ಬೆಂಗಳೂರು,ಡಿ.8-(ಕೆಎಂಶಿ)ದೇಶದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ರೈತರನ್ನು ಉದ್ದಿಮೆದಾರರ ಗುಲಾಮ ರನ್ನಾಗಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ರೈತ ಈ ದೇಶದ ಬೆನ್ನೆಲುಬು. ಆತನ ರಕ್ಷಣೆಗೆ ನಿಲ್ಲುವುದು ನಮ್ಮ ಕರ್ತವ್ಯವೇ ಹೊರತು, ರಾಜಕೀಯ ಉದ್ದೇಶ ದಿಂದ ಆ ಹೋರಾಟ ನಡೆಯುತ್ತಿಲ್ಲ. ಕಾಂಗ್ರೆಸ್ ಪಕ್ಷ ದೇಶದ ರೈತರ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು…
ಲವ್ ಜಿಹಾದ್, ಗೋಹತ್ಯೆ ನಿಷೇಧ ಸೇರಿದಂತೆ ಹಿಂದುತ್ವ ಕಾಯ್ದೆಗಳ ಜಾರಿ ನಿರ್ಣಯಕ್ಕೆ ಸಿದ್ಧತೆ
December 4, 2020ಬೆಂಗಳೂರು, ಡಿ.3(ಕೆಎಂಶಿ)-ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಸೇರಿದಂತೆ ಕೆಲವು ಹಿಂದುತ್ವ ಕಾಯ್ದೆಗಳನ್ನು ಅನುಷ್ಠಾನ ಗೊಳಿಸುವ ಸಂಬಂಧ ಬೆಳಗಾವಿಯಲ್ಲಿ ಜರುಗಲಿರುವ ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಪಕ್ಷ ಕೈಗೊಂಡ ತೀರ್ಮಾನಗಳನ್ನು ಚಳಿಗಾಲದ ಅಧಿವೇಶನದಲ್ಲೇ ಕಾನೂನು ರೂಪದಲ್ಲಿ ಜಾರಿಗೆ ತರುವುದು, ಅದು ಸಾಧ್ಯವಾಗದಿದ್ದರೆ, ಅಧಿವೇಶನ ಮುಗಿದ ನಂತರ ಸುಗ್ರೀವಾಜ್ಞೆ ಮೂಲಕ ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಕಾರ್ಯಕಾರಿಣಿ ಸೂಚಿಸಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಜ್ಜು ಗೊಳ್ಳಬೇಕು, ಹಿಂದುತ್ವವನ್ನೇ ಮುಂದಿಟ್ಟುಕೊಂಡು, ಚುನಾವಣೆ ಎದುರಿಸಲು ಎಲ್ಲ ಸಿದ್ಧತೆ…
ಬಿಜೆಪಿಯ ಸರ್ಕಸ್ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ
November 22, 2020ಬೆಂಗಳೂರು: ಬಿಜೆಪಿಯ ಸರ್ಕಸ್ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾ ದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ ಎಂದು ಸಿದ್ದರಾಮಯ್ಯ ಆಡ ಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದಾರೆ. ಹಿಂದೆಲ್ಲ ಬಿಜೆಪಿ ನಾಯಕರು, ಹೈಕಮಾಂಡ್ ಸಂಸ್ಕೃತಿ’ ಮೂಲ ನಿವಾಸಿಗಳು-ವಲಸೆ ಗಾರರು’ಕುಟುಂಬ ರಾಜಕಾರಣ’ ಎಂಬಿ ತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ರುವ ಅವರು,…
ನಾಳೆ ಬಿಜೆಪಿಯಿಂದ ವರ್ಚುವಲ್ ರ್ಯಾಲಿ: ಜೆಪಿ ನಡ್ಡಾರಿಂದ ಭಾಷಣ
