ಗುಂಡ್ಲುಪೇಟೆ: ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ ಕುಮಾರ್ ಶುಕ್ರವಾರ ಮುಂಜಾನೆ ತುಮ ಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮಿಗಳಿಂದ ಆಶೀ ರ್ವಾದ ಪಡೆದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಸಭಾ ಅಧಿವೇಶನದಲ್ಲಿ ಭಾಗವಹಿಸಿದ್ದ ಶಾಸಕ ಸಿ.ಎಸ್.ನಿರಂಜನ್ಕುಮಾರ್ ಮುಂಜಾನೆ ಸಿದ್ದಗಂಗಾ ಮಠಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ನಂತರ ಶ್ರೀಗಳನ್ನು ಭೇಟಿ ಮಾಡಿ ಆಶೀ ರ್ವಾದ ಪಡೆದುಕೊಂಡರು.
ಹುತ್ತೂರು ಕೆರೆಗೆ ನೀರು ತುಂಬಿಸುವ ಕಾಮಗಾರಿ ಪರಶೀಲನೆ
June 25, 2018ಗುಂಡ್ಲುಪೇಟೆ: ತಾಲೂಕಿನ ಹುತ್ತೂರು ಕೆರೆಗೆ ಶಾಸಕ ಸಿ.ಎಸ್. ನಿರಂಜನಕುಮಾರ್ ಭೇಟಿ ನೀಡಿ ಕೆರೆ ಗಳಿಗೆ ನದಿ ಮೂಲದಿಂದ ನೀರು ತುಂಬಿ ಸುವ ಕಾಮಗಾರಿಯನ್ನು ಪರಿಶೀಲಿಸಿದರು. ತಾಲೂಕಿನ ಹುತ್ತೂರು ಕೆರೆಯಿಂದ ಸಮೀ ಪದ ವಡ್ಡಗೆರೆ ಕೆರೆಗೆ ನೀರೆತ್ತಲು ಪಂಪ್ ಹೌಸ್ ನಿರ್ಮಾಣ ಹಾಗೂ ಪೈಪ್ ಲೈನ್ ಕಾಮಗಾರಿಗಳ ಬಗ್ಗೆ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ರಾಜೇಂದ್ರಪ್ರಸಾದ್ ಅವರಿಂದ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ನಿರಂಜನಕುಮಾರ್, ಹುತ್ತೂರು ಕೆರೆ ಯಿಂದ ವಡ್ಡಗೆರೆಕೆರೆಗೆ ಮಾತ್ರ ಪೈಪ್ ಲೈನ್ ಅಳವಡಿಸಿ…
ಬಸವ ತತ್ವ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಟ
June 20, 2018ಗುಂಡ್ಲುಪೇಟೆ: ಮಾನವೀಯ ಮೌಲ್ಯ ಹಾಗೂ ಸಮಾನತೆಯನ್ನು ಸಾರಿದ ಬಸವ ತತ್ವ ವಿಶ್ವ ದಲ್ಲಿಯೇ ಅತ್ಯಂತ ಶ್ರೇಷ್ಠವಾಗಿದ್ದು, ಇದರ ಅನುಕರಣೆಯಿಂದ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ಸೋಮಹಳ್ಳಿ ವೀರಸಿಂಹಾಸನ ಶಿಲಾಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಪ್ಪ ಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶಿವಾ ನುಭವ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜ್ಜಳ ಮಹಾರಾಜನ ಆಸ್ಥಾನದಲ್ಲಿ ಮಂತ್ರಿಯಾಗಿ ದ್ದರೂ ಸಹಾ ಅಧಿಕಾರ ದುರುಪಯೋಗ ಮಾಡಿಕೊಳ್ಳದೆ, ಸರ್ಕಾರದ ಬೊಕ್ಕಸದ ಹಣವನ್ನು ಬಳಸದೆಯೇ ಕಾಯಕದ ಮೂಲಕ ಸ್ವಯಾರ್ಜಿತವಾಗಿ ಗಳಿಸಿದ ಹಣದಿಂದ ಧಾರ್ಮಿಕ,…
ರಾಸುಗಳಿಗೆ ಲಸಿಕೆ ಹಾಕಿಸಲು ಸೂಚನೆ
