ಗುಂಡ್ಲುಪೇಟೆ: ಸರ್ಕಾರ ರೈತರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿ ಕೊಳ್ಳುವ ಮೂಲಕ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ಪಟ್ಟಣದ ಕೃಷಿ ಇಲಾಖೆಯ ಆವರಣ ದಲ್ಲಿ ಆಯೋಜಿಸಿದ್ದ ಸಮಗ್ರ ಕೃಷಿ ಅಭಿ ಯಾನ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ನೀರಾವರಿ ಮೂಲವಿಲ್ಲದೆ ಮಳೆಯಾಧಾ ರಿತ ಕೃಷಿಯಲ್ಲಿ ತೊಡಗಿರುವ ಬಹುತೇಕ ರೈತರಿಗೆ ವಿವಿಧ ಇಲಾಖೆಗಳಿಂದ ತಮಗೆ ದೊರಕುವ ಸವಲತ್ತುಗಳ ಬಗ್ಗೆ ಅರಿಲ್ಲದೆ ಹಿಂದುಳಿಯುವಂತಾಗಿದೆ. ಆದ್ದರಿಂದ ಇಲಾ ಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರ…
ಬರಗಿ ಬಳಿ ವಿದ್ಯುತ್ ಉಪ ಕೇಂದ್ರ ಲೋಕಾರ್ಪಣೆ
October 31, 2018ಗುಂಡ್ಲುಪೇಟೆ: ನೂತನ ವಿದ್ಯುತ್ ಉಪಕೇಂದ್ರದಿಂದಾಗಿ ಕಾಡಂಚಿನ ಗ್ರಾಮಗಳ ವಿದ್ಯುತ್ ಕೊರತೆ ನೀಗಲಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ತಾಲೂಕಿನ ಬರಗಿ ಗ್ರಾಮದ ಬಳಿ 5.5 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿ ಸಲಾಗಿರುವ ನೂತನ 66 ಕೆವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಈ ಅತ್ಯಾಧುನಿಕ ಉಪಕೇಂದ್ರ ಸ್ಥಾಪನೆಯಿಂದ ಸುತ್ತಲಿನ ಕಾಡಂಚಿನ ಗ್ರಾಮಗಳಾದ ಭೀಮನಬೀಡು, ಕೂತನೂರು, ಬರಗಿ, ಹೊಂಗಹಳ್ಳಿ, ಮೂಖಹಳ್ಳಿ, ಮಂಚಹಳ್ಳಿ, ಮಣಗಳ್ಳಿ, ದೇಶೀಪುರ, ಆಲತ್ತೂರು, ಸಿದ್ದಯ್ಯನಪುರ ಕಾಲೋನಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಈವರೆಗೆ…
ವನವಾಸಿ ಮಂದಿಗೆ ಬಿಲ್ಲುಗಾರಿಕೆ, ಅಥ್ಲೆಟಿಕ್ ಸ್ಪರ್ಧೆ
October 30, 2018ಗುಂಡ್ಲುಪೇಟೆ: ವನವಾಸಿ ಕಲ್ಯಾಣಾಶ್ರಮವು ವನವಾಸಿ ಜನರ ಸಮಗ್ರ ಅಭಿವೃದ್ಧಿ ಮೂಲಕ ರಾಷ್ಟ್ರೀಯ ಭಾವೈಕ್ಯತೆಗೆ ಶ್ರಮಿಸುತ್ತಿದ್ದು, ವನವಾಸಿಗಳು ಇದರ ಸದ್ಬಳಕೆ ಮಾಡಿ ಕೊಳ್ಳಬೇಕು ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂ ಗಣದಲ್ಲಿ ವನವಾಸಿ ಕಲ್ಯಾಣಾಶ್ರಮದ ವತಿಯಿಂದ ಆಯೋಜಿಸಿದ್ದ ವನವಾಸಿ ಜನರ ಬಿಲ್ಲುಗಾರಿಕೆ ಹಾಗೂ ಅಥ್ಲೆಟಿಕ್ ಸ್ಪರ್ಧೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿದ್ದರೂ ಅರಣ್ಯ ಪ್ರದೇಶ ಗಳಲ್ಲಿ ನೆಲೆಸಿರುವ ವನವಾಸಿಗಳನ್ನು ನಗರ ಹಾಗೂ ಗ್ರಾಮವಾಸಿಗಳು ಪ್ರೀತಿ…
ಕಬ್ಬಹಳ್ಳಿ ಕಾಲೇಜಿನಲ್ಲಿ ವಾರ್ಷಿಕ ಸಂಚಿಕೆ ಬಿಡುಗಡೆ