June 13, 2020ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್ಡಿಎ ಸರ್ಕಾರವು 2ನೇ ಅವಧಿಯ ಮೊದಲ ವರ್ಷವನ್ನು ಪೂರೈಸಿರುವ ಹಿನ್ನೆಲೆ ಯಲ್ಲಿ ನಗರದಲ್ಲಿ ರಾಜ್ಯ ಬಿಜೆಪಿಯು ವರ್ಚುವಲ್ ರ್ಯಾಲಿ ಯೊಂದನ್ನು ಇದೇ ಭಾನುವಾರ ನಡೆಸುತ್ತಿದ್ದು, ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾಷಣ ಮಾಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು, ರ್ಯಾಲಿ ಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷರು ಆತ್ಮ ನಿರ್ಭರ ಭಾರತ ಕುರಿತು ಮಾತನಾಡಲಿದ್ದಾರೆ. ಭಾನುವಾರ ಸಂಜೆ 6…
ಅವಹೇಳನಕಾರಿ ಹೇಳಿಕೆ: ಸಂಸದ ಹೆಗಡೆ ವಿರುದ್ಧ ಮೈಸೂರು ಡಿಸಿ, ಎಸ್ಪಿಗಿಂದು ಕಾಂಗ್ರೆಸ್ ದೂರು
February 8, 2020ಮೈಸೂರು: ಪದೇ ಪದೆ ಅವ ಹೇಳನಕಾರಿ ಹೇಳಿಕೆ ನೀಡುವ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಫೆ.8ರ ಬೆಳಿಗ್ಗೆ ಮೈಸೂರು ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ನಿಯೋಗ ದೂರು ನೀಡಲಿದೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ತಿಳಿಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ಸಂಸದರಾಗಿ ಜವಾಬ್ದಾರಿ ಯುತ ಸ್ಥಾನದಲ್ಲಿರುವ ಅನಂತ್ಕುಮಾರ್ ಹೆಗಡೆ, ಬೇಕೆಂದೇ ಸಮಾಜದಲ್ಲಿ ಗದ್ದಲ ಎಬ್ಬಿಸುವ…
ಡಿ.16ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ
December 12, 2019ಬೆಂಗಳೂರು, ಡಿ.11(ಕೆಎಂಶಿ)- ವರಿಷ್ಠರ ಭೇಟಿಯ ಸಮಯ ನಿಗದಿಯಾಗದ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಮಂತ್ರಿ ಮಂಡಲ ವಿಸ್ತರಿಸಲು ಇನ್ನೂ ಕಾಲ ಕೂಡಿ ಬಂದಿಲ್ಲ. ಪಕ್ಷದ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದ ನೂತನ ಶಾಸಕರು ಮಾತ್ರ ತಕ್ಷಣವೇ ಮಂತ್ರಿಮಂಡಲ ವಿಸ್ತರಿಸಿ, ಸರ್ಕಾರ ರಚನೆಗೂ ಮುನ್ನ ನಮಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಅನರ್ಹರು ಮತ್ತು ಅನರ್ಹಗೊಂಡು ಈಗ ಶಾಸಕರಾಗಿ ರುವವರು, ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಯಕತ್ವ ದಲ್ಲಿ ಇಂದು ಮುಂಜಾನೆ ಯಡಿಯೂರಪ್ಪನವರನ್ನು ಧವಳ…
ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ : ಕೇಂದ್ರ ಸಚಿವರು, ಸಂಸದರಿಗೆ ಸ್ಥಾನ
November 18, 2019ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯ ಸಚಿವರು, ಸಂಸದರು ಹಾಗೂ ಬಿಜೆಪಿಯ ಪ್ರಮುಖ ನಾಯಕರು ಸೇರಿದಂತೆ 40 ಪ್ರಮುಖ ಸ್ಟಾರ್ ಪ್ರಚಾರಕರ ಸ್ಥಾನವನ್ನು ನೀಡಲಾಗಿದೆ. ಇನ್ನು ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರಗೆ ಸ್ಥಾನ ಇಲ್ಲ, ಇನ್ನೊಬ್ಬ ಪುತ್ರ ಸಂಸದ ಬಿ.ವೈ.ರಾಘ ವೇಂದ್ರಗೂ ಪಟ್ಟಿಯಲ್ಲಿ ಸ್ಥಾನವನ್ನು ನೀಡಿಲ್ಲ. ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಾಜ್ಯ ಬಿಜೆಪಿ…
ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿ ಅಧಿಕಾರಕ್ಕೆ
October 25, 2019ನವದೆಹಲಿ, ಅ.24- ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾ ವಣಾ ಫಲಿತಾಂಶ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳೆಲ್ಲವನ್ನೂ ಸುಳ್ಳಾಗಿಸಿವೆ. ಮಹಾರಾಷ್ಟ್ರದ ಮತದಾರ ಬಿಜೆಪಿ ಮತ್ತು ಶಿವಸೇನೆ ಶಕ್ತಿಯನ್ನು ಕುಗ್ಗಿಸಿ ದ್ದರೂ ಆಡಳಿತ ನಡೆಸಲು ಮೈತ್ರಿಕೂಟಕ್ಕೆ ಮತ್ತೊಂದು ಅವಕಾಶ ನೀಡಿದ್ದಾನೆ. ಆದರೆ, ಹರಿಯಾಣದ ಜಾಟ್ ಸಮುದಾಯದವರು ಕೊಟ್ಟ ಏಟಿಗೆ ಬಿಜೆಪಿ ಅಕ್ಷರಶಃ ಕಳೆಗುಂದಿದೆ. ಅದೇ ವೇಳೆ ಕಾಂಗ್ರೆಸ್ ಸಾಮಥ್ರ್ಯ ಹೆಚ್ಚಿಸಿಕೊಂಡಿದೆ. ಜತೆಗೆ ಹೊಸ ಪಕ್ಷವೊಂದು ಉದಯವಾಗಿದೆ. ಆದರೆ, ಹರಿಯಾಣದಲ್ಲಿ ಯಾವುದೇ ಪಕ್ಷಕ್ಕೂ ಸರ್ಕಾರ ರಚಿಸಲು ಅಗತ್ಯವಾದಷ್ಟು…
ಎಲ್ಲಾ ಅನರ್ಹ ಶಾಸಕರಿಗೂ ಬಿಜೆಪಿ ಟಿಕೆಟ್
October 1, 2019ಬೆಂಗಳೂರು, ಸೆ. 30(ಕೆಎಂಶಿ)- ಮಾಜಿ ಸಚಿವ ಹೆಚ್. ವಿಶ್ವನಾಥ್ ಸೇರಿದಂತೆ 17 ಅನರ್ಹ ಶಾಸಕರಿಗೂ ಉಪಚುನಾವಣೆ ಯಲ್ಲಿ ಸ್ಪರ್ಧಿಸಲು ಪಕ್ಷದ ವತಿಯಿಂದ ಟಿಕೆಟ್ ನೀಡಲಾಗುವುದೆಂದು ಮುಖ್ಯಮಂತ್ರಿ ಯಡಿ ಯೂರಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಈ ಶಾಸಕರ ಬಲವೇ ಕಾರಣ. ಇವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಅನರ್ಹ ರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುತ್ತಾ ಎಂಬ ಪ್ರಶ್ನೆಗೆ ಮುಖ್ಯ ಮಂತ್ರಿಯವರೇ ತೆರೆ ಎಳೆದಿದ್ದಾರೆ. ಟಿಕೆಟ್ ನೀಡುವುದಲ್ಲದೆ, ಚುನಾವಣೆ ನಡೆಯುತ್ತಿರುವ ಎಲ್ಲಾ…
ಬಿಜೆಪಿ ಸರ್ಕಾರ ರಚನೆ ಕಗ್ಗಂಟು
July 25, 2019ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಇಲ್ಲವೇ ಅನರ್ಹತೆ ವಿಚಾರ ಇತ್ಯರ್ಥವಾಗುವವರೆಗೂ ಅತಂತ್ರ ಸ್ಥಿತಿ, ತಪ್ಪಿದರೆ ರಾಷ್ಟ್ರಪತಿ ಆಳ್ವಿಕೆ ಅನಿವಾರ್ಯ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸ ಮತದಲ್ಲಿ ಸೋತು ಪತನಗೊಂಡರೂ, ಈಗ ಬಿಜೆಪಿ ಸರ್ಕಾರ ರಚಿಸಲು ಕಾನೂನಿನ ಕಗ್ಗಂಟು ಎದುರಾಗಿದೆ. ರಾಜೀನಾಮೆ ನೀಡಿರುವ ಶಾಸಕರ ರಾಜೀ ನಾಮೆ ಅಂಗೀಕಾರ ಅಥವಾ ಅನರ್ಹತೆ ವಿಚಾರ ಇತ್ಯರ್ಥವಾಗುವವರೆಗೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಅಸಾಧ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಬೋಧಿಸಬೇಕಾದರೆ…