June 2, 2018ಗುಂಡ್ಲುಪೇಟೆ: ಜಾನುವಾರು ಮಾಲೀಕರು ತಮ್ಮ ರಾಸುಗಳಿಗೆ ಕಾಲಕಾಲಕ್ಕೆ ರೋಗ ನಿರೋ ಧಕ ಲಸಿಕೆ ಹಾಕಿಸುವಂತೆ ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕಿನ ಶ್ಯಾನಾಡ್ರಹಳ್ಳಿ ಗ್ರಾಮದಲ್ಲಿ ಪಶುವೈದ್ಯಕೀಯ ಇಲಾಖೆಯ ವತಿ ಯಿಂದ ಅಯೋಜಿಸಿದ್ದ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತ, ಎಲ್ಲಾ ರೈತರು ಹಾಗೂ ಜಾನುವಾರು ಮಾಲೀ ಕರು ತಮ್ಮ ರಾಸುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು. ಹೆಚ್ಚಿನ ಬೆಲೆ ಕೊಟ್ಟು ಖರೀದಿಸುವುದರಿಂದ ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ರೋಗಗಳಿಂದ ರಾಸುಗಳು ಸಾವಿಗೀಡಾ ದರೆ ಅದರಿಂದ…
ಗುಂಡ್ಲುಪೇಟೆ ಸಾರಿಗೆ ಬಸ್ ನಿಲ್ದಾಣ ಪರಿಶೀಲಿಸಿದ ಶಾಸಕ ನಿರಂಜನ್
June 1, 2018ಗುಂಡ್ಲುಪೇಟೆ: ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಹಾಗೂ ಡಿಪೋಗೆ ಶಾಸಕ ಸಿ.ಎಸ್.ನಿರಂಜನಕುಮಾರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಸಾರಿಗೆ ಬಸ್ನಿಲ್ದಾಣದಲ್ಲಿ ಮತ್ತು ಡಿಪೋ ಒಳಗಡೆ ಸಿಬ್ಬಂದಿ ವಾಹನ ನಿಲುಗಡೆ ಸ್ಥಳದಲ್ಲಿ ಮಳೆ ನೀರು ನಿಂತು ತೇಗದ ಮರಗಳು ನೆಲಕ್ಕೆ ಬೀಳುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಬಹಳ ವರ್ಷಗಳಿಂದ ಪಟ್ಟಣದಿಂದ ಕೊಯಮತ್ತೂರಿಗೆ ಸಂಚರಿಸುತ್ತಿದ್ದ ಬಸ್ ಮಾರ್ಗ ಕೂಡಲೇ ಪ್ರಾರಂಭಿಸಲು ಸೂಚನೆ…
ಬೇಗೂರಿನಲ್ಲಿ ಶಾಸಕ ನಿರಂಜನ್ಗೆ ಸನ್ಮಾನ
June 1, 2018ಬೇಗೂರು: ಶಾಸಕರಾಗಿ ಆಯ್ಕೆಯಾದ ನಂತರ ಆಗಮಿಸಿದ ಸಿ.ಎಸ್. ನಿರಂಜನ್ಕುಮಾರ್ರವರನ್ನು ಬಿಜೆಪಿ ಕಾರ್ಯಕರ್ತರು ಇಂದಿಲ್ಲಿ ಶಾಲು ಹೊದಿಸಿ ಸನ್ಮಾನಿಸಿಬರಮಾಡಿಕೊಂಡರು. ಮೊದಲು ರಾಷ್ಟ್ರೀಯ ಹೆದ್ದಾರಿ 766 ಹಿರೀಕಾಟಿಗೇಟ್ನ ಬಳಿ ಶಾಲು ಹೊದಿಸಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಬೇಗೂರು ಬಸ್ ನಿಲ್ದಾಣದ ಬಳಿ ಸಮಾವೇಶಗೊಂಡ ಬಿಜೆಪಿ ಕಾರ್ಯ ಕರ್ತರು ನೂತನ ಶಾಸಕರನ್ನು ಹಾರಹಾಕಿ ಬರಮಾಡಿಕೊಂಡರು ಹಾಗೂ ಗ್ರಾಮದ ಶ್ರೀರಾಮ ಮಂದಿರದವರೆಗೆ ಮೆರವಣ ಗೆಯಲ್ಲಿ ತೆರಳಿ ನಂತರ ಗುಂಡ್ಲುಪೇಟೆಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನಸ್ವಾಮಿಹಿರೇಮಠ್, ಕಮರ ಹಳ್ಳಿರವಿ, ಹೊರೆಯಾಲಕೃಷ್ಣ, ದೊಡ್ಡಹುಂಡಿ ಜಗದೀಶ್,…
ಭೀಮನಬೀಡುನಲ್ಲಿ ನಿರಂಜನ್ಕುಮಾರ್ ಮತ ಯಾಚನೆ