October 5, 2018ಬೇಗೂರು: ಸಮೀಪದ ಕಬ್ಬಹಳ್ಳಿ ಗ್ರಾಮದ ಶ್ರೀ ಮದ್ದಾನೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪಾರಿಜಾತ ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭವನ್ನು ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಉದ್ಟಾಟಿಸಿದರು. ನಂತರ ಮಾತನಾಡಿ, ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಸಮರ್ಪಕವಾದ ಮೂಲಭೂತ ಸೌಲಭ್ಯಗಳು ಇರುವುದಿಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಸೌಲಭ್ಯಗಳು ದೊರಕುವುದು ಕಷ್ಟಕರವಾಗಿರುತ್ತದೆ. ಆದರೆ ನಮ್ಮ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಮುಂದುವರೆದಿದ್ದು ಉತ್ತಮ ರೀತಿಯ ಕಟ್ಟಡಗಳನ್ನು ಹೊಂದಿದೆ. ಗ್ರಾಮೀಣ…
ಕ್ಷೇತ್ರವನ್ನು ಮಾದರಿಯನ್ನಾಗಿಸಲು ಶ್ರಮಿಸುವೆ; ನಿರಂಜನ್ ಕುಮಾರ್
September 23, 2018ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ಧಿ ಬಗ್ಗೆ ಜನತೆ ನನ್ನ ಮೇಲೆ ಬಹಳಷ್ಟು ಭರವಸೆಯಿಟ್ಟುಕೊಂಡಿದ್ದು, ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಕ್ಷೇತ್ರವನ್ನು ಮಾದರಿಯನ್ನಾಗಿಸುತ್ತೇನೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಅಭಿ ನಂದನೆ ಸ್ವೀಕರಿಸಿ ಮಾತನಾಡಿ, ಚುನಾ ವಣೆಯಲ್ಲಿ ಜಯಗಳಿಸಿದ ನಂತರ ತಾವು ಪ್ರತಿ ದಿನವೂ ಕ್ಷೇತ್ರದಲ್ಲಿ ಪ್ರವಾಸ ಮಾಡು ತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹದಗೆ ಟ್ಟಿರುವ ರಸ್ತೆಗಳು, ಮೂಲಸೌಕರ್ಯಗಳ ಕೊರತೆ, ಕಾಡಂಚಿನ ಗ್ರಾಮಗಳಲ್ಲಿ ದಿನ ನಿತ್ಯವೂ ಮಾನವ ವನ್ಯಜೀವಿ ಸಂಘರ್ಷ ಗಳ ಬಗ್ಗೆ ವಿವರ…
ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಲು ತಾಕೀತು
September 19, 2018ಗುಂಡ್ಲುಪೇಟೆ: ಪ್ರಯಾಣಿಕರಿಗೆ ಮೂಲಸೌಕರ್ಯವನ್ನು ಒದಗಿಸುವಂತೆ ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾ ಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಬಸ್ ನಿಲ್ದಾಣದಲ್ಲಿ ಹರಿಯುತ್ತಿದ್ದ ಕೊಳಚೆ ನೀರನ್ನು ಮತ್ತು ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿ ಪ್ರಯಾಣಿಕರಿಗೆ ಮೂಲಸೌಕರ್ಯವನ್ನು ಒದಗಿಸುವುದು ಇಲಾಖೆಯ ಮೊದಲ ಕರ್ತವ್ಯ. ಇದನ್ನು ಅರಿತು ಕ್ರಮವಹಿಸಿ ಎಂದು ಡಿಪೋ ವ್ಯವಸ್ಥಾಪಕ ಜಿ.ಎಂ.ಜಯಕುಮಾರ್ ಅವರಿಗೆ ತಾಕೀತು ಮಾಡಿದರು. ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯದ ಬಗ್ಗೆ ಹಲವು ದೂರುಳಿದ್ದು, ಸಮರ್ಪಕವಾಗಿ…
ಗುಂಡ್ಲುಪೇಟೆ ಸಮಗ್ರ ಅಭಿವೃದ್ಧಿಗೆ ಕ್ರಮ
September 8, 2018ಗುಂಡ್ಲುಪೇಟೆ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಅಳವಡಿಸಿದ್ದ ಬೀದಿದೀಪಗಳು ಮತ್ತು ಹೈಮಾಸ್ಟ್ ದೀಪಗಳಿಗೆ ನೀಡಿ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿಯೇ ಹೆದ್ದಾರಿ ಕಾಮಗಾರಿ ಮುಗಿದಿದ್ದರೂ ಸಹ ತಾಂತ್ರಿಕ ಕಾರಣ ಗಳಿಂದ ಬಳಕೆಗೆ ತರದೆ ಪಟ್ಟಣದ ಹೆದ್ದಾರಿಯು ಕಗ್ಗತ್ತಲಿನಿಂದ ಕೂಡಿತ್ತು. ಇದರಿಂದ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಎದುರಿಸುತ್ತಿದ್ದರು. ಪಟ್ಟಣದ ಸಮಗ್ರ ಅಭಿವೃದ್ಧಿಗೆ…
ದಾನ ಧರ್ಮಕ್ಕೆ ಗುಂಡ್ಲುಪೇಟೆ ಪ್ರಸಿದ್ಧ
August 4, 2018ಗುಂಡ್ಲುಪೇಟೆ: ಹಿಂದಿನಿಂದಲೂ ತಾಲೂಕಿನಲ್ಲಿ ಹೆಚ್ಚಿನ ದಾನಿಗಳು ಸಾರ್ವಜನಿಕರಿಗೆ ಉಪಯೋಗವಾಗುವಂತಹ ರೀತಿಯಲ್ಲಿ ದಾನ ಧರ್ಮದ ಕಾರ್ಯಗಳನ್ನು ಮಾಡಿ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಶಾಸಕ ಸಿ.ಎಸ್. ನಿರಂಜನ್ಕುಮಾರ್ ಹೇಳಿದರು. ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಆವ ರಣದಲ್ಲಿ ನಿರ್ಮಾಣವಾಗಿರುವ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಸ್ಮರಣಾ ರ್ಥವಾಗಿ ಪ್ರಸಾದ್ ಕುಟುಂಬದವರು ನಿರ್ಮಿಸಿದ ಸಭಾಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಮುಂತಾದ ಸಾರ್ವಜನಿಕರಿಗೆ ಉಪ ಯೋಗವಾಗುವ ರೀತಿಯಲ್ಲಿ ದಾನ ಮಾಡುವ ದಾನಿಗಳನ್ನು ನೆನೆಯಬೇಕು….
ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ
July 30, 2018ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನವಾದ ಬಂಡೀ ಪುರವು ಅತಿ ಹೆಚ್ಚು ಹುಲಿಗಳನ್ನು ಹೊಂದುವುದರೊಂದಿಗೆ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಶಾಸಕ ಸಿ.ಎಸ್.ನಿರಂ ಜನಕುಮಾರ್ ಹೇಳಿದರು. ತಾಲೂಕಿನ ಬಂಡೀಪುರದಲ್ಲಿ ಏರ್ಪ ಡಿಸಲಾಗಿದ್ದ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಮತ್ತು ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕರ್ನಾಟಕದಲ್ಲಿ ಸುಮಾರು 406 ಹುಲಿ ಇದೆ. ಅದರಲ್ಲೂ ಬಂಡೀಪುರದಲ್ಲಿ 139 ಹುಲಿಗಳು ಇರುವುದು ಹುಲಿ ಗಣತಿಯಲ್ಲಿ ಸಾಬೀತಾಗಿದೆ. ಇದು ನಾಡಿನ ಹೆಮ್ಮೆಯಾಗಿದೆ ಎಂದರು. ಇತ್ತೀಚಿಗೆ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಉತ್ತಮವಾದ ಮಳೆಯಾಗಿದ್ದು,…
ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಶಾಸಕ
July 23, 2018ಗುಂಡ್ಲುಪೇಟೆ: ‘ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯಿಟ್ಟು ಸತತ ಸಾಧನೆ ಮಾಡಿದರೆ ಉನ್ನತ ಸ್ಥಾನಗಳಿ ಸಲು ಸಾಧ್ಯವಾಗುತ್ತದೆ’ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದ ಗುರುಭವನದಲ್ಲಿ ಮೇರು ವಿದ್ಯಾ ಸಂಸ್ಥೆ ಹಾಗೂ ಸಂಕಲ್ಪ ಶಿಕ್ಷಕರ ವೇದಿಕೆ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಸಂಪನ್ಮೂಲವಿಲ್ಲದ ತಾಲೂ ಕಿನ ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ದೊಡ್ಡ ಕನಸನ್ನು ಕಾಣುವ ಮೂಲಕ ಉನ್ನತ ಗುರಿ ತಲುಪಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಹಾಗೂ…