ಬೆಂಗಳೂರು: ಅತಿವೃಷ್ಟಿ, ಭೂಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದ್ದ ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಅ.10ರಿಂದ ರೈಲು ಸಂಚಾರ ಪುನರಾರಂಭವಾಗಲಿದೆ. ಕಳೆದ ಆಗಸ್ಟ್ನ ಮೊದಲ ಹಾಗೂ ಎರಡನೇ ವಾರದಲ್ಲಿ ಸುರಿದ ಭಾರೀ ಮಹಾಮಳೆಯಿಂದ ಪಶ್ಚಿಮಘಟ್ಟದ ಬೆಟ್ಟ, ಗುಡ್ಡ, ಮಳೆಕಾಡು, ಕಂದಕಗಳ ನಡುವೆ ಹಾದು ಹೋಗಿರುವ ಸಕಲೇಶ ಪುರ- ಸುಬ್ರಹ್ಮಣ್ಯ ನಡುವಿನ ರೈಲು ಹಳಿಗಳ ಮೇಲೆ ಬೆಟ್ಟಗಳೇ ಕುಸಿದು ಬಿದ್ದವು. 2 ಲಕ್ಷ ಕ್ಯೂಬಿಕ್ ಮೀಟರ್ಗೂ ಹೆಚ್ಚು ಪ್ರಮಾಣದ ಮಣ್ಣು, ಭಾರೀ ಗಾತ್ರದ ಬಂಡೆಗಳು, ಮರ, ಗಿಡಗಳು ರೈಲು ಹಳಿಗಳನ್ನು…