May 1, 2018ಗುಂಡ್ಲುಪೇಟೆ: ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್. ನಿರಂಜನ್ ಕುಮಾರ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು. ನಂತರ ಮಾತನಾಡಿ, ಪ್ರತಿ ವರ್ಷವೂ ಮಳೆಯ ಪ್ರಮಾಣ ಇಳಿಮುಖವಾಗು ತ್ತಿದ್ದು, ರೈತಾಪಿ ವರ್ಗದವರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಜೀವನೋ ಪಾಯಕ್ಕಾಗಿ ಹೈನುಗಾರಿಕೆಯನ್ನು ಅವ ಲಂಬಿಸಿದ್ದರೂ ನಿರ್ವಹಣೆ ಸಾಧ್ಯವಾ ಗುತ್ತಿಲ್ಲ. ಕೃಷಿ ಚಟುವಟಿಕೆಗೆಳು ಕಡಿಮೆ ಯಾದ್ದರಿಂದ ಕಾರ್ಮಿಕರು ನೆರೆರಾಜ್ಯ ಗಳಿಗೆ ವಲಸೆ ತೆರಳುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರೂ ಸಮಸ್ಯೆ ಬಗೆಹರಿಸಿಲ್ಲ. ಇದರಿಂದ ಮಹಿಳೆಯರು ತಮ್ಮ ದೈನಂದಿನ ಕಾರ್ಯಗಳೊಂದಿಗೆ ದೂರದ…
ಸೌಲಭ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ವಿಫಲ
April 27, 2018ಗುಂಡ್ಲುಪೇಟೆ: ಕಳೆದ ಇಪ್ಪತ್ತೈದು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ನಡೆಸಿದವರು ಸಾಮಾನ್ಯ ಜನತೆಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಆರೋಪಿಸಿದರು. ತಾಲೂಕಿನ ಕೆಲಸೂರು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ದೇಶಿಸಿ ಮಾತನಾಡುತ್ತ, ಈಗಾಗಲೇ ಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ದಿಪಡಿಸಿರುವುದಾಗಿ ಹೇಳಿಕೊಳ್ಳುತ್ತಿರುವ ಸಚಿವರಿಗೆ ತಾಲೂಕಿನ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅವ್ಯವಸ್ಥೆ ಕಣ ್ಣಗೆ ಬಿದ್ದಿಲ್ಲ ಎನಿಸುತ್ತದೆ ಎಂದರು. ಕೇವಲ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡಿದರೆ ಬಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಆದಂತೆ ಎಂದು ಭಾವಿಸಿದ್ದಾರೆ. ಬಹುತೇಕ…
ಬಿಜೆಪಿಗೆ ಅಧಿಕಾರ ಶತಸಿದ್ಧ: ಶ್ರೀರಾಮುಲು
April 25, 2018ಗುಂಡ್ಲುಪೇಟೆ: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಸಂಸದ ಶ್ರೀರಾಮುಲು ಹೇಳಿದರು. ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 36 ವರ್ಷಗಳಿಂದ ತಳವಾರ ಮತ್ತು ಪರಿವಾರ ಸಮುದಾಯ ಅನುಭವಿಸುತ್ತಿದ್ದ ಕಷ್ಟವನ್ನು ಅರಿತು ಈ ಸಮುದಾಯವನ್ನು ಎಸ್ಟಿಗೆ ಸೇರಿಸುವುದರೊಂದಿಗೆ ಕೇಂದ್ರ ಸರ್ಕಾರ ಅನುಕೂಲವನ್ನು ಮಾಡಿಕೊಟ್ಟಿದೆ. ಇದಕ್ಕೆ ನಾವು ಚಿರಋಣ ಯಾಗಿರಬೇಕು ಎಂದರು. ಕ್ಷೇತ್ರದಲ್ಲಿರುವ ನಾಯಕ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಬಿ.ಜೆ.ಪಿ.ಯ ಪರವಾಗಿ ತಮ್ಮ ಒಲವನ್ನು ತೋರುತ್ತಿದ್ದು,…