿರ್ಮಾಣ ಹಾಗೂ ವಾರದ ಸಂತೆಯ ಸ್ಥಳದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಇಲ್ಲಿನ ಕೃಷಿ ಮಾರುಕಟ್ಟೆ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇಲ್ಲಿನ ಎಪಿಎಂಸಿ ಆವರಣದಲ್ಲಿ 3.5 ಕೋಟಿ ಅನುದಾನದಲ್ಲಿ ಮಾರುಕಟ್ಟೆ ನಿರ್ಮಿಸಲಾ ಗುತ್ತಿದೆ. ಹನಿಕೆ ಉಪ ಮಾರುಕಟ್ಟೆ ಪ್ರಾಂಗಣ ದಲ್ಲಿ ಜಾನುವಾರುಗಳಿಗೆ…
ಯಗಚಿ ಹಳೇ ಸೇತುವೆ ದುರಸ್ತಿಗೆ ಕರವೇ ಪ್ರತಿಭಟನೆ
October 10, 2018ಬೇಲೂರು: ಶಿಥಿಲಗೊಂಡಿರುವ ಇಲ್ಲಿನ ಯಗಚಿ ನದಿಯ ಹಳೇ ಸೇತುವೆ ದುರಸ್ತಿಗೆ ಆಗ್ರಹಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಸೇತುವೆ ಮೇಲೆ ಸಂಚಾರ ನಿಷೇಧಿಸಿ, ಅಡುಗೆ ತಯಾರಿಸುವ ಮೂಲಕ ಪ್ರತಿಭಟಿಸಿದರು. ಶಿಥಿಲಗೊಂಡಿರುವ ಪಟ್ಟಣ ಬಳಿಯ ಯಗಚಿ ನದಿಯ ಹಳೇ ಸೇತುವೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಡಿಸಿದರಲ್ಲದೆ, ಸೇತುವೆಯ ಮೇಲೆ ಅಡುಗೆ ತಯಾರಿಸುವ ಮೂಲಕ ಪ್ರತಿಭಟನೆಯನ್ನು ಇನ್ನಷ್ಟು ಚುರುಕುಗೊಳಿಸಿದರು. ಈ ಸಂದರ್ಭ…
ಬೇಲೂರು ಪುರಸಭೆ ಮಳಿಗೆಗಳ ವಿವಾದ: ಬಾಡಿಗೆದಾರರು ಲಂಚ ನೀಡಿರುವ ಆರೋಪ: ಸತ್ಯಕ್ಕೆ ದೂರ
October 5, 2018ಬೇಲೂರು: ಪಟ್ಟಣದ ಬಸ್ ನಿಲ್ದಾಣದ ಮುಂಭಾಗವಿರುವ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ನಾವು ಮುಂದುವರಿ ಯಲು ಪುರಸಭೆಯ ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯಾಧಿಕಾರಿಗಳಿಗೆ ಹಣವನ್ನು ನೀಡಿರುವುದಿಲ್ಲ. ಉದ್ದೇಶ ಪೂರ್ವಕವಾಗಿ ಅಧ್ಯಕ್ಷರ ಮತ್ತು ಮುಖ್ಯಾಧಿಕಾರಿಗಳ ವಿರುದ್ಧ ನಡೆಸುತ್ತಿರುವ ಕುತಂತ್ರವಿದು ಎಂದು ಪುರ ಸಭೆ ವಾಣಿಜ್ಯ ಮಳಿಗೆಗಳ ಬಾಡಿಗೆದಾರರು ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಾಡಿಗೆದಾರರಾದ ವೀರಭದ್ರೇಗೌಡ, ಅಬ್ದುಲ್ ರಿಜ್ವಾನ್, ರುಕ್ಮಿಣಿ, ಕುಮಾರ್ ಮಾತ ನಾಡಿ, ಅಂಗಡಿ ಮಳಿಗೆಯಲ್ಲಿ ನಾವು ಮುಂದುವರೆಯಲು ಅಧ್ಯಕ್ಷರು, ಉಪಾ ಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಗಳಿಗೆ 10…
ಬೇಲೂರು ಪುರಸಭೆ ವಿಶೇಷ ಸಭೆ: ಸಭೆ ಬಹಿಷ್ಕರಿಸಿ ಹೊರ ನಡೆದ ಕಾಂಗ್ರೆಸ್-ಜೆಡಿಎಸ್ ಸದಸ್ಯರು
September 30, 2018ಅಧ್ಯಕ್ಷರು, ಅಧಿಕಾರಿಗಳ ವಿರುದ್ಧ ಆಕ್ರೋಶ ಪುರಸಭೆ ಭ್ರಷ್ಟಾಚಾರಕ್ಕೆ ಅಧಿಕಾರಿಗಳೇ ಕಾರಣ: ಆರೋಪ ಬೇಲೂರು: ಪುರಸಭೆ ವ್ಯಾಪ್ತಿ ಯಲ್ಲಿ ಜನಪರವಾದ ಕೆಲಸಗಳು ನಡೆಯು ತ್ತಿಲ್ಲ. ಏಕಪಕ್ಷೀಯವಾಗಿ ಎಲ್ಲವೂ ನಡೆಯು ತ್ತಿದೆ ಎಂದು ಆರೋಪಿಸಿ ಪುರಸಭೆ ವಿಶೇಷ ಸಭೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಬಹಿಷ್ಕರಿಸಿದ ಘಟನೆ ನಡೆಯಿತು. ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಶನಿ ವಾರ ಅಧ್ಯಕ್ಷೆ ಭಾರತಿ ಅರುಣ್ಕುಮಾರ್ ಅಧÀ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ನ 12 ಸದಸ್ಯರು ಅಧಿಕಾರಿಗಳು ಹಾಗೂ ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ…
ವಯೋವೃದ್ಧ ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ
September 23, 2018ಬೇಲೂರು: ವೃದ್ಧನೋರ್ವ ಪತ್ನಿಯನ್ನೇ ಹತ್ಯೆಗೈದಿರುವ ಘಟನೆ ತಾಲೂಕಿನ ಕಲ್ಲು ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರಾಮಮ್ಮ(60) ಹತ್ಯೆಗೀಡಾದವರು. ಹಂತಕ ಪತಿ ಮೂಡ್ಲುಗಿರಿ ಬೋವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಸಾರದಲ್ಲಿ ಮೂರ್ನಾಲ್ಕು ತಿಂಗಳಿಂದಲೂ ಜಗಳ ನಡೆಯುತ್ತಿತ್ತು. ಇಂದು ಸಂಭವಿಸಿದ ಮಾತಿನ ಚಕಮಕಿ ತಾರಕ್ಕೇರಿ ವೃದ್ಧ ಮೂಡ್ಲುಗಿರಿ ಮಚ್ಚಿನಿಂದ ತನ್ನ ಪತ್ನಿ ಮೇಲೆ ಹಲ್ಲೆ ಮಾಡಿ ಕೊಲೆಗೈದಿದ್ದಾನೆ. ಹಳೇಬಿಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವಚ್ಛತಾ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಿ: ಶಾಸಕ
September 21, 2018ಬೇಲೂರು: ‘ಭಾರತ ಸ್ವಚ್ಛ ದೇಶ ಆಗಬೇಕಾ ದರೆ, ಕೇವಲ ಪೌರಕಾರ್ಮಿಕರ ಶ್ರಮ ಸಾಲದು. ಅದಕ್ಕೆ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳೂ ಕೈ ಜೋಡಿಸ ಬೇಕು. ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು’ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಪಟ್ಟಣದ ವಿಷ್ಣು ಕಲ್ಯಾಣಿಯಲ್ಲಿ ಗುರುವಾರ ಪುರಸಭೆ ಯಿಂದ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಚ್ಛತೆಯನ್ನು ಕೇವಲ ಕಾರ್ಮಿಕರನ್ನು ಬಳಸಿಕೊಂಡು ಮಾಡಿಸಿದರೆ ಸಾಲದು ಅವರೊಂದಿಗೆ ಸಾರ್ವಜನಿಕರು ಜನಪ್ರತಿನಿಧಿಗಳು ಭಾಗವಹಿ ಸಬೇಕು. ಈ ಸಂಬಂಧ ಜಾಗೃತಿ ಮೂಡಿಸಬೇಕು. ಗಾಂಧೀಜಿಯ ಕನಸಿನ ಭಾರತ…