ಮೈಸೂರು,: ಹಿಂದೆ ಆಡಳಿತ ನಡೆಸಿದ ಯುಪಿಎ ಸರ್ಕಾರ ಕಲ್ಲಿ ದ್ದಲು, ಹೆಲಿಕಾಪ್ಟರ್ ಖರೀದಿ ಸೇರಿದಂತೆ ಮತ್ತಿತರೆ ಹಗರಣಗಳನ್ನು ಮಾಡಿ ದೇಶ ವನ್ನು ಭ್ರಷ್ಟಾಚಾರ ಕೂಪವನ್ನಾಗಿಸಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 5 ವರ್ಷಗಳಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಮೂಲಕ ಯಾವುದೇ ಒಂದು ಕಪ್ಪುಚುಕ್ಕೆ ಇಲ್ಲದಂತೆ ಕಾರ್ಯ ನಿರ್ವಹಿಸಿ ದ್ದಾರೆ ಎಂದು ಬಿಜೆಪಿ ಮುಖಂಡರಾದ ನಟಿ ಮಾಳವಿಕ ಅವಿನಾಶ್ ಹೇಳಿದರು. ಜನರಲ್ ಕೆ.ಸಿ.ಕಾರ್ಯಪ್ಪ (ಮೆಟ್ರೋ ಪೋಲ್ ವೃತ್ತದ ಬಳಿಯಿರುವ ಗೋವಿಂದ ರಾವ್ ಮೆಮೋರಿಯಲ್ ಹಾಲ್ನಲ್ಲಿ…
ಶಿವಮೊಗ್ಗದಲ್ಲಿ ರಾಘವೇಂದ್ರರ ಗೆಲುವು ಶತಃಸಿದ್ಧ
April 5, 2019ಸಹೋದರ ವಿಜಯೇಂದ್ರ ವಿಶ್ವಾಸ ಶ್ರೀನಿವಾಸ ಪ್ರಸಾದ್ ಗೆಲ್ಲುವುದು ಖಚಿತ ಮೈಸೂರು: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಸಲು ಮೈತ್ರಿ ನಾಯಕರು ಎಲ್ಲಾ ಅಸ್ತ್ರಗಳನ್ನು ಬಳಸುತ್ತಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಅವರ ಎಲ್ಲಾ ಅಸ್ತ್ರಗಳೂ ಮೂಲೆ ಸೇರಿವೆ. ಮುಂದಿನ ಚುನಾವಣೆಯಲ್ಲಿ ಗೆಲ್ಲೋದು ನಮ್ಮ ಸಹೋದರ ಬಿ.ವೈ. ರಾಘವೇಂದ್ರ ಅವರೇ ಎಂದು ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಬಿ.ವೈ.ವಿಜ ಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಏನಿದ್ದರೂ ಯಡಿಯೂರಪ್ಪ ಅವರದ್ದೇ ಹವಾ. ಕಳೆದ ಉಪಚುನಾವಣೆಯಲ್ಲಿ ಗೆಲುವು…
ದೇಶಕ್ಕೆ ಮಹಾರಾಜರು ಬೇಕಿಲ್ಲ… ಚೌಕಿದಾರರು ಬೇಕಿದೆ
April 1, 2019ನವದೆಹಲಿ: ರಾಜಮನೆತನದ ನಾಯಕರೆಲ್ಲ ದೇಶವನ್ನು ಕೊಳ್ಳೆ ಹೊಡೆದಿದ್ದಾರೆ. ಈ ದೇಶಕ್ಕೆ ಮಹಾರಾಜರು ಬೇಕಿಲ್ಲ. ಚೌಕಿದಾರರು ಬೇಕಾಗಿದ್ದಾರೆ. ಇಂದು ನಾವೆಲ್ಲರೂ ಕಾವಲು ಗಾರರಾಗಿ ದೇಶವನ್ನು ರಕ್ಷಣೆ ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನವದೆಹಲಿಯ ಟೌನ್ಹಾಲ್ನಲ್ಲಿ ಇಂದು `ಮೈ ಭೀ ಚೌಕಿದಾರ್’ ಸಂವಾದ ಕಾರ್ಯಕ್ರಮ ದಲ್ಲಿ ದೇಶದ ಮತದಾರರನ್ನುದ್ದೇಶಿಸಿ ಮಾತನಾ ಡಿದ ಅವರು, ದೇಶದ ಪ್ರತಿಯೊಬ್ಬರೂ ಚೌಕಿದಾರ ರಾಗಬೇಕು. ದೇಶವನ್ನು ಲೂಟಿ ಹೊಡೆಯುತ್ತಿರು ವವರ ವಿರುದ್ಧ ಒಂದಾಗಬೇಕು ಎಂದರು. ಸೈನಿಕರು, ಕಾರ್ಮಿಕರು ಹಾಗೂ ವಿದ್ಯಾರ್ಥಿ ಗಳು ಎಲ್ಲರೂ…
ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್ಸಿಂಹ, ವಿಜಯಶಂಕರ್ ಸೇರಿ ಕಣದಲ್ಲಿ 22 ಮಂದಿ
March 30, 2019ಮೈಸೂರು: ಮೈಸೂರು-ಕೊಡಗು ಲೋಕ ಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದವರ ಪೈಕಿ ಮೂವರು ಪಕ್ಷೇತರರು ಇಂದು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದರು. ಪಿ.ಎಸ್.ಯಡೂರಪ್ಪ, ಎಂ.ಖಲೀಲ್ ಹಾಗೂ ಎಂ. ಶ್ರೀನಿವಾಸ್, ಶುಕ್ರವಾರ ಮಧ್ಯಾಹ್ನ ಮೈಸೂರು ಜಿಲ್ಲಾ ಚುನಾವಣಾ ಧಿಕಾರಿ ಅಭಿರಾಂ ಜಿ. ಶಂಕರ್ ಅವರಿಗೆ ಅರ್ಜಿ ಸಲ್ಲಿಸಿ, ತಮ್ಮ ಉಮೇದುವಾರಿಕೆ ವಾಪಸ್ ಪಡೆದುಕೊಂಡರು. ಇದರಿಂದಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಲ್ಲಿ ಬಿಜೆಪಿಯ ಪ್ರತಾಪ್ಸಿಂಹ, ಕಾಂಗ್ರೆಸ್ನ ಸಿ.ಹೆಚ್. ವಿಜಯ ಶಂಕರ್, ಬಿಎಸ್ಪಿಯ ಬಿ.ಚಂದ್ರ ಸೇರಿದಂತೆ ಒಟ್ಟು…
ವಾರಣಾಸಿಯಲ್ಲೇ ಮೋದಿ ಸ್ಪರ್ಧೆ
March 22, 2019ನವದೆಹಲಿ: ಕೇಂದ್ರದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಶತ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಲೋಕಸಭಾ ಚುನಾವಣೆಗೆ ಕರ್ನಾ ಟಕದ 21 ಕ್ಷೇತ್ರ ಸೇರಿದಂತೆ ದೇಶದ 184 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ 91 ವರ್ಷದ ಎಲ್.ಕೆ.ಅಡ್ವಾಣಿ ಅವರ ಸ್ಪರ್ಧೆಗೆ ಅವಕಾಶ ನಿರಾಕರಿಸ ಲಾಗಿದ್ದು, ಅವರು ಸ್ಪರ್ಧಿಸುತ್ತಿದ್ದ ಗುಜರಾತ್ನ ಗಾಂಧಿ ನಗರ ಕ್ಷೇತ್ರವನ್ನು ಪ್ರಧಾನಿ ಬಲಗೈ ಭಂಟ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ನೀಡಲಾ ಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ…
ಶ್ರೀನಿವಾಸಪ್ರಸಾದ್, ಪ್ರತಾಪ್ಸಿಂಹ, ಸದಾನಂದಗೌಡ, ಶೋಭಾ ಕರಂದ್ಲಾಜೆ ಸ್ಪರ್ಧಿಸಲು ಅವಕಾಶ
March 21, 2019ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ನೀಡದಿರಲು ನಿರ್ಧರಿಸಿ ರುವ ರಾಷ್ಟ್ರೀಯ ಬಿಜೆಪಿ ತನ್ನ ಅಭ್ಯರ್ಥಿ ಯನ್ನು ಕಣಕ್ಕಿಳಿಸಲು ನಿರ್ಧರಿಸಿರುವುದಲ್ಲದೆ, ಕರ್ನಾಟಕದ ಹಾಲಿ ಎಲ್ಲಾ ಸಂಸದರಿಗೂ ಮತ್ತೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅಧ್ಯಕ್ಷತೆ ಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಲ್ಲದೆ, ಬಹುತೇಕ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದೆ. ಅಧಿಕೃತವಾಗಿ ಪಟ್ಟಿ ಹೊರ…
ಪರಿಕ್ಕರ್ ನಿಧನ ಹಿನ್ನೆಲೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಮುಂದೂಡಿಕೆ
March 19, 2019ಬೆಂಗಳೂರು: ಕ್ಯಾನ್ಸರ್ ರೋಗದಿಂದ ನಿನ್ನೆ ಗೋವಾ ರಾಜಧಾನಿ ಪಣಜಿಯಲ್ಲಿ ನಿಧನರಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ರವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳ ಬೇಕಾಗಿರುವುದರಿಂದ ಇಂದು ನಡೆಯಬೇಕಿದ್ದ ಬಿಜೆಪಿಯ ಮಹತ್ವದ ಕೇಂದ್ರ ಚುನಾವಣಾ ಸಮಿತಿ ಸಭೆಯನ್ನು ಮುಂದೂಡಲಾಗಿದೆ. ಪರಿಕ್ಕರ್ ಅವರ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಸುಷ್ಮಾ ಸ್ವರಾಜ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಕೇಂದ್ರ ಚುನಾವಣಾ ಸಮಿತಿಯ ಬಹುತೇಕ ಸದಸ್ಯರು ಅಂತ್ಯಕ್ರಿಯೆಯಲ್ಲಿ…
`ಕೈ’ ಬಿಟ್ಟು `ಕಮಲ’ ಹಿಡಿದ ಮಾಜಿ ಸಚಿವ ಎ.ಮಂಜು
March 18, 2019ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎ.ಮಂಜು ಅವರು ನಿರೀಕ್ಷೆಯಂತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆದಿದ್ದು, ಎ.ಮಂಜು ಅವರ ಒಂದೇ ಹೆಸರನ್ನು ಹಾಸನ ಲೋಕಸಭಾ ಕ್ಷೇತ್ರಕ್ಕೆ ಶಿಫಾರಸ್ಸು ಮಾಡಿರುವ ಹಿನ್ನೆಲೆಯಲ್ಲಿ ಮಂಜು ಅವರು ಇಂದು ಸಂಜೆ ಹಠಾತ್ತನೇ ಬಿಜೆಪಿ ಸದಸ್ಯತ್ವ…
ನಾಳೆ ಬಿಜೆಪಿ ಪಟ್ಟಿ ಪ್ರಕಟ
March 17, 2019ಬೆಂಗಳೂರು: ರಾಜ್ಯದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಬಿಜೆಪಿ ಹುರಿಯಾಳುಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಕ್ಕೂ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಂದಾಗಿದ್ದ ಕಾಂಗ್ರೆಸ್ ದೆಹಲಿಯಲ್ಲಿ ಇಂದು ನಡೆಯಬೇಕಿದ್ದ ಅಭ್ಯರ್ಥಿ ಆಯ್ಕೆ ಸಮಿತಿ ಸಭೆಯನ್ನು ಮಂಗಳ ವಾರಕ್ಕೆ ಮುಂದೂಡಿದೆ. ಮೈತ್ರಿ ಪಕ್ಷದೊಂದಿ ಗಿನ ಸೀಟು ಹೊಂದಾಣಿಕೆ ನಂತರ ಪಕ್ಷದಲ್ಲಿ ಉಂಟಾಗಿರುವ ಗೊಂದಲದಿಂದ ಆಯ್ಕೆ ಸಮಿತಿ ಸಭೆ ಮುಂದೂಡಲಾಗಿದೆ. ಬಿಜೆಪಿ 20ರಿಂದ 22 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಘಟಕಕ್ಕೆ ಶಿಫಾರಸು…
ಕೃಷ್ಣ-ಯಡಿಯೂರಪ್ಪ ಭೇಟಿ: ಸುಮಲತಾ ಸ್ಪರ್ಧೆ ಕುರಿತು ಚರ್ಚೆ
March 17, 2019ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸೆಣಸಾಡುತ್ತಿರುವ ಮಾಜಿ ಸಚಿವ, ದಿವಂಗತ ನಟ ಅಂಬರೀಶ್ ಪತ್ನಿ ಸುಮ ಲತಾ ಅವರಿಗೆ ಬೆಂಬಲ ನೀಡಬೇಕೇ? ಬೇಡವೇ? ಎಂಬ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ-ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದರು. ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಒಂದು ಗಂಟೆ…