ಮೈಸೂರು: ಕೇಂದ್ರ ಸರ್ಕಾರ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಆಧುನೀಕರಣದ ಸ್ಪರ್ಶ ನೀಡಲಾಗಿದೆ ಎಂದು ಎಫ್ಕೆಸಿ ಸಿಐ ನಿಕಟಪೂರ್ವ ಅಧ್ಯಕ್ಷ ಸುಧಾಕರ ಎಸ್. ಶೆಟ್ಟಿ ವಿಶ್ಲೇಷಿಸಿದ್ದಾರೆ. ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಒಅಅI), ಪೂಜಾ ಭಾಗವತ ಮೆಮೋರಿಯಲ್ ಮಹಾಜನ ಎಜುಕೇಷನ್ ಸೆಂಟರ್ ಹಾಗೂ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಸಂಯುಕ್ತಾಶ್ರಯದಲ್ಲಿ ಕೆಆರ್ಎಸ್ ರಸ್ತೆಯ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಕೇಂದ್ರ ಬಜೆಟ್-2020’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಹಣಕಾಸು ಮತ್ತು ಬ್ಯಾಂಕಿಂಗ್ ವಲಯದ ಸುಧಾರಣೆಗೆ…