ಚಾಮರಾಜನಗರ: ‘ಜಿಲ್ಲೆಯ ಕೊಳ್ಳೇಗಾಲ ಹಾಗೂ ಚಾಮರಾಜನಗರ ನಗರಸಭೆಯ ಎಲ್ಲಾ ವಾರ್ಡ್ಗಳಿಗೂ ಬಿಎಸ್ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ಜಿಲ್ಲಾಧ್ಯಕ್ಷ ಮಾದಪ್ಪ ಹೇಳಿದರು. ನಗರದ ಭಾಗ್ಯಹೋಟಲ್ನ ಸಭಾಂಗಣದಲ್ಲಿ ನಗರಸಭೆ ಚುನಾವಣಾ ಸಂಬಂಧ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಕೊಳ್ಳೇಗಾಲ, ಚಾಮರಾಜ ನಗರದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಚರ್ಚಿಸಲಾ ಯಿತು. ಪ್ರತಿ ವಾರ್ಡ್ಗೂ ಹೆಚ್ಚಿನ ಅಭ್ಯರ್ಥಿಗಳ ಸ್ಪರ್ಧೆ ಮಾಡಲು ಬಂದಿ ದ್ದಾರೆ. ಕಳೆದ ವಿಧಾನಸಭಾ ಚುನಾವಣೆ…
ರಾಜ್ಯದಲ್ಲಿ ಪಕ್ಷ ಬಲಪಡಿಸಲು ಶ್ರಮಿಸುತ್ತೇನೆ: ಹರಿರಾಮ್
July 3, 2018ಚಾಮರಾಜನಗರ: ‘ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಶ್ರಮಿಸಲಾಗುವುದು’ ಎಂದು ಪಕ್ಷದ ನೂತನ ರಾಜ್ಯ ಘಟಕದ ಅಧ್ಯಕ್ಷ ಪ್ರೊ.ಹರಿರಾಮ್ ಹೇಳಿದರು. ನಗರದ ಕೆ.ಸಿ.ರಂಗಯ್ಯ ಹಾಸ್ಟೆಲ್ನ ಪಕ್ಕದಲ್ಲಿರುವ ಸಭಾಂಗಣ ದಲ್ಲಿ ಸೋಮವಾರ ನಡೆದ ಬಹುಜನ ಸಮಾಜ ಪಕ್ಷದ ಜಿಲ್ಲಾ ಸಮಿತಿ ಸಭೆಯಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು. 2017ರ ವಿಧಾನಸಭಾ ಚುನಾವಣೆಯ ನಂತರ ಪಕ್ಷಕ್ಕೆ ಹೊಸ ಉತ್ಸಾಹ, ಹುಮ್ಮಸ್ಸು ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಿದೆ. ಇದಕ್ಕೆ ಜೆಡಿಎಸ್, ಬಿಎಸ್ಪಿ ಮೈತ್ರಿಕಾರಣ ಎಂದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ…
ಸಚಿವರಾದ ಬಳಿಕ ಇದೇ ಮೊದಲ ಬಾರಿ ಮೈಸೂರಿಗೆ ಆಗಮಿಸಿದ ಎನ್. ಮಹೇಶ್
June 14, 2018ಬಿಎಸ್ಪಿ ಮುಖಂಡರಿಂದ ಸ್ವಾಗತ ಮಹನೀಯರ ಪ್ರತಿಮೆಗೆ ಮಾಲಾರ್ಪಣೆ ಮೈಸೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್, ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಬುಧವಾರ ಭೇಟಿ ನೀಡಿ ಡಾ.ಅಂಬೇಡ್ಕರ್ ಪ್ರತಿಮೆ ಸೇರಿದಂತೆ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಮೈಸೂರಿನ ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಬಿಎಸ್ಪಿ ವತಿಯಿಂದ ಸಚಿವ ಎನ್.ಮಹೇಶ್ ಅವರನ್ನು ಬರಮಾಡಿಕೊಳ್ಳಲಾಯಿತು. ಇದೇ ವೇಳೆ ವೃತ್ತದಲ್ಲಿನ ಡಾ.ಅಂಬೇಡ್ಕರ್ ಪ್ರತಿಮೆಗೆ ಸಚಿವರು ಮಾಲಾರ್ಪಣೆ ಮಾಡಿದರು. ಬಳಿಕ ಪುರಭವನದ ಆವರಣದಲ್ಲಿರುವ ಡಾ.ಅಂಬೇಡ್ಕರ್ ನೂತನ ಪ್ರತಿಮೆಗೂ…
ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಎನ್.ಮಹೇಶ್
June 11, 2018ಮಾದರಿ ಕ್ಷೇತ್ರ ನಿರ್ಮಾಣ, ತಿಂಗಳಿಗೊಮ್ಮೆ ಜನ ಸಂಪರ್ಕ ಸಭೆ, ಅಭಿವೃದ್ಧಿ ಕೆಲಸಕ್ಕೆ ಆದ್ಯತೆಯ ಭರವಸೆ ಚಾಮರಾಜನಗರ: ಅಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ದ್ದರು. ಸಭಾಂಗಣದೊಳಗಡೆ ಬಿಎಸ್ಪಿ ಬಾವುಟ ರಾರಾಜಿಸುತ್ತಿತ್ತು. ಎಲ್ಲರ ಬಾಯಿ ಯಲ್ಲೂ ಸಚಿವ ಮಹೇಶ್ ಅವರ ಪರ ಜಯ ಘೋಷಣೆ ಹರಿದಾಡುತ್ತಿತ್ತು. ಈ ವೇಳೆ ವೇದಿಕೆ ಕಾರ್ಯಕ್ರಮ ಆರಂಭವಾಯಿತು. ವೇದಿಕೆಯ ಮಧ್ಯಭಾಗದಲ್ಲಿ ರಾಜ ಸಿಂಹಾ ಸನದಲ್ಲಿ ಕುಳಿತಿದ್ದ ಸಚಿವ ಎನ್.ಮಹೇಶ್ ವೇದಿಕೆ ಮುಂಭಾಗಕ್ಕೆ ಬಂದು ‘ಮತದಾರರೇ ನನ್ನ ದೇವರು’ ಎನ್ನುತ್ತಾ ಮಂಡಿಯೂರಿ ಸಾಷ್ಟಾಂಗ ನಮಸ್ಕಾರ ಮಾಡಿದರು.ತಾಲೂಕಿನ…
ಟಿ.ನರಸೀಪುರದಲ್ಲಿ ಬಿಎಸ್ಪಿ ಕಚೇರಿ ಉದ್ಘಾಟನೆ
June 2, 2018ತಿ.ನರಸೀಪುರ: ಪ್ರಸ್ತುತ ಸಮಾಜವನ್ನು ಚಾರಿತ್ರಿಕ ಜಾಗೃತಿ ಗೊಳಿಸಿ, ಬಹುಜನರನ್ನು ರಾಜಕೀಯ ಎಚ್ಚರಿ ಸುವುದೇ ಬಹುಜನ ಸಮಾಜ ಪಕ್ಷದ ಚಳವಳಿಯ ಪ್ರಮುಖ ಉದ್ದೇಶವಾಗಿದೆ ಎಂದು ಬಿಎಸ್ಪಿ ಕ್ಷೇತ್ರ ಉಸ್ತುವಾರಿ ಹಾಗೂ ಹಿರಿಯ ಮುಖಂಡ ಬಿ.ಆರ್.ಪುಟ್ಟಸ್ವಾಮಿ ಹೇಳಿದರು. ಪಟ್ಟಣದ ಕಾಲೇಜು ರಸ್ತೆಯಲ್ಲಿ ಶುಕ್ರವಾರ ನಡೆದ ಬಹುಜನ ಸಮಾಜ ಪಕ್ಷದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಬುದ್ಧ ರಾಷ್ಟ್ರವಾಗಬೇಕಿದ್ದ ಭಾರತ ದೇಶದ ಹಲವಾರು ಐತಿಹಾಸಿಕ ಘಟನೆಗಳನ್ನು ಮರೆಮಾಚಿರುವ ಮನುವಾದಿ ವ್ಯವಸ್ಥೆ ಬರೀ ಸುಳ್ಳನ್ನೇ ಜನರ ತಲೆಯಲ್ಲಿ ತುಂಬುತ್ತಿದೆ. ಗತಕಾಲದಲ್ಲಿ ಮುಚ್ಚಿ ಹೋಗಿರುವ…
ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ
April 25, 2018ಚಾಮರಾಜನಗರ: ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ) ರಾಜ್ಯ ಕಾರ್ಯದರ್ಶಿ ಹಾಗೂ ಚಾಮರಾಜನಗರ ನಗರ ಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಬಿಎಸ್ಪಿ ತೊರೆದು ಕಾಂಗ್ರೆಸ್ ಸೇರಿದರು. ಸಂಸದ ಆರ್.ಧ್ರುವನಾರಾಯಣ್ ಅವರು ನಂಜುಂಡಸ್ವಾಮಿಗೆ ಪಕ್ಷದ ಶಲ್ಯ ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ್, ಬಿಎಸ್ಪಿ ಪಕ್ಷದಲ್ಲಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಆರ್.ಪಿ.ನಂಜುಂಡಸ್ವಾಮಿ ಇಂದು ಆ ಪಕ್ಷ ತೊರೆದು ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದಾರೆ ಎಂದರು. ಆರ್.ಪಿ.ನಂಜುಂಡಸ್ವಾಮಿ ಮಾತನಾಡಿ, ಕಳೆದ 18 ವರ್ಷಗಳಿಂದ ನಾನು ಬಿಎಸ್ಪಿ ಪಕ್ಷದ…