ನವದೆಹಲಿ: ನಮಗೆ ಯಾವತ್ತೂ ಅಹಂಕಾರ ಬರಬಾರದು. ಅಹಂಕಾರ ವನ್ನು ಎಷ್ಟು ದೂರ ತಳ್ಳುತ್ತೇವೆಯೋ ಅಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸದರಿಗೆ ಪಾಠ ಮಾಡಿದರು. ಸಂಸತ್ನ ಸೆಂಟ್ರಲ್ ಹಾಲ್ನಲ್ಲಿ ನಡೆದ ಎನ್ಡಿಎ ಮೈತ್ರಿ ಕೂಟದ ಸಭೆಯಲ್ಲಿ ಸಂಸದೀಯ ನಾಯಕನಾಗಿ ಆಯ್ಕೆಯಾದ ನಂತರ ನೂತನ ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಜನರಿಂದಾಗಿ ನಾವು ಇಲ್ಲಿ ಇದ್ದೇವೆ. ನಾವು ಎಷ್ಟೇ ಬೆಳೆದರೂ ನಮ್ಮ ಬೇರುಗಳನ್ನು ಕೈಬಿಡಬಾರದು. ಯಾವಾಗ ನಿಮ್ಮಲ್ಲಿ ಅಹಂಕಾರ ಬೆಳೆಯುತ್ತದೋ, ಆಗ ಮೋದಿ ಅಲ್ಲ,…
2022ರೊಳಗಾಗಿ ಕೆ.ಆರ್.ಕ್ಷೇತ್ರದ ಬಾಡಿಗೆ ಮನೆಯಲ್ಲಿರುವವರಿಗೆ ಸೂರು
May 26, 2019ಮೈಸೂರು: 2022ರೊಳಗಾಗಿ ಪ್ರಧಾನಮಂತ್ರಿಗಳ ಕನಸಿನಂತೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಮೈಸೂರಿನ ಕೆ.ಆರ್.ಕ್ಷೇತ್ರದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಸ್ವಂತ ಸೂರು ಒದಗಿಸಲಾಗುವುದು ಎಂದು ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ಪ್ರಕಟಿಸಿದ್ದಾರೆ. ಸಂಸದರಾಗಿ ಎರಡನೇ ಬಾರಿ ಪ್ರತಾಪ್ ಸಿಂಹ ಅವರನ್ನು ಆಯ್ಕೆ ಮಾಡಿದ ಮತ ದಾರರಿಗೆ ಕೃತಜ್ಞತೆ ಹೇಳುವ ಸಲುವಾಗಿ ಮೈಸೂರಿನ ಬಿ.ಎನ್. ರಸ್ತೆಯಲ್ಲಿರುವ ಹೋಟೆಲ್ ಪ್ರೆಸಿಡೆಂಟ್ನಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಭಾರತದ 75ನೇ ಸ್ವಾತಂತ್ರ್ಯ ವರ್ಷ ವಾದ 2022ರ ಆಗಸ್ಟ್ 15ರೊಳಗಾಗಿ ಪ್ರಧಾನಮಂತ್ರಿಗಳ ಆವಾಜ್ ಹಾಗೂ…
ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ
May 26, 2019ಮೈಸೂರು: ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್ಸಿಂಹರಿಗೆ ಅತ್ಯಧಿಕ ಮತಗಳ ಮುನ್ನಡೆ ದೊರೆತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ತಿಳಿಸಿದ್ದಾರೆ. ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲಿನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾ ಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 60,000 ಮತಗಳ ಮುನ್ನಡೆ ಸಾಧಿಸಲು ಅವಕಾಶ ನೀಡಿ, ಪ್ರತಾಪ್ಸಿಂಹ 2ನೇ ಬಾರಿ ಸಂಸದರಾಗಿ ಆಯ್ಕೆಯಾಗಲು ಕಾರಣಕರ್ತರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ 1,46,690 ಮತಗಳು ಚಲಾವಣೆಯಾಗಿತ್ತು. 100 ದಿನಗಳಲ್ಲಿ 1 ಲಕ್ಷ ಮತ ಕ್ಷೇತ್ರವಾಗಿಸುವ…
