ಬೆಂಗಳೂರು, ಆ.20(ಕೆಎಂಶಿ)- ಅಧಿಕಾರ ವಹಿಸಿಕೊಂಡ 26 ದಿನಗಳ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ಮಂತ್ರಿಮಂಡಲವನ್ನು ವಿಸ್ತರಿಸಿ, 17 ಮಂದಿಯನ್ನು ಸೇರ್ಪಡೆಮಾಡಿ ಕೊಂಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ನೂತನ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ಉಭಯ ಸದನದ ಸದಸ್ಯರಲ್ಲದವರು ಹಾಗೂ ಪಕ್ಷೇತರ ಶಾಸಕರೊಬ್ಬರು ಸಂಪುಟ ದರ್ಜೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಮುಖ್ಯಮಂತ್ರಿಯಾಗಿ ಹತ್ತು ತಿಂಗಳ ಕಾಲ ಆಡಳಿತ ನಡೆಸಿದ ಜಗದೀಶ್ ಶೆಟ್ಟರ್ ಅವರ ಸಂಪುಟದಲ್ಲಿ…