ವೀರಾಜಪೇಟೆ, ಡಿ.16- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಸಂವಿಧಾನ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ಗಡಿಯಾರ ಕಂಬದ ಬಳಿಯಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾ ಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪೌರತ್ವ ಮಸೂದೆ ವಿರೋಧಿಸಿ ಸಂವಿಧಾನಿಕ ಮೌಲ್ಯ ಗಳನ್ನು ಎತ್ತಿ ಹಿಡಿಯಬೇಕೆಂದು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ಜಿಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್ ಮಾತನಾಡಿ, ದೇಶದಲ್ಲಿ ಯಾವ ರೀತಿಯಲ್ಲಿ ನಾವುಗಳು ಜೀವಿಸಬೇಕು…