ಗುರುಗಳಿಬ್ಬರ ಪಾದಕ್ಕೆರಗಿ ಆಶೀರ್ವಾದ ಪಡೆದ `ಲೋಕ’ ವಿಜೇತ ನರೇಂದ್ರ ಮೋದಿ
May 25, 2019ನವದೆಹಲಿ: ಅದೊಂದು ಅಪರೂಪದ ಕ್ಷಣ, ಭಾವೋದ್ವೇಗದ ಸನ್ನಿವೇಶ. ಬಹಳ ದಿನಗಳ ನಂತರ ಗುರು-ಶಿಷ್ಯರ ಭೇಟಿ. ಅಭಿನಂದನೆ, ಆಶೀರ್ವಾದ, ಆಲಿಂಗನ, ಸಿಹಿ ಸಿಹಿ ಮಾತುಗಳ ವಿನಿಮಯದ ಕ್ಷಣ. ಷ್ಟೇ ಅಂತ್ಯಗೊಂಡ 17ನೇ ಲೋಕ ಸಭೆಯ ಚುನಾವಣೆಯಲ್ಲಿ ಅಭೂತ ಪೂರ್ವ ಜಯ ದಾಖಲಿಸಿದ ನರೇಂದ್ರ ದಾಮೋದರದಾಸ್ ಮೋದಿ ಮತ್ತು ಅಮಿತ್ ಶಾ ಜೋಡಿ, ಪಕ್ಷವನ್ನು ತಳ ಮಟ್ಟದಿಂದ ಕಟ್ಟಿ ಸದೃಢವಾಗಿ ಬೆಳೆಸಿದ ಹಿರಿಯರಿಬ್ಬರನ್ನು ಶುಕ್ರವಾರ ಬೆಳಿಗ್ಗೆ ಅವರ ಮನೆಯಂಗಳದಲ್ಲೇ ಭೇಟಿ ಮಾಡಿ ಶುಭಾಶಯ ವಿನಿಮಯ ಮಾಡಿ ಕೊಂಡರು, ಜೊತೆಗೆ ಆಶೀರ್ವಾದ…
ಮೇ 30ಕ್ಕೆ ಪ್ರಧಾನಿಯಾಗಿ ಮೋದಿ ಪದಗ್ರಹಣ
May 25, 2019ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಂಡ ಗೆಲುವಿನ ನಂತರ ಎರಡನೇ ಅವಧಿಗೆ ಪ್ರಧಾನಿಯಾಗಿ ಮೋದಿ ಮೇ30 ರಂದು ಪದಗ್ರಹಣ ಮಾಡಲಿದ್ದಾರೆ. 2014ರಂತೆ ಈ ಬಾರಿಯೂ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ವಿದೇಶದ ನಾಯಕರು ಆಗಮಿಸುವ ಸಾಧ್ಯತೆ ಇದೆ. 2014ಕ್ಕಿಂತ ಈ ಬಾರಿಯ ಪದಗ್ರಹಣ ಕಾರ್ಯಕ್ರಮ ಬೃಹತ್ ಪ್ರಮಾಣದಲ್ಲಿ ನಡೆಯಲಿದೆ. ಕಳೆದ ಬಾರಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಮೋದಿ ಪದ ಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿತ್ತು. ಈ ಬಾರಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ…
ಪ್ರತಾಪ್ ಸಿಂಹ ಸೇರಿ ರಾಜ್ಯದ 8 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
May 25, 2019ನವದೆಹಲಿ: ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎಂಟು ಮಂದಿ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 25 ಸಂಸದರನ್ನು ನೀಡಿರುವ ಕರ್ನಾಟಕಕ್ಕೆ ಹೆಚ್ಚಿನ ಸಚಿವ ಸ್ಥಾನಗಳು ಸಿಗಬಹುದು ಎಂದು ಹೇಳಲಾಗಿದ್ದು, ಒಕ್ಕಲಿಗ ಸಮಾಜದವರಾದ ಯುವ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಕೇಳಿಬರುತ್ತಿದೆ. ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ,…
ಮೋದಿ ಸುನಾಮಿ ಪ್ರತಿಪಕ್ಷಗಳು ಧೂಳೀಪಟ
May 24, 2019ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಮೇ 29ಕ್ಕೆ ಪ್ರಮಾಣ ವಚನ ಸಾಧ್ಯತೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೂ 5 ವರ್ಷಗಳ ಕಾಲ ದೇಶದ ಆಡಳಿತ ನಡೆಸ ಬೇಕೆಂಬ ಜನಾದೇಶ ವನ್ನು ಯಾರೂ ಊಹಿಸಲಾಗದಷ್ಟು ಬೃಹತ್ ಪ್ರಮಾಣದಲ್ಲಿ ಹಾಗೂ ಸ್ಪಟಿಕ ಸದೃಶದಷ್ಟು ಸ್ಪಷ್ಟ ರೀತಿಯಲ್ಲಿ ದೇಶದ ಜನತೆ ನೀಡಿದೆ. ನಿರೀಕ್ಷೆಗೂ ಮೀರಿ ಬಂದಿರುವ ಜನಾದೇಶ ದಿಂದ ಉಲ್ಲಸಿತರಾಗಿರುವ ನರೇಂದ್ರ ದಾಮೋದರದಾಸ್ ಮೋದಿ ಅವರು ಇದೇ ಮೇ 29ರಂದು ಎರಡನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಬರಿಯ…
ರಾಜ್ಯದಲ್ಲಿ ಬಿಜೆಪಿ ಮೇಲುಗೈ
May 21, 2019ಬೆಂಗಳೂರು: ಕರ್ನಾಟಕ ರಾಜ್ಯದ 28 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ ಸಿ-ವೋಟರ್ ಸಮೀಕ್ಷೆ ಹೊರ ಬಿದ್ದಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ 7 ಸ್ಥಾನಗಳನ್ನು ಪಡೆಯಲಿದೆ. ದೇಶದ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿನ ನಗೆ ಬೀರಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪುನರಾಯ್ಕೆ ಆಗಲಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಹಾಲಿ ಸಂಸದ ಆರ್.ಧ್ರುವ ನಾರಾಯಣ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ…
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗರು-ಲಿಂಗಾಯತರ ಫೈಟ್!
May 19, 2019ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ ಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಕಾಣುತ್ತಿದ್ದಾರೆ, ಇನ್ನೊಂದೆಡೆ ತೆರವಾದ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದಾರೆ. ಹಲವು ನಾಯಕರು ಹುದ್ದೆಗಾಗಿ ಲಾಬಿ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯಲ್ಲಿ ಭಾಗಿಯಾಗಿ ದ್ದಾರೆ, ಯಡಿಯೂರಪ್ಪ ಅವರ ಸ್ಥಾನಕ್ಕೆ ಯಾರು ಸೂಕ್ತ ಎಂಬ ಬಗ್ಗೆ ಬಿಜೆಪಿ ಪ್ರಮುಖ ನಾಯಕರು ಚಿಂತಿಸುತ್ತಿದ್ದಾರೆ. ಲೋಕಸಭೆ ಫಲಿತಾಂಶ ಹಾಗೂ ಸಮ್ಮಿಶ್ರ ಸರ್ಕಾರದ ಸ್ಥಿರತೆ ಯಡಿಯೂರಪ್ಪ ಅವರ ವೈಯಕ್ತಿಕ ಅದೃಷ್ಟ ಮುಂದಿನ…
ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ
May 18, 2019ನವದೆಹಲಿ: ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ನಮ್ಮ ಸರ್ಕಾರದ ಐದು ವರ್ಷಗಳ ಸಾಧನೆಗಳ ಬಗ್ಗೆ ತೃಪ್ತಿಯಿದೆ ಎಂದು ಹೇಳಿದ್ದಾರೆ. ಏಳನೇ ಹಾಗೂ ಕೊನೆಯ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಕಚೇರಿ ಯಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು….