ಮೈಸೂರು: ಮೈಸೂರಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾ ನಂದ ಆಶ್ರಮ ಹಾಗೂ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಸಹಯೋಗ ದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬದವರಿಗೆ ದಿನಸಿ ಕಿಟ್ ವಿತರಿಸಲಾಯಿತು. ಇಟ್ಟಿಗೆಗೂಡಿನಲ್ಲಿರುವ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಕಿಟ್ ವಿತರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಕೊರೊನಾದಿಂದ ಎಲ್ಲರೂ ಸಂಕಷ್ಟಕ್ಕೀಡಾಗಿದ್ದಾರೆ. ಲಾಕ್ಡೌನ್ನಿಂದಾಗಿ 2 ತಿಂಗಳಿಂದ ದೇವಾಲಯಗಳು ಮುಚ್ಚಿವೆ. ಸಮಾರಂಭಗಳು ನಡೆಯುತ್ತಿಲ್ಲ. ಪರಿಣಾಮ ಅರ್ಚಕರು ಹಾಗೂ ಪುರೋಹಿತರ ಕುಟುಂಬ ತೀವ್ರ ಸಂಕಷ್ಟದಲ್ಲಿವೆ. ಈಗಾಗಲೇ ಮೈಸೂರು ಬ್ರಾಹ್ಮಣ ಸಂಘವು,…
ಸಚಿವ ಸತೀಶ್ ಜಾರಕಿ ಹೊಳಿ ಹೇಳಿಕೆಗೆ ಬ್ರಾಹ್ಮಣರ ಖಂಡನೆ
April 19, 2019ಮೈಸೂರು: ದೇಶದ ಸೇನೆಯಲ್ಲಿ ಬ್ರಾಹ್ಮಣ ಸಮುದಾಯ ಸೇವೆ ಸಲ್ಲಿಸಿ ಜೀವ ಬಿಟ್ಟ ಇತಿಹಾಸವಿಲ್ಲ ಎಂದು ಸಚಿವ ಸತೀಶ್ ಜಾರಕಿ ಹೊಳಿ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ವೇಳೆ ಬ್ರಾಹ್ಮಣರ ನಿಂದನೆ ಹೇಳಿಕೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಎಸ್.ವೆಂಕಟನಾರಾಯಣ, ಸ್ವಾತಂತ್ರ್ಯ ಸಂಗ್ರಾಮ ಮತ್ತು ಸೇನೆಯಲ್ಲಿ ಬ್ರಾಹ್ಮಣರು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇದು ದೇಶದ ಇತಿಹಾಸದ ತಿಳುವಳಿಕೆ ಇದ್ದವರಿಗೆ ಅರಿವಾಗುತ್ತದೆ. ಆದರೆ ಸಚಿವರು ಇತಿಹಾಸದ ಅರಿವಿಲ್ಲದೆ ಚುನಾವಣೆ ವೇಳೆ…
ಸಂಸ್ಕಾರಯುತ ಸಮಾಜ ನಿರ್ಮಾಣದಲ್ಲಿ ಬ್ರಾಹ್ಮಣರ ಪಾತ್ರ ಹಿರಿದು
September 2, 2018ಮೈಸೂರು: ಬ್ರಾಹ್ಮಣ ಸಮುದಾಯ ಹಣ, ಆಸ್ತಿ, ಸಂಪತ್ತಿಗಿಂತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಸಮಾಜದಲ್ಲಿ ಉತ್ತಮ ಸಂಸ್ಕಾರ ಬೆಳೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿಯೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಪ್ರಶಂಸಿಸಿದರು. ಮೈಸೂರಿನ ಶಾರದವಿಲಾಸ ಕಾಲೇಜು, ಶತಮಾನೋತ್ಸವ ಭವನದಲ್ಲಿ ಸಂಧ್ಯಾ ಸುರಕ್ಷಾ ಟ್ರಸ್ಟ್ ಹಾಗೂ ಜಿಲ್ಲಾ ಬ್ರಾಹ್ಮಣ ಮಹಾಸಭಾ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಗಣ್ಯರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಜಾಹಗೀರ್ದಾರರು, ಶ್ಯಾನುಬೋಗರು, ಜಮೀನ್ದಾರರು ಬ್ರಾಹ್ಮಣರೇ ಆಗಿದ್ದರು. ಅನೇಕರಿಗೆ…
ರಾಷ್ಟ್ರಕ್ಕೆ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರ
August 13, 2018ಚಾಮರಾಜನಗರ: ಬ್ರಾಹ್ಮಣ ಸಮಾಜ ಇಡೀ ರಾಷ್ಟ್ರಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್.ಎ.ರಾಮದಾಸ್ ಅಭಿಪ್ರಾಯಪಟ್ಟರು. ಜಿಲ್ಲಾ ಬ್ರಾಹ್ಮಣ ಸಂಘ ನಗರದ ನಂದಿ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಬ್ರಾಹ್ಮಣ ಪ್ರಥಮ ಸಮ್ಮೇಳನದಲ್ಲಿ ಅವರು ವಿಪ್ರ ಸ್ಮರಣ ಸಂಚಿಕೆಯನ್ನು ಬಿಡು ಗಡೆಗೊಳಿಸಿ ಮಾತನಾಡಿದರು. ಬ್ರಾಹ್ಮಣ ಸಮುದಾಯ ಸ್ವಂತ ಶಕ್ತಿ, ಬುದ್ಧಿವಂತಿಕೆ ಹಾಗೂ ದೂರದೃಷ್ಟಿಯಿಂದ ದೇಶಕ್ಕೋಸ್ಕರ ನಾನಾ ಕೊಡುಗೆಗಳನ್ನು ನೀಡಿದೆ. ಬ್ರಾಹ್ಮಣ ಸಮಾಜದವರು ಪ್ರಧಾನಮಂತ್ರಿಗಳಾಗಿ, ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಈ ವೇಳೆ…
ಸಿಎಂ ಕುಮಾರಸ್ವಾಮಿಯವರಿಗೆ ಬ್ರಾಹ್ಮಣ ಸಮುದಾಯ ಅಭಿನಂದನೆ
July 23, 2018ಮೈಸೂರು: ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮತ್ತು ಶಂಕರ ಜಯಂತಿ ಆಚರಣೆಯನ್ನು ಸರ್ಕಾರದಿಂದ ಜಾರಿಗೆ ತಂದಿರುವುದಕ್ಕೆ ಮೈಸೂರು ಬ್ರಾಹ್ಮಣ ಯುವ ವೇದಿಕೆ ಮತ್ತು ವಿಪ್ರ ಮುಖಂಡರು ಮುಖ್ಯಮಂತ್ರಿ ಕುಮಾರಸ್ವಾಮಿ ಮೈಸೂರಿಗೆ ಆಗಮಿಸಿದ್ದ ವೇಳೆ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಪುರೋಹಿತರ ಬಳಗದ ವೇದಘೋಷ ಪೂರ್ಣಕುಂಭದೊಂದಿಗೆ ಸ್ವಾಗತಿಸಿ, ಸರ್ ಎಂ.ವಿಶ್ವೇಶ್ವರಯ್ಯ ಅವರ ಭಾವಚಿತ್ರವನ್ನು ನೀಡಿ ಅಭಿನಂದನೆ ಸಲ್ಲಿಸಿದರು, ಇದೇ ಸಂಧರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ಕಳೆದ ಎರಡು ತಿಂಗಳ ಹಿಂದೆ ಕುಮಾರಪರ್ವ ನಡೆಸಿದ ಸಂದರ್ಭದಲ್ಲಿ ಮೈಸೂರಿನಲ್ಲಿ ಬ್ರಾಹ್ಮಣ ಯುವ…
ಮೈಸೂರು ಬ್ರಾಹ್ಮಣ ಒಕ್ಕೂಟಗಳಿಂದ ಜಿ.ಟಿ.ದೇವೇಗೌಡರಿಗೆ ಅಭಿನಂದನೆ
July 17, 2018ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣರ ಸಮುದಾಯಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಂಕರ ಜಯಂತಿ ಆಚರಣೆಯನ್ನು ಬಜೆಟಿನಲ್ಲಿ ಪ್ರಕಟಿಸಿದ್ದು, ಇದಕ್ಕೆ ಪ್ರಮುಖ ಕಾರಣಕರ್ತರಾದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೆಗೌಡ ಅವರನ್ನು ಮೈಸೂರು ಬ್ರಾಹ್ಮಣ ಸಂಘಟನೆಗಳ ಒಕ್ಕೂಟದ ವತಿಯಿಂದ ವಿಪ್ರರ ಚಿಂತನಾ ಸಭೆಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣ ಹಿರಿಯ ಮುಖಂಡ ಕೆ.ರಘುರಾಂ ವಾಜಪೇಯಿ ಮಾತನಾಡಿ, ಕುಮಾರಪರ್ವ ಸಂದರ್ಭದಲ್ಲಿ ಬ್ರಾಹ್ಮಣ ಯುವ ವೇದಿಕೆ ಚಾಮುಂಡಿಪುರಂನಲ್ಲಿ ವಿಪ್ರಸಂಪರ್ಕ ಅಭಿಯಾನ ಆಯೋಜಿಸಿತ್ತು. ಈ ವೇಳೆ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಗವಹಿಸಿ…
ನಾಳೆ ಬ್ರಾಹ್ಮಣ ಯುವಕರಿಗೆ ಕೌಶಲ್ಯಾಭಿವೃದ್ದಿ ಕಾರ್ಯಾಗಾರ
July 14, 2018ಮೈಸೂರು: ಆಂತಾರಾಷ್ಟ್ರೀಯ ಕೌಶಲ್ಯ ದಿನಾಚರಣೆ ಅಂಗವಾಗಿ ಮೈಸೂರಿನ ವಿಪ್ರ ಉದ್ಯಮಿಗಳ ಸಂಘದ ಆಶ್ರಯದಲ್ಲಿ ಜು.15ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನ ಸರಸ್ವತಿಪುರಂ ರೋಟರಿ ಪಶ್ಚಿಮ ಸಭಾಂಗಣದಲ್ಲಿ ಯುವ ಬ್ರಾಹ್ಮಣ ಉದ್ಯಮಿಗಳಿಗೆ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಉದ್ದಿಮ ಪ್ರಾರಂಭಿಸುವ ಬಗೆ, ಕಚ್ಛಾ ವಸ್ತುಗಳನ್ನು ಎಲ್ಲಿಂದ ತರಿಸಿಕೊಳ್ಳಬೇಕು?, ಉದ್ದಿಮೆ ಆರಂಭಿಸುವಾಗ ಅನುಸರಿಸಬೇಕಾದ ಸಿದ್ಧತಾ…
ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಪನಯನ
July 10, 2018ಮೈಸೂರು: ಮೈಸೂರಿನ ಯರಗನಹಳ್ಳಿಯ ವೀರಾಂಜನೇಯಸ್ವಾಮಿ ಟ್ರಸ್ಟ್ ವತಿಯಿಂದ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಪನಯನ ಹಾಗೂ ಸಮಾಶ್ರಯಣವನ್ನು ಒಂಟಿಕೊಪ್ಪಲಿನ ಆಂಡಾಳ್ ಮಂದಿರದಲ್ಲಿ ಪುರೋಹಿತರ ಬಳಗದ ಅಧ್ಯಕ್ಷರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಟುಗಳಿಗೆ ಕರ್ಕಾಟಕ ಲಗ್ನದಲ್ಲಿ ಬ್ರಹ್ಮೋಪದೇಶ ಸಮಾಶ್ರಯಣ ಶಾತ್ತುಮೊರೈ ಹಾಗೂ ಸಾಮೂಹಿಕ ಉಪನಯನ ನೆರವೇರಿದ ಬಳಕ ಸ್ವಸ್ತ್ರಿರ್ವಾಚನ ಅನುಜ್ಞೆ ಹಾಗೂ ಇನ್ನಿತರ ಶೋಡಪೋಚಾರ ಪೂಜಾ ಕೈಂಕರ್ಯಗಳೊಂದಿಗೆ ಪ್ರಸಾದ ವಿನಿಯೋಗಿಸಲಾಯಿತು. ಇದೇ ವೇಳೆ ವೀರಾಂಜನೇಯ ಟ್ರಸ್ಟ್ ಅಧ್ಯಕ್ಷರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ…
ಬ್ರಾಹ್ಮಣ ಧರ್ಮ ಸಹಾಯ ಸಭಾದಿಂದ ಶಾಸಕ ರಾಮದಾಸರಿಗೆ ಅಭಿನಂದನೆ
July 7, 2018ಮೈಸೂರು: ಬ್ರಾಹ್ಮಣ ಧರ್ಮ ಸಹಾಯ ಸಭಾ ವತಿಯಿಂದ ಕೃಷ್ಣರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಅವರನ್ನು ಅಭಿನಂದಿಸಲಾಯಿತು.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಕಲ್ಯಾಣ ಭವನದಲ್ಲಿ ಶುಕ್ರವಾರ ಇಳೈ ಆಳ್ವಾರ್ ಸ್ವಾಮೀಜಿ ಸಾನಿದ್ಯದಲ್ಲಿ ನಡೆದ ಸಮಾರಂಭದಲ್ಲಿ ಬ್ರಾಹ್ಮಣ ಧರ್ಮ ಸಹಾಯ ಸಭಾ ಸೇರಿದಂತೆ ವಿವಿಧ ವಿಪ್ರ ಸಂಘ ಸಂಸ್ಥೆಗಳು, ಶಾಸಕ ರಾಮದಾಸ್ ಅವರನ್ನು ಅಭಿನಂದಿಸಿದವು. ಬಳಿಕ ಮಾತನಾಡಿದ ಎಸ್.ಎ.ರಾಮದಾಸ್, ನಾನು ಅಭಿನಂದನೆ ಸ್ವೀಕರಿಸಲೆಂದು ಬಂದಿಲ್ಲ. ಚುನಾವಣೆ ಪೂರ್ವದಲ್ಲೇ ನನ್ನನ್ನು ನಿಮ್ಮ ಮಗನೆಂದು ಭಾವಿಸಿ, ಹರಸಿದ ನಿಮ್ಮನ್ನೆಲ್ಲಾ ಕಂಡು, ಆಶೀರ್ವಾದ…
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಮೈಸೂರಲ್ಲಿ ಸಂಭ್ರಮಾಚರಣೆ
July 6, 2018ಮೈಸೂರು: ಸಮ್ಮಿಶ್ರ ಸರ್ಕಾರ ಚೊಚ್ಚಲ ಬಜೆಟ್ನಲ್ಲಿ ಕರ್ನಾ ಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಅದಕ್ಕೆ 25ಕೋಟಿ ಅನುದಾನ ಮೀಸಲಿಟ್ಟಿರುವುದು ಹಾಗೂ ಶಂಕರಾ ಚಾರ್ಯರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುವುದಕ್ಕೆ ನಿರ್ಧರಿಸಿರುವುದನ್ನು ಸ್ವಾಗತಿಸಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಾರ್ಯಕರ್ತರು ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕ ರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಗುರುವಾರ ಮಂಡಿಸಿದ ಬಜೆಟ್ನಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಆದ್ಯತೆ ನೀಡಿ ಅಭಿವೃದ್ಧಿ ಮಂಡಳಿಯನ್ನು…